Rashmika Mandanna: ಅಂದು ಹೈದ್ರಾಬಾದ್ನವಳು, ಇಂದು ತಾಯ್ನಾಡಿನ ಬಗ್ಗೆ ಕ್ಲಾರಿಟಿ ಕೊಟ್ಟ ರಶ್ಮಿಕಾ
ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ಬಾಲಿವುಡ್ ಅಂಗಳದಲ್ಲಿ ಮಿಂಚುತ್ತಿದ್ದಾರೆ. ನಟ ಸಲ್ಮಾನ್ ಖಾನ್ ಜೊತೆ ನಟಿಸಿರುವ ಸಿಕಂದರ್ ಸಿನಿಮಾ ಇಂದು ತೆರೆಕಂಡಿದೆ. ಪ್ರೇಕ್ಷಕರಿಂದಲೂ ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಶ್ಮಿಕಾ ಅಭಿನಯಕ್ಕೂ ಜನ ಫಿದಾ ಆಗಿದ್ದಾರೆ. ಇತ್ತೀಚೆಗೆ ಕನ್ನಡ ಹಾಗೂ ಕರ್ನಾಟಕದ ವಿಚಾರದಲ್ಲಿ ಗುರಿಯಾಗಿದ್ದ ರಶ್ಮಿಕಾ ಮಂದಣ್ಣ ಅವರು ಇದೀಗ ಕರ್ನಾಟಕದ ಸಂದರ್ಶನವೊಂದರಲ್ಲಿ ನೆನೆದಿದ್ದಾರೆ. ಈ ವಿಡಿಯೋ ವೈರಲ್ ಕೂಡ ಆಗಿದೆ.
ಸಿಕಂದರ್ ಸಿನಿಮಾ ಪ್ರಮೋಷನ್ ವೇಳೆ ಮಾತನಾಡಿರುವ ರಶ್ಮಿಕಾ ಈ ವೇಳೆ ಕನ್ನಡ ಹಾಗೂ ಕರ್ನಾಟಕವನ್ನು ಉಲ್ಲೇಖಿಸಿದ್ದಾರೆ. ಭಾಷೆಗಳನ್ನು ಕಲಿಯಬೇಕಾದ ಮಹತ್ವದ ಬಗ್ಗೆ ಮಾತನಾಡಿದ್ದಾರೆ ರಶ್ಮಿಕಾ. ಈ ವೇಳೆ ನಾನು ನಾನು ಕರ್ನಾಟಕದವಳು, ನಾನು ಹುಟ್ಟಿ ಬೆಳೆದಿದ್ದು ಕೂಡ ಕರ್ನಾಟಕದಲ್ಲೇ, ಅಲ್ಲಿ ನಾನು ಕನ್ನಡ ಹಾಗೂ ಇಂಗ್ಲೀಷ್ ಮಾತನಾಡುತ್ತಿದ್ದೆ ಎಂದು ರಶ್ಮಿಕಾ ಹೇಳಿದ್ದಾರೆ.

ಅಲ್ಲದೆ ನಾನು ಹೈದರಾಬಾದ್ಗೆ ಬಂದ ಬಳಿಕ ತೆಲುಗು ಭಾಷೆ ಕಲಿಯುವುದು ನನಗೆ ಅನಿವಾರ್ಯವಾಗಿತ್ತು. ಏಕೆಂದರೆ ನನ್ನ ಮನೆ, ಆಫೀಸ್ ಸಿಬ್ಬಂದಿ, ಸೆಕ್ಯುರಿಟಿ ಎಲ್ಲರೂ ತೆಲುಗು ಭಾಷೆಯವರೇ ಆಗಿರುವುದರಿಂದ ನಾನು ಅವರೊಂದಿಗೆ ಅಲ್ಲಿ ತೆಲುಗು ಭಾಷೆಯಲ್ಲೇ ಮಾತನಾಡಬೇಕಾಗಿತ್ತು. ಈ ಕಾರಣದಿಂದಲೇ ನಾನು ತೆಲುಗು ಭಾಷೆಯನ್ನು ಕಲಿತುಕೊಂಡಿದ್ದೇನೆ ಎಂದೂ ರಶ್ಮಿಕಾ ಹೇಳಿದ್ದಾರೆ.
ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಶ್ಮಿಕಾ ಅಭಿಮಾನಿಗಳು ಈ ವಿಡಿಯೋ ಹಂಚಿಕೊಂಡು, ನೋಡ್ರಪ್ಪಾ ರಶ್ಮಿಕಾಗೆ ತಾಯ್ನಾಡಿನ ಮೇಲೆ ಗೌರವ ಇಲ್ಲ ಅಂದೋರು ಈ ವಿಡಿಯೋ ನೋಡಿ ಎಂದು ಶೇರ್ ಮಾಡುತ್ತಿದ್ದಾರೆ. ಅಲ್ಲದೆ ರಶ್ಮಿಕಾ ಅವರು ಡ್ಯಾಮೇಜ್ ಕಂಟ್ರೋಲ್ಗೆ ಈ ಮಾತನ್ನಾಡಿದ್ದಾರೆ ಎಂದು ಹಲವರು ದೂರಿದ್ದಾರೆ.
ನಾನು ಹೈದರಾಬಾದ್ನವಳು ಎಂದಿದ್ದ ರಶ್ಮಿಕಾ: ರಶ್ಮಿಕಾ ಅವರು ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ನಾನು ಹೈದರಾಬಾದ್ನವಳು ಎನ್ನುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು. ಏಕೆಂದರೆ ರಶ್ಮಿಕಾ ಅವರು ಮೂಲತಃ ಕರ್ನಾಟಕದವರು ಹಾಗೂ ಕನ್ನಡ ಸಿನಿಮಾದಿಂದಲೇ ಚಿತ್ರರಂಗಕ್ಕೆ ಕಾಲಿಟ್ಟವರು ಎಂದು ಉಲ್ಲೇಖಿಸಿ ಕನ್ನಡಿಗರು ರಶ್ಮಿಕಾ ವಿರುದ್ಧ ಗರಂ ಆಗಿದ್ದರು. ಇಂದು ನೀವು ಎಷ್ಟೇ ಎತ್ತರಕ್ಕೆ ಬೆಳೆದಿರಬಹುದು. ಆದರೆ, ಇಲ್ಲಿ ಅವಕಾಶ ಸಿಕ್ಕಿದ್ದರಿಂದಲೇ ನೀವು ಸಿನಿಮಾಗಳಲ್ಲಿ ನಟಿಸಿದ್ದು. ಈಗ ದಿಢೀರನೆ ತಾಯ್ನಾಡು ಯಾವುದು ಅನ್ನೋದನ್ನು ಮರೆಯುವಷ್ಟು ಧಿಮಾಕು ಬಂದಿದೆ ಎಂದು ರಶ್ಮಿಕಾ ವಿರುದ್ಧ ಸಿಡಿಮಿಡಿಗೊಂಡಿದ್ದರು.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿಎ ನಾರಾಯಣಗೌಡ ಕೂಡ ರಶ್ಮಿಕಾ ಅವರ ಹೇಳಿಕೆಯನ್ನು ಖಂಡಿಸಿದ್ದರು. ಕಾಂಗ್ರೆಸ್ ಶಾಸಕ ರವಿ ಗಣಿಗ ಅವರು ಕೂಡ ರಶ್ಮಿಕಾ ಅವರ ಮೇಲೆ ಹಲವು ಆರೋಪಗಳನ್ನು ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಬಾಯ್ಕಾಟ್ ರಶ್ಮಿಕಾ ಅಭಿಯಾನ ಕೂಡ ನಡೆದಿತ್ತು. ಇದೀಗ ಅವರು ಸಿಕಂದರ್ ಸಿನಿಮಾದ ಕಾರ್ಯಕ್ರಮದಲ್ಲಿ ನಾನು ಕರ್ನಾಟಕದವಳು ಎನ್ನುವ ಮೂಲಕ ತಮ್ಮ ಮೇಲಿನ ವಿವಾದಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications