Rashmika-Vijay Engaged: ಗುಟ್ಟಾಗಿ ರಶ್ಮಿಕಾ, ವಿಜಯ್ ನಿಶ್ಚಿತಾರ್ಥವಾಯಿತೇ?, ಉಂಗುರದಿಂದ ವದಂತಿಗೆ ರೆಕ್ಕೆಪುಕ್ಕ..
Rashmika Mandanna Egaged: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಬಹಳ ದಿನಗಳಿಂದಲೂ ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ. ಮದುವೆ ಆಗುತ್ತಾರೆ ಎಂಬ ಮಾತುಗಳು, ವದಂತಿಗಳು ಕೇಳಿ ಬರುತ್ತಲೆ ಇವೆ. ಇದೀಗ ಅದಕ್ಕೆ ಪೂರಕವಾಗಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದಕ್ಕೆ ವೈರಲ್ ಆಗುತ್ತಿರುವ ಈ ವಿಡಿಯೋಗಳನ್ನು ನೋಡಿ ಫ್ಯಾನ್ಸ್ ಹಾಗೆಂದು ಭಾವಿಸಿದ್ದಾರೆ.
ಇತ್ತೀಚೆಗೆ ದುಬೈನಲ್ಲಿ ನಡೆದ ಸೈಮಾ (SIIMA) ಅವಾರ್ಡ್ 2025 ಕಾರ್ಯಕ್ರಮಕ್ಕೆ ನಟಿ ರಶ್ಮಿಕಾ ಮಂದಣ್ಣ ಮುಂಬೈನಿಂದ ತೆರಳಿದ್ದರು. ಅಲ್ಲಿ ನಟಿ ರಶ್ಮಿಕಾ ಪಾಪರಾಜಿಗಳಿಗೆ ಹೈ ಹೇಳುವುದು, ಉಂಗುರು ಪ್ರದರ್ಶಿಸಿದ್ದು ಕಂಡು ಬಂದಿದೆ. ಒಂದೆಡೆರು ಕಡೆಗಿನ ವಿಡಿಯೋ ಹರಿದಾಡುತ್ತಿದ್ದು, ಇದು ವಿಜಯ್-ರಶ್ಮಿಕಾ ಮಧ್ಯದ ಪ್ರಣಯ ಕಥೆಗೆ ಸಾಕ್ಷಿ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಬೀಚ್, ವಿದೇಶ ಅಂತಲೂ ಸುತ್ತಾಡುತ್ತಾರೆ. ಆದರೆ ತಾವು ಸ್ನೇಹಿತರ ಎಂದು ಹೇಳುವ ವಿಜಯ್, ರಶ್ಮಿಕಾ ಈವರೆಗೆ ಯಾವ ಗುಟ್ಟು ಬಿಟ್ಟು ಕೊಟ್ಟಿಲ್ಲ. ಈ ಮಧ್ಯ ದುಬೈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಂಗುರ ಧರಿಸಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ದುಬೈ ಏರ್ಪೋರ್ಟ್ನಲ್ಲಿ ಬ್ಲೂ ಜೀನ್ಸ್ ಮತ್ತು ಕಪ್ಪು ಛಾಯೆಗಳೊಂದಿಗೆ ಬಿಳಿ ಶರ್ಟ್ ಧರಿಸಿ ಕ್ಯಾಮೆರಾಗೆ ಎದುರಾದ ರಶ್ಮಿಕಾ ಕೈ ಬೀಸಿದಾಗ ಕೈ ಬೆರಳಿನಲ್ಲಿ ಉಂಗುರು ಪ್ರದರ್ಶನವಾಗಿದೆ. ಇದು ವದಂತಿಗಳಿಗೆ ಪುಷ್ಠಿ ನೀಡಿದೆ. ಇವರಿಬ್ಬರು ಸಿಕ್ರೇಟ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆಯೇ? ಎಂದು ಆನ್ಲೈನ್ನಲ್ಲಿ ಪ್ರಶ್ನಿಸಲಾಗುತ್ತಿದೆ.
ರಶ್ಮಿಕಾ, ವಿಜಯ್ ಆಗಾಗ ಭೇಟಿ
ಇತ್ತೀಚೆಗೆ ನ್ಯೂಯಾರ್ಕ್ಗೆ ತೆರಳಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಅಲ್ಲಿ 43 ನೇ ಇಂಡಿಯಾ ಡೇ ಪೆರೇಡ್ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಅತಿದೊಡ್ಡ ಸ್ವಾತಂತ್ರ್ಯ ದಿನಾಚರಣೆಯ ಮೆರವಣಿಗೆಯಲ್ಲಿ ಇಬ್ಬರನ್ನು ಗ್ರ್ಯಾಂಡ್ ಮಾರ್ಷಲ್ಗಳಾಗಿ ಗೌರವಿಸಲಾಯಿತು. ಆಗಾಗ ಇವರಿಬ್ಬರು ತಮ್ಮ ಡೇಟಿಂಗ್ ವದಂತಿಗಳ ಸುತ್ತ ಸಾಕಷ್ಟು ಸಂಚಲನ ಮೂಡಿಸುತ್ತಲೇ ಇದ್ದಾರೆ. ಹೋಟೆಲ್, ಬೀಚ್, ಒಂದೇ ಕಾರಿನಲ್ಲಿ ಹೀಗೆ ಅನೇಕ ಸಂದರ್ಭಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶೂಟಿಂಗ್ ಬಿಡುವಿನ ಸಮಯದಲ್ಲಿ ಇಬ್ಬರು ಒಟ್ಟಿಗೆ ಸೇರುತ್ತಾರೆ.
ಮಾತ್ರವಲ್ಲದೇ ನಿರ್ದೇಶಕ ರಾಹುಲ್ ಸಂಕೃತ್ಯ ಅವರ ಮುಂದಿನ VD14 ಚಿತ್ರಕ್ಕೆ ವಿಜಯ್ ಜೊತೆಗೆ ನಟಿ ರಶ್ಮಿಕಾ ಮಂದಣ್ಣ ಮೂರನೇ ಭಾರಿ ನಾಯಕಿಯಾಗಿ ಬಣ್ಣ ಹಚ್ಚಲಿದ್ದಾರೆ. 1800 ದಶಕದ ಬ್ರಿಟೀಷರ ಕಾಲದ ಕಥೆಯ ಆಧಾರಿತ ಸಿನಿಮಾ ಎನ್ನಲಾಗುತ್ತಿದೆ. ಇದೆಲ್ಲದರ ಬಗ್ಗೆ ಅಧಿಕೃತ ಮಾಹಿತಿ ಸಿಗಬೇಕಿದೆ.
-
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications