Rajinikanth: ರಸ್ತೆ ಬದಿ ಸಾಮಾನ್ಯರಂತೆ ಊಟ ಸವಿದ ರಜನಿಕಾಂತ್, ಸೂಪರ್ಸ್ಟಾರ್ ಸಿಂಪ್ಲಿಸಿಟಿಗೆ ಫಿದಾ
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ. ಒಂದು ಸಿನಿಮಾ ನೂರಾರು ಕೋಟಿ ಸಂಭಾವನೆ ಪಡೆಯುವ ರಜನಿಕಾಂತ್ ಅವರು ಸರಳತೆಗೂ ಹೆಸರುವಾಸಿ. ಈಗೆಲ್ಲ ಒಂದೆರಡು ಸಿನಿಮಾಗಳಲ್ಲಿ ಕಾಣಿಸಿಕೊಂಡ ನಟರು ತಮ್ಮ ರೇಂಜ್ ತೋರಿಸುವುದು ಹೆಚ್ಚು. ನಾನು ಸೆಲೆಬ್ರಿಟಿ ಎನ್ನುವ ಅಹಂ ಸ್ವಲ್ಪವಾದರೂ ಇದ್ದೇ ಇರುತ್ತೆ. ಆದರೆ ರಜನಿಕಾಂತ್ ಅವರು ಇಂತವರಿಗೆ ಮಾದರಿಯಾಗಿದ್ದಾರೆ. ಕೋಟಿ ಕೋಟಿ ಆಸ್ತಿಯೊಂದಿಗೆ ಟಾಪ್ ನಟನಾಗಿದ್ದರೂ ರಸ್ತೆ ಬದಿ ಸಾಮಾನ್ಯರಂತೆ ನಿಂತು ಊಟ ಸವಿಯುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಇತ್ತೀಚೆಗೆ ತೆರೆಕಂಡ ರಜನಿಕಾಂತ್ ನಟನೆಯ "ಕೂಲಿ" ಸಿನಿಮಾ ಸಕ್ಸಸ್ ಕಂಡಿತ್ತು. ಸಿನಿಮಾಗಳಿಂದ ಬಿಡುವು ಪಡೆದುಕೊಂಡು ಅವರು ತಮ್ಮ ಆಪ್ತ ಸ್ನೇಹಿತರೊಂದಿಗೆ ಹಿಮಾಲಯದಲ್ಲಿ ಆಧ್ಯಾತ್ಮಿಕ ಪ್ರಯಾಣ ಕೈಗೊಳ್ಳುತ್ತಿದ್ದಾರೆ. ಋಷಿಕೇಶಕ್ಕೆ ತೆರಳಿರುವ ರಜನಿಕಾಂತ್ ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಒಂದು ಫೋಟೋದಲ್ಲಿ ರಜನಿಕಾಂತ್ ರಸ್ತೆಬದಿಯಲ್ಲಿ ಎಲೆಯ ತಟ್ಟೆಯಲ್ಲಿ ಬಡಿಸಿದ ಸಾಧಾರಣ ಊಟವನ್ನು ಸೇವಿಸುತ್ತಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿ ಅಂದ ಕೂಡಲೇ ಸುತ್ತಲೂ ಹತ್ತಾರು ಮಂದಿ, ಬಿಸಿಲಿಗೆ ತಾಗದಂತೆ ಎಸಿ ವ್ಯವಸ್ಥೆ, ಐಷಾರಾಮಿ ಊಟ ಎಲ್ಲವೂ ಇರುತ್ತದೆ. ಆದರೆ ರಜನಿಕಾಂತ್ ಅವರು ಕುಬೇರ ಸೆಲೆಬ್ರಿಟಿಯಾದರೂ ಕೊಂಚವೂ ಹಮ್ಮು-ಬಿಮ್ಮು ಇಲ್ಲದೆ ಸರಳತೆ ಪ್ರದರ್ಶಿಸಿದ್ದಾರೆ. ಋಷಿಕೇಶದ ರಸ್ತೆಯ ಪಕ್ಕ ಯಾರೋ ಸಾಮಾನ್ಯರು ಎನ್ನುವಂತೆ ಎಲೆಯ ತಟ್ಟೆಯಲ್ಲಿ ಆಹಾರ ಸವಿದಿದ್ದಾರೆ. ಕೂರಲು ಕುರ್ಚಿಯೂ ಇಲ್ಲದೆ ನಿಂತೇ ಊಟ ಮಾಡಿದ್ದಾರೆ.
ಇನ್ನೊಂದು ಫೋಟೋದಲ್ಲಿ ರಜನಿಕಾಂತ್ ಅವರು ಸರಳವಾದ ಬಿಳಿ ಬಟ್ಟೆಗಳನ್ನು ಧರಿಸಿ, ಆಶ್ರಮದಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ಮಾತನಾಡಿದ್ದಾರೆ. ಒಬ್ಬ ಅರ್ಚಕನಿಗೆ ಗೌರವ ಸಲ್ಲಿಸುತ್ತಿರುವುದನ್ನು ತೋರಿಸಲಾಗಿದೆ. ಈ ಫೋಟೋಗಳು ವೈರಲ್ ಆಗಿದ್ದು, ರಜನಿ ಅವರ ಸರಳತೆಯನ್ನು ಮೆಚ್ಚಿದ್ದಾರೆ.
ರಜನಿಕಾಂತ್ ಋಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿರುವ ಅವರು ಸ್ವಾಮಿ ದಯಾನಂದರಿಗೆ ಗೌರವ ಸಲ್ಲಿಸಿ, ಗಂಗಾ ನದಿಯ ದಡದಲ್ಲಿ ಧ್ಯಾನ ಮಾಡಿದ್ದಾರೆ. ಸಾಂಪ್ರದಾಯಿಕ ಹಿಂದೂ ಆಚರಣೆಯಾದ ಗಂಗಾ ಆರತಿಯಲ್ಲಿಯೂ ಭಾಗವಹಿಸಿದ್ದಾರೆ. ನಂತರ ಅವರು ಭಾನುವಾರ ದ್ವಾರಾಹತ್ಗೆ ಪ್ರಯಾಣ ಬೆಳೆಸಿ ತಮ್ಮ ಆಧ್ಯಾತ್ಮಿಕ ಕಾರ್ಯಗಳನ್ನು ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ಫೋಟೋಗಳಿಗೆ "ಸೂಪರ್ ಸ್ಟಾರ್-ಸಿಂಪಲ್ ಸ್ಟಾರ್" ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ರಜನಿಕಾಂತ್ ಅವರ ಸರಳತೆ ನಿಜಕ್ಕೂ ಅದ್ಭುತ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ಫೋಟೋಗಳು ಅವರು ಪ್ರಸ್ತುತ ಮಾಡುತ್ತಿರುವ ಧಾರ್ಮಿಕ ತೀರ್ಥಯಾತ್ರೆಯದ್ದು ಎಂದು ಹೇಳಲಾಗಿದೆ. ಇಂದಿನ ನಟರು ತಲೆ ಕೂದಲಿಗೆ ದುಬಾರಿ ವಿಗ್, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಸ್ಟೈಲಿಶ್ ನೋಟಕ್ಕಾಗಿ ಹಣ ಖರ್ಚು ಮಾಡುತ್ತಾರೆ. ಆದರೆ ರಜನಿಕಾಂತ್ ಇದ್ಯಾವುದನ್ನೂ ಮಾಡುವವರಲ್ಲ. ಸಿಂಪ್ಲಿಸಿಟಿಗೆ ಅವರೇ ನಿಜವಾದ ಸ್ಟಾರ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
-
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Viral Video: ಕಡಿಮೆ ಹಣದಲ್ಲಿ ಬದುಕೋದು ಹೇಗೆ ? ಬೆಂಗಳೂರು ಇಂಟರ್ನ್ ಹೇಳಿದ ಟ್ರಿಕ್ಗಳು -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
Kiara Advani: ವಿಜಯ್ ದೇವರಕೊಂಡ ಮೇಲೆ ಕಿಯಾರಾ ಅಡ್ವಾಣಿಗೆ ಕ್ರಶ್: ರಾಣಾ ಶೋನಲ್ಲಿ ಬಹಿರಂಗವಾದ ಹಳೆಯ ರಹಸ್ಯ, ವೈರಲ್ -
Amruthadhare Serial: ಟ್ವಿಸ್ಟ್ ಮೇಲೆ ಟ್ವಿಸ್ಟ್: ಮಲ್ಲಿ ಮದುವೆ ಬಳಿಕ ಹೊಸ ತಿರುವು, ಜೆಡಿ ಪ್ಲ್ಯಾನ್ಗೆ ಸುನೀಲ್ ವಿಲನ್ -
Property: ಆಸ್ತಿದಾರರಿಗೆ 2026 ವರ್ಷ ಅದೃಷ್ಟ: ರಿಯಲ್ ಎಸ್ಟೇಟ್ನಲ್ಲಿ ಹೊಸ ಸಂಚಲನ, ಮನೆ ಮಾರಾಟ ಭರ್ಜರಿ ಹೆಚ್ಚಳ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ












Click it and Unblock the Notifications