Darshan Thoogudeepa: ದರ್ಶನ್ ನಮ್ಮ ಮನೆಗೆ ಬಂದರೆ..! ರೇಣುಕಾಸ್ವಾಮಿ ತಂದೆ ಅಚ್ಚರಿಯ ಹೇಳಿಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ಜೈಲಿನಲ್ಲಿದ್ದರೆ, ಅತ್ತ ಕೊಲೆಯಾದ ರೇಣುಕಾಸ್ವಾಮಿಯ ಕುಟುಂಬದ ಸದಸ್ಯರು ನೋವಿನಲ್ಲಿದ್ದಾರೆ. ರೇಣುಕಾಸ್ವಾಮಿ ಹೆಂಡತಿ ಗರ್ಭಿಣಿಯಾಗಿದ್ದು, ಪ್ರಪಂಚ ನೋಡುವ ಮೊದಲೇ ತಂದೆಯನ್ನು ಕಳೆದುಕೊಂಡಿದೆ.

ರೇಣುಕಾಸ್ವಾಮಿ ಕುಟುಂಬಕ್ಕೆ ದರ್ಶನ್ ಮತ್ತು ವಿಜಯಲಕ್ಷ್ಮಿ ದರ್ಶನ್ ಸಹಾಯ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಮತ್ತು ಅವರ ಕುಟುಂಬ ನಮ್ಮ ಮನೆಗೆ ಬಂದರೆ ಸ್ವಾಗತಿಸುತ್ತೇವೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

Renukaswamy s Father Extends Warm Welcome to Darshan and Family in Chitradurga

ದರ್ಶನ್‌ ಮತ್ತು ಕುಟುಂಬವನ್ನು ತಮ್ಮ ಮನೆಗೆ ಆಹ್ವಾನಿಸಿರುವ ರೇಣುಕಾಸ್ವಾಮಿ ತಂದೆ, ಅವರು ನಮ್ಮ ಮನೆಗೆ ಯಾವಾಗ ಬೇಕಾದರೂ ಬರಬಹುದು ಎಂದು ಹೇಳಿದರು. ದರ್ಶನ್ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದ ಬಳಿಕ ಕುಟುಂಬದ ಜೊತೆ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ರೇಣುಕಾಸ್ವಾಮಿ ತಂದೆ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಯಾರನ್ನಾದರೂ ಸ್ವಾಗತಿಸುತ್ತೇವೆ

ಸಂದರ್ಶನವೊಂದರಲ್ಲಿ ಮಾತನಾಡಿರುವ ರೇಣುಕಾಸ್ವಾಮಿ ತಂದೆ ತಮ್ಮ ಆತಿಥ್ಯದ ಸಂಪ್ರದಾಯದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಾವು 'ಜಂಗಮರು' ಮತ್ತು ನಮ್ಮ ಮನೆಗೆ ಯಾರೇ ಬಂದರೂ ಸ್ವಾಗತಿಸುತ್ತೇವೆ, ಅದು ನಮ್ಮ ಧರ್ಮ ಎಂದರು.

ತಮ್ಮ ಸಮುದಾಯದ ಸಂಪ್ರದಾಯ, ಆಚರಣೆಗಳ ಬಗ್ಗೆ ಮಾತನಾಡಿದ್ದಾರೆ. ಜಂಗಮ ಎಂಬ ಪದವು ಲಿಂಗಾಯತ ಸಮುದಾಯದಲ್ಲಿ ಅಲೆದಾಡುವ ತಪಸ್ವಿ ಅಥವಾ ಶಿವನ ಆರಾಧಕರನ್ನು ಸೂಚಿಸುತ್ತದೆ.

ಹಣಕಾಸಿನ ನೆರವಿನ ಬಗ್ಗೆ ಹೇಳಿದ್ದೇನು

ದರ್ಶನ್ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ಹಣಕಾಸಿನ ನೆರವು ನೀಡಲು ನಿರ್ಧರಿಸಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಅದರ ಬಗ್ಗೆ ಈಗಲೇ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+