ರೇಣುಕಾಸ್ವಾಮಿ ಕುಟುಂಬವನ್ನು ಸಂಪರ್ಕಿಸಿದ ದರ್ಶನ್? ರಾಜೀ ಸಂಧಾನದ ಬಗ್ಗೆ ಕಾಶಿನಾಥಯ್ಯ ಸ್ಫೋಟಕ ಹೇಳಿಕೆ
ಚಿತ್ರದುರ್ಗ, ಜೂನ್ 08: ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ ಒಂದು ವರ್ಷವಾಗಿದೆ. ರೇಣುಕಾಸ್ವಾಮಿಯನ್ನ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ರೇಣುಕಾಸ್ವಾಮಿ ಕೊಲೆಯಾಗಿ ಒಂದು ವರ್ಷ ಪೂರೈಸಿದ ಹಿನ್ನಲೆ ಇಂದು ಕುಟುಂಬಸ್ಥರು ರೇಣುಕಾ ಸ್ವಾಮಿ ಕುಟುಂಬದವರು ಇಂದು ರೇಣುಕಾ ಸ್ವಾಮಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮತ್ತೊಮ್ಮೆ ಮಗನನ್ನು ನೆನೆದು ಕಣ್ಣೀರು ಹಾಕಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್ ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳು ಕೊಂದಿದ್ದಾರೆ ಎಂದು ಹೇಳಲಾಗುತ್ತಿರುವ ಆರೋಪಿಗಳು ಸದ್ಯ ಎಲ್ಲರೂ ಜಾಮೀನಿನ ಮೇಲೆ ಹೊರಗೆ ಬಂದಿದ್ದು, ನಟಿ ವಿತ್ರಾ ತಮ್ಮ ಉದ್ಯಮದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ನಟ ದರ್ಶನ್ ಇತ್ತೀಚೆಗೆ ಅದ್ಧೂರಿಯಾಗಿ ವಿವಾಹ ವಾರ್ಷಿಕೋತ್ಸವ ಸಹ ಆಚರಿಸಿದ್ದು, ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಆದರೆ, ರೇಣುಕಾ ಸ್ವಾಮಿ ಕುಟುಂಬದವರು ಆ ನೋವಿನಿಂದ ಇನ್ನೂ ಹೊರಬಂದಿಲ್ಲ.

ಇಂದು(ಜೂನ್ 08, ಭಾನುವಾರ) ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ರೇಣುಕಸ್ವಾಮಿ ತಂದೆ ಕಾಶಿನಾಥಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿ, ನನ್ನ ಮಗ ರೇಣುಕಾಸ್ವಾಮಿ ಕೊಲೆಯಾಗಿ ಒಂದು ವರ್ಷವಾಗಿದೆ. ಈ ವೇಳೆ ದರ್ಶನ್ ಜೈಲಿನಿಂದ ಬಂದ ಮೇಳೆ ನಿಮ್ಮ ಕುಟುಂಬವನ್ನ ಭೇಟಿಯಾಗಿದ್ದಾರಾ ಎಂಬ ಬಗ್ಗೆಯೂ ಕಾಶಿನಾಥಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಇಲ್ಲ ನಮ್ಮನ್ನ ಯಾರೂ ಸಂಪರ್ಕ ಮಾಡಿಲ್ಲ, ನಾವೂ ಯಾರನ್ನ ಸಂಪರ್ಕ ಮಾಡೋಕೆ ಹೋಗಿಲ್ಲ ಎಂದು ಹೇಳಿದ್ದಾರೆ.
ಇನ್ನು ರಾಜಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ, ಈ ಬಗ್ಗೆ ನಿಮ್ಮ ಅಭಿಪ್ರಾಯ ಏನೆಂದು ಮಾಧ್ಯಮಗಳ ಪ್ರಶ್ನೆಗ ಉತ್ತರಿಸಿದ್ದು, ಇಲ್ಲ ಅದರ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಮ್ಮನ್ನ ಇಲ್ಲಿವರೆಗೆ ಯಾರೂ ಸಂಪರ್ಕ ಮಾಡಿಲ್ಲ. ಮಾಡ್ತಾರೆ ಅನ್ನೋ ನಂಬಿಕೆ ಕೂಡಾ ಇಲ್ಲ. ಬರೋದಿದ್ರೆ ಇಷ್ಟೊತ್ತಿಗೆ ಬರ್ಬೇಕಿತ್ತು ಎಂದು ಹೇಳಿದ್ದಾರೆ. ಭೇಟಿ, ಸಂಧಾನದ ಬಗ್ಗೆ ನಮ್ಮ ಹಿರಿಯರು ಇದ್ದಾರೆ, ಅವರು ತೀರ್ಮಾನ ಮಾಡ್ತಾರೆ. ಅವರ ಮಾತಿಗೆ ಬದ್ಧರಾಗಿರ್ತೇವೆ. ಆದರೆ, ಆರೋಪಿಗಳಿಗೆ ಶಿಕ್ಷೆ ಆಗಬೇಕು. ಕೊಲೆ ಪ್ರಕರಣ ವಿಶೇಷ ಇರೋದ್ರಿಂದ ಕಾನೂನು ತಕ್ಕ ಶಿಕ್ಷೆ ನೀಡಬೇಕು. ನ್ಯಾಯಾಲಯ ಸರಿಯಾದ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications