Rashmika Mandanna: ಪುಟ್ಟ ಅಭಿಮಾನಿಗೆ ಮನೆಯಲ್ಲೇ ಭರ್ಜರಿ ಔತಣ: ಕೊಟ್ಟ ಮಾತಿನಂತೆ ನಡೆದುಕೊಂಡ ರಶ್ಮಿಕಾ-ವಿಜಯ್
ಹೈದರಾಬಾದ್: ತೆಲುಗು ಚಿತ್ರರಂಗದ ಸ್ಟಾರ್ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ತಮ್ಮ ಮದುವೆಯ ನಂತರ ನೀಡಿದ್ದ ಮೊದಲ ಭರವಸೆಯನ್ನು ಈಡೇರಿಸುವ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ತಮ್ಮ ಮದುವೆಗೆ ಆಹ್ವಾನಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದ ಪುಟ್ಟ ಅಭಿಮಾನಿಯನ್ನು ಹೈದರಾಬಾದ್ನ ತಮ್ಮ ನಿವಾಸಕ್ಕೆ ಆಹ್ವಾನಿಸಿ, ದಂಪತಿ ಪ್ರೀತಿಯಿಂದ ಊಟ ಉಣಬಡಿಸಿದ್ದಾರೆ.
ಕೆಲವು ದಿನಗಳ ಹಿಂದೆ ವಿಜಯ್ ಮತ್ತು ರಶ್ಮಿಕಾ ವಿವಾಹವಾದಾಗ, ಸೋಶಿಯಲ್ ಮೀಡಿಯಾದಲ್ಲಿ ಪುಟ್ಟ ಬಾಲಕಿಯೊಬ್ಬಳ ವಿಡಿಯೋ ವೈರಲ್ ಆಗಿತ್ತು. "ನನ್ನನ್ನು ಯಾಕೆ ಮದುವೆಗೆ ಕರೆಯಲಿಲ್ಲ? ನನಗೆ ಸ್ವೀಟ್ಸ್ ಮತ್ತು ಊಟ ಬೇಕು" ಎಂದು ಆಕೆ ಮುದ್ದಾಗಿ ಪ್ರಶ್ನಿಸಿದ್ದಳು. ಈ ವಿಡಿಯೋಗೆ ಸ್ವತಃ ವಿಜಯ್ ದೇವರಕೊಂಡ ಅವರು, "ಬುಜ್ಜಿ ತಲ್ಲಿ (ಪುಟ್ಟ ತಾಯಿ), ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮಾಡಿಸುತ್ತೇನೆ" ಎಂದು ಕಮೆಂಟ್ ಮಾಡುವ ಮೂಲಕ ಭರವಸೆ ನೀಡಿದ್ದರು.

ಇಡೀ ಕುಟುಂಬಕ್ಕೆ ಭೋಜನಕೂಟ
ಕೊಟ್ಟ ಮಾತಿನಂತೆ ವಿಜಯ್ ಮತ್ತು ರಶ್ಮಿಕಾ ಆ ಬಾಲಕಿ ಹಾಗೂ ಆಕೆಯ ಕುಟುಂಬವನ್ನು ತಮ್ಮ ಮನೆಗೆ ಆಹ್ವಾನಿಸಿದ್ದರು. ಈ ಭೇಟಿಯ ಸುಂದರ ಕ್ಷಣಗಳನ್ನು ಬಾಲಕಿ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ವಿಡಿಯೋದಲ್ಲಿ ವಿಜಯ್ ಬಾಲಕಿಯನ್ನು ಎತ್ತಿಕೊಂಡು ಮುದ್ದಾಡುತ್ತಿರುವುದು ಮತ್ತು ಆಕೆ "ನನ್ನನ್ನು ಮದುವೆಗೆ ಯಾಕೆ ಕರೆಯಲಿಲ್ಲ?" ಎಂದು ಮತ್ತೆ ಪ್ರಶ್ನಿಸುತ್ತಿರುವುದು ಕಂಡುಬಂದಿದೆ.
ರಶ್ಮಿಕಾ ಮಂದಣ್ಣ ಅವರು ಬಾಲಕಿಗೆ ಲಡ್ಡು ನೀಡಿ, ಸ್ವತಃ ಅನ್ನ ತಿನ್ನಿಸಿ ಸಿಹಿ ಮುತ್ತು ನೀಡಿದ್ದಾರೆ. "ನಾವೀಗ ಫ್ರೆಂಡ್ಸ್ ಅಲ್ವಾ?" ಎಂದು ಬಾಲಕಿ ಕೇಳಿದಾಗ, ನವದಂಪತಿ ನಗುನಗುತ್ತಾ ಒಪ್ಪಿಕೊಂಡಿದ್ದಾರೆ. "ರೀಲ್ ಟು ರಿಯಲ್.. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಅವರನ್ನು ಅವರ ಮನೆಯಲ್ಲೇ ಭೇಟಿಯಾಗಿದ್ದು ನನ್ನ ಜೀವನದ ಮರೆಯಲಾಗದ ಕ್ಷಣ. ಅವರು ನಮ್ಮನ್ನು ಅತ್ಯಂತ ಪ್ರೀತಿಯಿಂದ ಬರಮಾಡಿಕೊಂಡರು" ಎಂದು ಬಾಲಕಿ ಸಂಭ್ರಮದಿಂದ ಬರೆದುಕೊಂಡಿದ್ದಾಳೆ. ಸದ್ಯ ಈ ವಿಡಿಯೋ ಇಂಟರ್ನೆಟ್ನಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳು ಈ ಜೋಡಿಯ ಸರಳತೆಗೆ ಫಿದಾ ಆಗಿದ್ದಾರೆ.
ಕೆಲವು ದಿನಗಳ ಹಿಂದೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಮದುವೆಯ ನಂತರ, ನನ್ನನ್ನೇಕೆ ಮದುವೆಗೆ ಕರೆಯಲಿಲ್ಲ ಎಂದು ಬಾಲಕಿ ವಿಡಿಯೋ ಹಾಕಿದ್ದಳು. ಈ ವಿಡಿಯೋ ನೋಡಿದ ವಿಜಯ್ ದೇವರಕೊಂಡ, "ನಿನ್ನನ್ನು ಮನೆಗೆ ಲಂಚ್ಗೆ ಕರೆಯುತ್ತೇನೆ, ನಿನಗೆ ಇಷ್ಟವಾದ ಊಟ ಮತ್ತು ಸಿಹಿ ಹೇಳು" ಎಂದು ಕಾಮೆಂಟ್ ಮಾಡಿದ್ದರು. ರಶ್ಮಿಕಾ ಕೂಡ ವಿಶೇಷ ಗಿಫ್ಟ್ ನೀಡುವುದಾಗಿ ಮಾತು ಕೊಟ್ಟಿದ್ದರು. ಈಗ ಅವರು ಕೊಟ್ಟ ಮಾತಿನಂತೆ ಬಾಲಕಿ ಮತ್ತು ಆಕೆಯ ಕುಟುಂಬವನ್ನು ಮನೆಗೆ ಆಹ್ವಾನಿಸಿ ಆತ್ಮೀಯವಾಗಿ ಆತಿಥ್ಯ ನೀಡಿದ್ದಾರೆ. ಮದುವೆಗೆ ಆಹ್ವಾನ ನೀಡಲಿಲ್ಲ ಎಂದು ಮುದ್ದಾಗಿ ಬೇಸರ ವ್ಯಕ್ತಪಡಿಸಿದ್ದ ಬಾಲಕಿ ಈಗ ಈ ಜೋಡಿಯನ್ನು ಅವರ ಮನೆಗೆ ಭೇಟಿ ನೀಡಿ, ಅವರ ಜೊತೆ ಊಟ ಮಾಡುವ ಅವಕಾಶ ಪಡೆದಿದ್ದಾಳೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications