Get Updates
Get notified of breaking news, exclusive insights, and must-see stories!

ರಿಷಬ್ ಶೆಟ್ಟಿ ನಟನೆಯ ಕಾಂತಾರ-1 ದೈವ ಅಣಕಿಸಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್‌

Ranveer Singh Kantara Controversy: ರಿಷಬ್ ಶೆಟ್ಟಿ ನಟನೆಯ ಕಾಂತಾರ-1ರಲ್ಲಿನ ದೈವದ ದೃಶ್ಯವನ್ನು ಅನುಕರಿಸಿದ ಆರೋಪದ ಮೇಲೆ ಬಾಲಿವುಡ್ ನಟ ರಣ್‌ವೀರ್ ಸಿಂಗ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಗೋವಾ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಎದುರೇ ದೈವಕ್ಕೆ ಅವಮಾನ ಮಾಡಿದ್ದಾರೆ ಎಂದು ವಕೀಲರೊಬ್ಬರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಗೋವಾದಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂದರ್ಭದಲ್ಲಿ ನಟ ರಣವೀರ್ ಸಿಂಗ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ದೈವ ಸಂಪ್ರದಾಯಕ್ಕೆ ಸಂಬಂಧಿಸಿದ ಹೇಳಿಕೆಗಳು ಮತ್ತು ಅನುಕರಣೆ ಆರೋಪದ ಮೇಲೆ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Ranveer Singh Kantara Controversy Fined for Mimicking Chavundi Scene at IFFI 2025

ಹಲವು ಸೆಕ್ಸ್‌ನ್‌ಗಳ ಅಡಿಯಲ್ಲಿ ದೂರು ದಾಖಲು: ಮಾಹಿತಿ ಪ್ರಕಾರ, ಸೆಕ್ಷನ್ 196 (ಧಾರ್ಮಿಕ ಭಾವನೆಗೆ ಧಕ್ಕೆ), ಸೆಕ್ಷನ್ 299 (ಧಾರ್ಮಿಕ ಭಾವನೆ ಕೆರಳಿಸುವ ಕೃತ್ಯ) ಮತ್ತು ಸೆಕ್ಷನ್ 302 (ಇತರರ ಧಾರ್ಮಿಕ ಭಾವನೆ ನೋಯಿಸುವುದು) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಗೋವಾ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದ ವೇಳೆ, ರಣವೀರ್ ಸಿಂಗ್ ಅವರು ದೈವ ಸಂಸ್ಕೃತಿಗೆ ಸಂಬಂಧಿಸಿದಂತೆ ಅವಹೇಳನಕಾರಿ ರೀತಿಯಲ್ಲಿ ವರ್ತಿಸಿದ್ದಾರೆ ಎಂಬ ಆರೋಪ ಮಾಡಲಾಗಿದೆ.

ದೂರಿನಲ್ಲಿ ಏನಿದೆ?: ವಿಶೇಷವಾಗಿ, ಕಾಂತಾರಾ ಚಿತ್ರದ ಚಾವುಂಡಿ ದೈವದ ದೃಶ್ಯವನ್ನು ಅನುಕರಿಸುವ ಸಂದರ್ಭದಲ್ಲೇ, ಚಾವುಂಡಿ ದೇವರನ್ನು "ಫೀಮೇಲ್ ಗೋಸ್ಟ್" ಎಂದು ಉಲ್ಲೇಖಿಸಿ ಮಾತನಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಹೇಳಿಕೆ ರಿಷಬ್ ಶೆಟ್ಟಿ ಅವರ ಎದುರಲ್ಲೇ ನಡೆದಿದ್ದು, ಇದರಿಂದ ದೈವ ಪರಂಪರೆಯನ್ನು ನಂಬುವ ಜನರ ಭಾವನೆಗಳಿಗೆ ಗಂಭೀರ ನೋವುಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಹಲವರು ರಣವೀರ್ ಸಿಂಗ್ ಅವರ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ದೈವ ಸಂಸ್ಕೃತಿ ಮತ್ತು ಜನಪದ ನಂಬಿಕೆಗಳಿಗೆ ಗೌರವ ನೀಡಬೇಕೆಂದು ಸಾರ್ವಜನಿಕ ವಲಯದಿಂದ ಆಗ್ರಹ ಹೆಚ್ಚಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚಾವುಂಡಿ ದೇವತೆ ಕರಾವಳಿ ಕರ್ನಾಟಕದ ಜನಪದ ಸಂಸ್ಕೃತಿ ಮತ್ತು ನಂಬಿಕೆಗಳಲ್ಲಿ ಮಹತ್ವದ ಸ್ಥಾನ ಪಡೆದುಕೊಂಡಿದೆ. ಈ ರೀತಿಯ ಹೇಳಿಕೆಗಳು ಜನರ ಭಾವನೆಗಳಿಗೆ ನೋವುಂಟುಮಾಡಿವೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ರೀತಿಯ ಹೇಳಿಕೆಗಳು ಜನರ ಭಾವನೆಗಳಿಗೆ ನೋವುಂಟುಮಾಡಿವೆ ಎಂದು ದೂರಿನಲ್ಲಿ ಹೇಳಲಾಗಿದೆ.

ಇನ್ನೂ ದೈವಗಳು ಕೇವಲ ಕಲ್ಪನೆ ಅಥವಾ ಭೂತಪ್ರೇತಗಳಲ್ಲ, ಅದು ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಜೀವಂತ ಸಂಸ್ಕೃತಿ ಅಂತಲೂ ತಿಳಿಸಲಾಗಿದೆ. ಈ ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಜೋರಾಗಿದ್ದು, ಕರಾವಳಿ ಜನರು ಹಾಗೂ ಹಲವು ನಟರು ಇದಕ್ಕೆ ಕ್ಷಮಾಪಣೆ ಕೇಳಬೇಕೆಂದು ಒತ್ತಾಯಿಸಿದ್ದಾರೆ. ಇನ್ನೂ ಇದೀಗ ರಣ್‌ವೀರ್ ಸಿಂಗ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಪೊಲೀಸರು ಏನು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಕಾದುನೋಡಬೇಕಿದೆ.

ಚಾಪ್ಟರ್ 1 ಚಿತ್ರವು ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ಅಭಿನಯದಲ್ಲಿ ಮೂಡಿಬಂದಿರುವ ಅತ್ಯುತ್ತಮ ಸಿನಿಮಾವಾಗಿದೆ. ಇದು ದೇಶ ಅಷ್ಟೇ ಅಲ್ಲದೆ, ವಿಶ್ವಮಟ್ಟದಲ್ಲಿ ಸದ್ದು ಮಾಡಿದ ಕನ್ನಡದ ಸಿನಿಮಾ ಆಗಿದೆ. ಇದರಲ್ಲಿ ಕಾಲದಲ್ಲಿನ ಕಾಡಿನ ಜನರನ್ನು ಹಿಂದಿನ ಕಾಲದಲ್ಲಿ ರಾಜಮನೆತನದವರು ಯಾವ ರೀತಿ ನಡೆಸಿಕೊಳ್ಳುತ್ತಿದ್ದರು ಎಂದು ತೋರಿಸಲಾಗಿದೆ. ಅಲ್ಲದೆ, ಕಾಡಿನ ಜನರ ಮುಗ್ಧತೆ ಹಾಗೂ ಅವರ ದೈವ ಆರಾಧನೆ ಹಾಗೂ ಪ್ರಾಚೀನ ಸಂಸ್ಕೃತಿಯನ್ನು ಇದರಲ್ಲಿ ಕಾಣಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+