Rakshit Shetty: ಮೈಸೂರಿನಿಂದ ದಿಢೀರ್ ಆಗಿ ಲೈವ್ ಬಂದ ರಕ್ಷಿತ್ ಶೆಟ್ಟಿ; ಕಾರಣವೇನು?
ನಟ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾ ದೇಶ, ವಿದೇಶಗಳಲ್ಲಿ ಬಿಡುಗಡೆಯಾಗುತ್ತಿದ್ದು, ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ಜಪಾನ್ನಲ್ಲಿ ಕೂಡ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
ಸಿನಿಮಾದಲ್ಲಿ ಚಾರ್ಲಿ ಪಾತ್ರ ಮಾಡಿದ್ದ ನಾಯಿ ಈಗ 6 ಮರಿಗಳಿಗೆ ಜನ್ಮ ನೀಡಿದ್ದು, ರಕ್ಷಿತ್ ಶೆಟ್ಟಿ ಇನ್ಸ್ಟಾಗ್ರಾಂನಲ್ಲಿ ಲೈವ್ ಬಂದು ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಲೈವ್ಗೆ ಬಂದ ಅವರು, ಮೈಸೂರಿನಲ್ಲಿದ್ದು, ಚಾರ್ಲಿ ಆರು ಮುದ್ದಾದ ಮರಿಗಳಿಗೆ ಜನ್ಮ ನೀಡಿದ್ದು, ಅವನ್ನು ನೋಡಲು ಬಂದಿದ್ದೇನೆ ಎಂದು ಖುಷಿ ಹಂಚಿಕೊಂಡಿದ್ದಾರೆ.
ಈಡೇರಿದ ಚಿತ್ರತಂಡದ ಆಸೆ
ಚಾರ್ಲಿ ಮರಿಗಳಿಗೆ ಜನ್ಮ ನೀಡಬೇಕು ಎನ್ನುವುದು ಆಸೆಯಾಗಿತ್ತು, ಆದರೆ ವಯಸ್ಸಾಗಿದೆ ಎಂದು "777 ಚಾರ್ಲಿ ಸಿನಿಮಾ ಬಿಡುಗಡೆಯಾಗಿ 2 ವರ್ಷ ಆಗುತ್ತಾ ಬಂದಿದೆ, ಸಿನಿಮಾ ಬಿಡುಗಡೆಯಾದಾಗಿನಿಂದ ಚಾರ್ಲಿ ತಾಯಿಯಾದರೆ, ಈ ಪ್ರಯಾಣ ಸಾರ್ಥಕವಾಗುತ್ತದೆ ಅನಿಸಿತ್ತು. ಇಡೀ ಸಿನಿಮಾ ತಂಡಕ್ಕೆ ಈ ಆಸೆ ಇತ್ತು."
ನಿರ್ದೇಶಕ ಕಿರಣ್ ರಾಜ್ ಅವರು ಇದನ್ನು ಹೇಳಿದ್ದರು, ನಾನು ಕೂಡ ಚಾರ್ಲಿ ತಾಯಿಯಾಗಲಿ ಎಂದು ತುಂಬಾ ದಿನದಿಂದ ಕಾಯುತ್ತಿದ್ದೆ. ಚಾರ್ಲಿ ಮೈಸೂರಿನಲ್ಲಿ ಪ್ರಮೋದ್ ಜೊತೆ ಇದ್ದು, ನಾನು ಪ್ರಮೋದ್ ಅವರಿಗೆ ಕರೆ ಮಾಡಿದಾಗೆಲ್ಲಾ ಈ ಬಗ್ಗೆ ಕೇಳುತ್ತಿದ್ದೆ, ಆದರೆ ಚಾರ್ಲಿಗೆ ವಯಸ್ಸಾಗಿದೆ ಎಂದು ಹೇಳುತ್ತಿದ್ದರು ಎಂದಿದ್ದಾರೆ.
ಈಗ ಚಾರ್ಲಿ ಆರು ಮುದ್ದಾದ ಮರಿಗಳಿಗೆ ಜನ್ಮ ನೀಡಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ. ಚಾರ್ಲಿಯನ್ನು ನೋಡಲು ರಕ್ಷಿತ್ ಶೆಟ್ಟಿ ಮೈಸೂರಿನ ಪ್ರಮೋದ್ ಅವರ ಮನೆಗೆ ಭೇಟಿ ಕೊಟ್ಟಿದ್ದು, ಅಲ್ಲಿಂದಲೇ ಲೈವ್ ಮಾಡಿ, ಚಾರ್ಲಿ ಮತ್ತು ಮರಿಗಳನ್ನು ತೋರಿಸಿದ್ದಾರೆ.
ಚಾರ್ಲಿ ಸಿನಿಮಾಗೆ ಸಾಕಷ್ಟು ಪ್ರೀತಿ ಸಿಕ್ಕಿದೆ, ವಿಶೇಷವಾಗಿ ಮಕ್ಕಳು ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಅವರಿಗೆ ಈ ವಿಚಾರ ತಿಳಿಸಬೇಕು ಎನ್ನಿಸಿತು ಅದಕ್ಕಾಗಿ ಲೈವ್ಗೆ ಬಂದೆ ಎಂದು ಹೇಳಿದ್ದಾರೆ.
ರಿಚರ್ಡ್ ಆಂಟನಿಗೆ ಸಿದ್ಧತೆ
ಚಾರ್ಲಿ ಸಿನಿಮಾ ಬಳಿಕ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿಸಿದ್ದ ರಕ್ಷಿತ್ ಶೆಟ್ಟಿ ಸದ್ಯ ತಮ್ಮದೇ ನಿರ್ದೇಶನದ ರಿಚರ್ಡ್ ಆಂಟನಿ ಸಿನಿಮಾಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಉಳಿದವರು ಕಂಡಂತೆ ಸಿನಿಮಾದ ಪ್ರೀಕ್ವೆಲ್ ಎಂದು ಹೇಳಲಾಗಿದ್ದು, ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿದೆ. ಕೆಜಿಎಫ್, ಕಾಂತಾರದಂತಹ ದೊಡ್ಡ ಸಿನಿಮಾಗೆ ಬಂಡವಾಳ ಹೂಡಿದ್ದ ಹೊಂಬಾಳೆ ಫಿಲಂಸ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications