Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ
ಹೈದರಾಬಾದ್: ತೆಲಂಗಾಣ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಷ್ಠಿತ 'ಗದ್ದರ್ ಫಿಲ್ಮ್ ಅವಾರ್ಡ್ಸ್' (Gaddar Film Awards) ಕಾರ್ಯಕ್ರಮದಲ್ಲಿ ಕೊಡವ ಸುಂದರಿ ರಶ್ಮಿಕಾ ಮಂದಣ್ಣ ಎಲ್ಲರ ಗಮನ ಸೆಳೆದಿದ್ದಾರೆ. 'ದಿ ಗರ್ಲ್ಫ್ರೆಂಡ್' ಚಿತ್ರದ ಅದ್ಭುತ ನಟನೆಗಾಗಿ 'ಅತ್ಯುತ್ತಮ ನಟಿ' ಪ್ರಶಸ್ತಿ ಸ್ವೀಕರಿಸಿದ ರಶ್ಮಿಕಾ, ತಮ್ಮ ವೈಯಕ್ತಿಕ ಜೀವನದ ಬಗ್ಗೆ ನೀಡಿದ ಒಂದು ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಶ್ಮಿಕಾ ಮಂದಣ್ಣ ಭಾವುಕರಾಗಿ ನುಡಿದರು. "ನಾನು ಈ ಚಿತ್ರರಂಗಕ್ಕೆ ಬಂದಾಗ ಮೊದಲು ಮನೆಮಗಳಾಗಿ ಎಲ್ಲರೂ ನನ್ನನ್ನು ಸ್ವೀಕರಿಸಿದಿರಿ. ಆದರೆ ಈಗ ನಾನು ನಿಮ್ಮೆಲ್ಲರ ಮುಂದೆ ಅಧಿಕೃತವಾಗಿ ಸೊಸೆಯಾಗಿ ನಿಂತಿದ್ದೇನೆ" ಎಂದರು. "ಒಂದು ಕಾಲದಲ್ಲಿ ನನ್ನ ನಟನೆಯ ಬಗ್ಗೆ ಸಾಕಷ್ಟು ಟ್ರೋಲ್ಗಳು ನಡೆಯುತ್ತಿದ್ದವು. ಆದರೆ ಇಂದು ಅದೇ ನಟನೆಗೆ 'ಅತ್ಯುತ್ತಮ ನಟಿ' ಪ್ರಶಸ್ತಿ ಸಿಕ್ಕಿರುವುದು ಹೆಮ್ಮೆ ತಂದಿದೆ. ಇದು ನನ್ನ ಮುಂದಿನ ಸಿನಿಮಾಗಳಿಗೆ ದೊಡ್ಡ ಪ್ರೇರಣೆ" ಎಂದರು. ಅಲ್ಲದೆ ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದರು.

ಸ್ಯಾಂಡಲ್ವುಡ್ನಿಂದ ಕೆರಿಯರ್ ಆರಂಭಿಸಿ ಇಂದು ನ್ಯಾಷನಲ್ ಕ್ರಶ್ ಆಗಿ ಬೆಳೆದಿರುವ ರಶ್ಮಿಕಾ ಮಂದಣ್ಣ, ಇತ್ತೀಚಿನ 'ಗದ್ದರ್ ತೆಲಂಗಾಣ ಫಿಲ್ಮ್ ಅವಾರ್ಡ್ಸ್ 2025'ರಲ್ಲಿ ಎಲ್ಲರ ಗಮನ ಸೆಳೆದರು. ವಿಜಯ್ ದೇವರಕೊಂಡ ಅವರೊಂದಿಗೆ ವಿವಾಹವಾದ ಕೇವಲ ಒಂದು ತಿಂಗಳ ಅಂತರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಶ್ಮಿಕಾ ತಮ್ಮ ಅತ್ತೆ ಮಾಧವಿ ದೇವರಕೊಂಡ ಅವರೊಂದಿಗೆ ಆಗಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ಆಗ ಟ್ರೋಲ್ ಮಾಡ್ತಿದ್ರು
'ದಿ ಗರ್ಲ್ಫ್ರೆಂಡ್' ಸಿನಿಮಾದಲ್ಲಿನ ಪಾತ್ರಕ್ಕಾಗಿ ರಶ್ಮಿಕಾ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, "ಒಂದು ಕಾಲದಲ್ಲಿ ನನ್ನನ್ನು ವಿಪರೀತವಾಗಿ ಟ್ರೋಲ್ ಮಾಡುತ್ತಿದ್ದರು. ಆದರೆ ಇಂದು ರಾಜ್ಯ ಮಟ್ಟದ ಗೌರವ ಸಿಕ್ಕಿರುವುದು ನನ್ನ ಕಠಿಣ ಪರಿಶ್ರಮಕ್ಕೆ ಸಿಕ್ಕ ಫಲ" ಎಂದು ಭಾವುಕರಾದರು. ಕಾರ್ಯಕ್ರಮಕ್ಕೆ ಪತಿ ವಿಜಯ್ ದೇವರಕೊಂಡ ಬದಲು ಅತ್ತೆ ಮಾಧವಿ ಅವರೊಂದಿಗೆ ಆಗಮಿಸಿದ ರಶ್ಮಿಕಾ, ಇಬ್ಬರೂ ಕ್ಯಾಮೆರಾಗಳಿಗೆ ಪೋಸ್ ನೀಡುತ್ತಾ, ಪರಸ್ಪರ ನಗುತ್ತಾ ಸಂವಹನ ನಡೆಸುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಶ್ಮಿಕಾ ನಮ್ಮೂರಿನ ಸೊಸೆ ಎಂದ ಸಿಎಂ ರೇವಂತ್ ರೆಡ್ಡಿ
ಈ ಕಾರ್ಯಕ್ರಮದ ಮತ್ತೊಂದು ವಿಶೇಷವೆಂದರೆ, ಪ್ರಶಸ್ತಿ ಪ್ರದಾನ ಮಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ರಶ್ಮಿಕಾ ಅವರನ್ನು ವೇದಿಕೆಯ ಮೇಲೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ರಶ್ಮಿಕಾ ಅವರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, "ರಶ್ಮಿಕಾ ಮಂದಣ್ಣ ಅವರು ನಮ್ಮೂರಿನ ಸೊಸೆ" ಎಂದು ಸಾರ್ವಜನಿಕವಾಗಿ ಕರೆದರು. ಸಿಎಂ ಅವರ ಈ ಮಾತು ಕೇಳಿ ಇಡೀ ಸಭಾಂಗಣ ಚಪ್ಪಾಳೆ ಮತ್ತು ಶಿಳ್ಳೆಗಳಿಂದ ಮೊಳಗಿತು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ













Click it and Unblock the Notifications