Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರು ಮತ್ತೆ ಭಾರೀ ಸುದ್ದಿಯಲ್ಲಿದ್ದಾರೆ. ಈಚೆಗೆ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಇಬ್ಬರೂ ಅದ್ಧೂರಿಯಾಗಿ ಮದುವೆಯಾಗಿದ್ದರು. ಇದೀಗ ಮದುವೆಯಾಗಿ ಒಂದೂವರೆ ತಿಂಗಳ ಒಳಗೆಯೇ ರಶ್ಮಿಕಾ ಮಂದಣ್ಣ ಅವರು ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದು, ಇದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನಟಿ ರಶ್ಮಿಕಾ ಮಂದಣ್ಣ ಅವರು, ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ನಲ್ಲಿ ಮಾಡಿರುವ ಪೋಸ್ಟ್ ಏನು, ಈ ವಿಷಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿರುವುದು ಏಕೆ ಎನ್ನುವ ವಿವರ ನೋಡೋಣ.
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಈಚೆಗೆ ತಮ್ಮ ಬಹುಕಾಲದ ಗೆಳೆಯ ವಿಜಯ್ ದೇವರಕೊಂಡ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇವರ ದಾಂಪತ್ಯ ಜೀವನವು ಈಚೆಗೆ ಪ್ರಾರಂಭವಾಗಿದ್ದು, ಅದ್ಧೂರಿ ವಿವಾಹ ಸಂಭ್ರಮ ನಡೆದಿತ್ತು. ಇದೀಗ ಮದುವೆಯಾಗಿ ಒಂದೂವರೆ ತಿಂಗಳಾಗುತ್ತಿರುವಾಗಲೇ ರಶ್ಮಿಕಾ ಅವರು ಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ. ಆದರೆ ಈ ವಿಚಾರವು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ರಾಶ್ಮಿಕಾ ಅವರ ಪೋಸ್ಟ್ನಲ್ಲಿ ಏನಿದೆ ಹಾಗೂ ಇದಕ್ಕೆ ಅಭಿಮಾನಿಗಳು, ನೆಟ್ಟಿಗರು ಹೇಳಿದ್ದೇನು.

ನಟಿ ರಶ್ಮಿಕಾ ಮಂದಣ್ಣ ಹಂಚಿಕೊಂಡ ಪೋಸ್ಟ್ನಲ್ಲೇನಿದೆ
ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ನಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾರನ್ನು ಹೋಲುವ ಮೂವಿಂಗ್ ಗ್ರಾಫಿಕ್ಸ್ ಹಂಚಿಕೊಂಡಿದ್ದಾರೆ. ಇವರಿಬ್ಬರ ಪಕ್ಕ ಸುಂದರವಾದ ಹಳದಿ ಬಣ್ಣದ ಹೂವೊಂದು ಬರುವಂತಹ ಗ್ರಾಫಿಕ್ ಹಂಚಿಕೊಂಡಿದ್ದಾರೆ. ಅದರಲ್ಲಿ ಮೂವಿಂಗ್ ರೆಡ್ ಹಾರ್ಟ್ ಎಮೋಜಿಗಳು ಸಹ ಬರುವಂತೆ ಗ್ರಾಫಿಕ್ಸ್ ಬರುವಂತೆ ಮಾಡಲಾಗಿದೆ ಇದರೊಂದಿಗೆ ಈಗ ನಾವು ಮೂವರು ಅಂತ ರಶ್ಮಿಕಾ ಮಂದಣ್ಣ ಅವರು ವಿಡಿಯೋದಲ್ಲಿ
ಬರೆದುಕೊಂಡಿದ್ದಾರೆ. ಬಿಳಿ ಬಣ್ಣದ ಹಾರ್ಟ್ ಎಮೋಜಿ ಸಹ ಬಳಕೆ ಮಾಡಲಾಗಿದೆ.
Rashmika Mandanna: ರಶ್ಮಿಕಾ ಪೋಸ್ಟ್ಗೆ ನೆಟ್ಟಿಗರು ಹೇಳಿದ್ದೇನು
ಇನ್ನು ಈ ಪೋಸ್ಟ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ತಾಯಿಯಾಗುತ್ತಿದ್ದಾರೆಯೇ, ರಶ್ಮಿಕಾ ಗರ್ಭಿಣಿನಾ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಈಗಿನ ಮಟ್ಟಿಗೆ ಮೂವರು ಎಂದರೆ ಹೂವು, ಮೂವರು ಎಂದರೆ ಜೂನಿಯರ್ ವಿರೋಶ್ ಎಂದು ನೆಟ್ಟಿಗರು ರಿಯಾಕ್ಟ್ ಮಾಡುತ್ತಿದ್ದಾರೆ. ನಟಿ ಮದುವೆ, ಹನಿಮೂನ್ ಮುಗಿಸಿ ಮತ್ತೆ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಅವರು ವಿಜಯ್ ದೇವರಕೊಂಡ ಜೊತೆ ರಣಬಾಲಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ಅವರ ಈ ಪೋಸ್ಟ್ಗೆ ಸೋಷಿಯಲ್ ಮೀಡಿಯಾದಲ್ಲಿ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊಸದಾಗಿ ಮದುವೆಯಾದವರಿಂದ 1 ತಿಂಗಳಲ್ಲಿ ಪೋಷಕರಾಗಲಿರುವವರವರೆಗೆ ಎಂತಹ ಪ್ರಯಾಣ ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ. ನನ್ನ ಪ್ರಕಾರ ಇದು ಅವರ ಮುಂಬರುವ ಯಾವುದೇ ಯೋಜನೆಗಳಿಗೆ / ಪ್ರಾಜೆಕ್ಟ್ಗಳ ಪ್ರಾರಂಭವಾಗಬಹುದು!! (ಡಿಯರ್ ಡೈರಿಯಂತೆ!) ಎಂದೂ ನೆಟ್ಟಿಗರೊಬ್ಬರು ಅಂದಾಜಿಸಿದ್ದಾರೆ. ಇನ್ನು ನಟಿ ರಶ್ಮಿಕಾ ಮಂದಣ್ಣ ಅವರು ಈ ಬಗ್ಗೆ ನೇರವಾಗಿ ಹೇಳದೆ ಕುತೂಹಲ ಉಳಿಸಿದ್ದಾರೆ ಎಂದೂ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.
-
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
Amruthadhare Serial: ಟ್ವಿಸ್ಟ್ ಮೇಲೆ ಟ್ವಿಸ್ಟ್: ಮಲ್ಲಿ ಮದುವೆ ಬಳಿಕ ಹೊಸ ತಿರುವು, ಜೆಡಿ ಪ್ಲ್ಯಾನ್ಗೆ ಸುನೀಲ್ ವಿಲನ್ -
Nepal: ಇರಾನ್ ಯುದ್ಧದ ನಡುವೆ ದೊಡ್ಡ ಸುದ್ದಿಯಾಗದ ನೇಪಾಳದ ಹೊಸ ಜೆನ್ ಜೀ ಸರ್ಕಾರ: ಗೋಪಾಲಕೃಷ್ಣ ಕುಂಟಿನಿ ಬರಹ -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
Property: ಆಸ್ತಿದಾರರಿಗೆ 2026 ವರ್ಷ ಅದೃಷ್ಟ: ರಿಯಲ್ ಎಸ್ಟೇಟ್ನಲ್ಲಿ ಹೊಸ ಸಂಚಲನ, ಮನೆ ಮಾರಾಟ ಭರ್ಜರಿ ಹೆಚ್ಚಳ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications