Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್
ಹೈದರಾಬಾದ್/ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ತಾನು ಪ್ರೀತಿಸಿದ ಟಾಲಿವುಡ್ ನಟ ವಿಜಯ್ ದೇವರಕೊಂಡ ಜೊತೆಗೆ ಸಾಂಪ್ರದಾಯಿಕವಾಗಿ ಮತ್ತು ಅದ್ಧೂರಿಯಾಗಿ ಉದಯಪುರದಲ್ಲಿ ವಿವಾಹ ಆಗಿದ್ದಾರೆ. ಇಂದು ಮಾರ್ಚ್ 4ರಂದು ಬುಧವಾರ ಹೈದರಾಬಾದ್ನಲ್ಲಿ ಅತ್ಯಾಪ್ತರ ಸಮ್ಮುಖದಲ್ಲಿ ವಿವಾಹ ಅರತಕ್ಷತೆ ನೇರವೇರಿತು. ಅನೇಕ ಗಣ್ಯರು, ಕನ್ನಡ, ತೆಲುಗು ಚಿತ್ರರಂಗದ ಸೆಲೆಬ್ರೆಟಿಗಳು ಪಾಲ್ಗೊಂಡಿದ್ದರು. ಈ ವೇಳೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹ ಭಾಗವಹಿಸಿ ನವ ದಂಪತಿಗಳಿಗೆ ಶುಭಾಶಯ ತಿಳಿಸಿದ್ದಾರೆ. ನಿಮ್ಮ ಜೀವನ ಸುಖಃಕರವಾಗಿರಲೆಂದು ಹಾರೈಸಿದ್ದಾರೆ.
ಕೋಟ್ಯಾಂತರ ಅಭಿಮಾನಿಗಳ ಹಾರೈಕೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸಲು ಸಂತೋಷವಾಗಿದೆ. ಅವರು ಈ ಹೊಸ ಅಧ್ಯಾಯವನ್ನು ಒಟ್ಟಿಗೆ ಪ್ರಾರಂಭಿಸುತ್ತಿದ್ದು, ಅವರಿಬ್ಬರ ಜೀವನ ಸಂತೋಷದಿಂದ ಕೂಡಿರಲಿ. ಒಗ್ಗಟ್ಟಿನ ಜೀವನ ನಡೆಸುವಂತೆ ಹಾರೈಸಿದ್ದಾಗಿ ಡಿಕೆ ಶಿವಕುಮಾರ್ ಅವರು ಎಕ್ಸ್ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಫೋಟೋದಲ್ಲಿ ವಿಜಯ್ ಹಾಗೂ ರಶ್ಮಿಕಾ ಅವರಿಗೆ ಹೂವಿನ ದೊಡ್ಡ ಬೊಕ್ಕೆ ನೀಡಿರುವ ಡಿಕೆ ಶಿವಕುಮಾರ್ ಅವರು ಒಟ್ಟಿಗೆ ಫೋಟೋಗೆ ಪೋಸ್ ನೀಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೆ ರಶ್ಮಿಕಾ ಆಹ್ವಾನ ನೀಡಿದ್ದು ವಿಶೇಷವಾಗಿತ್ತು. ಬಿಳಿ ಪಂಚೆ, ಶರ್ಟ್ ತೊಟ್ಟು ಹುರಿ ಮೀಸೆಯಲ್ಲಿ ವಿಜಯ್ ಮಿಂಚಿಸಿದರೆ, ಕೆಂಪು ಸೀರೆ ಮೈತುಂಬಾ ಒಡವೆಯೊಂದಿಗೆ ನಗುಮೊಗದೊಂದಿಗೆ ರಶ್ಮಿಕಾ ಅರತಕ್ಷತೆಯಲ್ಲಿ ಪಾಲ್ಗೊಂಡಿದ್ದು ಕಂಡು ಬಂತು. ಅವರ ನಗು ನೋಡಿದರೆ ತಾವು ಅಂದುಕೊಂಡಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಖಷಿ ನಟಿ ಮುಖದಲ್ಲಿ ಎದ್ದು ಕಾಣಿಸುತ್ತಿದೆ.
ಹೈದರಾಬಾದ್ನ ಹೋಟೆಲ್ ವೊಂದರಲ್ಲಿ ಈ ಅರತಕ್ಷತೆ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ನಟ ನಾಗಾರ್ಜುನ್, ಚಿರಂಜೀವಿ, ತಮಿಳು ನಟ ಶರತ್ಕುಮಾರ್ ಹಾಗೂ ಪತ್ನಿ ನಟಿ ರಾಧಿಕಾ ಶರತ್ಕುಮಾರ್, ನಟಿ ಶ್ರೀಲೀಲಾ, ನಟ ನಾನಿ, ನಟ ಅಲ್ಲು ಅರ್ಜುನ್, ರಾಮಚರಣ್ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಹಾಜರಾಗಿದ್ದರು. ವಿಜಯ್ ರಶ್ಮಿಕಾಗೆ ವಿಶ್ ಮಾಡಿದ್ದಾರೆ. ಉದಯಪುರದಲ್ಲಿ ಮದುವೆಗೂ ಸೀಮಿತ ಜನರಿಗೆ ಆಹ್ವಾನಿಸಿದ್ದ ರಶ್ಮಿಕಾ ಜೋಡಿ, ಹೈದರಾಬಾದ್ನಲ್ಲಿ ನಡೆಯಲಿರುವ ಅರತಕ್ಷತೆಯಲ್ಲಿ ಸ್ಯಾಂಡಲ್ವುಡ್ನ ಆಹ್ವಾನಿತರಲ್ಲಿ ಕಡಿಮೆ ಮಂದಿ ಪಾಲ್ಗೊಂಡಿದ್ದರು ಎನ್ನಲಾಗಿದೆ.
ಇನ್ನೂ ಭದ್ರತಾ ದೃಷ್ಟಿಯಿಂದಾಗಿ ಯಾರಿಗೆಲ್ಲ ಆಹ್ವಾನ ನೀಡಲಾಗಿತ್ತೋ ಅವರನ್ನು ಮಾತ್ರವೇ ಅರತಕ್ಷತೆಗೆ ಬಿಡಲಾಗಿತ್ತು. ಇಂದಿನ ಕಾರ್ಯಕ್ರಮಕ್ಕಾಗಿ ಹೈದರಾಬಾದ್ನ ಹೋಟೆಲ್ ವಿದ್ಯುದಲಂಕಾರಗಳಿಂದ ಕಂಗೊಳಿಸುವಂತೆ ಮಾಡಲಾಗಿತ್ತು. ಫೆಬ್ರವರಿ 26ರಿಂದ ಆರಂಭವಾದ 'ವಿರೋಶ್' ಜೋಡಿ ಕಲ್ಯಾಣವು ಇಂದಿನ ಹೈದರಾಬಾದ್ ಅರತಕ್ಷತೆ ಮೂಲಕ ಕೊನೆಗೊಂಡಿತು. ವಿವಾಹ ಬಳಿಕ ದೇಶದ ಅನೇಕ ದೇವಸ್ಥಾನಗಳಿಗೆ ಈ ಜೋಡಿ ಭೇಟಿ ಕೊಟ್ಟಿತ್ತು. 14 ರಾಜ್ಯಗಳ ಅಭಿಮಾನಿಗಳಿಗೆ ಸಿಹಿ ಪೊಟ್ಟಣವನ್ನು ರವಾನಿಸಿ ಗಮನಸೆಳೆದಿತ್ತು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications