Rishab Shetty: ದೈವ ಅಣಕಿಸಿದ್ದ ರಣ್ವೀರ್ ಸಿಂಗ್; ಹೆಸರು ಹೇಳದೆ "ನನಗೆ ಮುಜುಗರ ಆಗುತ್ತೆ" ಎಂದ ರಿಷಬ್
ಇತ್ತೀಚೆಗೆ ಗೋವಾದಲ್ಲಿ ನಡೆದ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾದ ಸಮಾರಂಭದಲ್ಲಿ ರಣ್ವೀರ್ ಸಿಂಗ್ ದೈವವನ್ನು ಅಣಕಿಸಿ ಕೆಂಗಣ್ಣಿಗೆ ಗುರಿಯಾಗಿದ್ದರು. ಸಮಾರೋಪ ಸಮಾರಂಭಕ್ಕೆ ಅತಿಥಿಯಾಗಿ ಬಂದಿದ್ದ ರಣ್ವೀರ್ ಸಿಂಗ್ ವೇದಿಕೆ ಮೇಲೆ ರಿಷಬ್ ಶೆಟ್ಟಿಯ ಸಿನಿಮಾ 'ಕಾಂತಾರ ಚಾಪ್ಟರ್ 1' ಬಗ್ಗೆ ಮಾತಾಡುತ್ತಿದ್ದರು. ಈ ವೇಳೆ ದೈವದ ದೃಶ್ಯವನ್ನು ಮಿಮಿಕ್ರಿ ಮಾಡಿ ಕನ್ನಡಿಗರು, ಕರಾವಳಿ ಮಂದಿಯ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಗ್ಗೆ ಇದೇ ಮೊದಲ ಬಾರಿಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.
ರಿಷಬ್ ಶೆಟ್ಟಿ ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಬಿಹೈಂಡ್ವುಡ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ 'ಕಾಂತಾರ' ಸಿನಿಮಾ ಮಾಡುವುದು ಎಷ್ಟು ರಿಸ್ಕ್ ಎಂಬುವ ಬಗ್ಗೆ ಮಾತಾಡಿದ್ದಾರೆ. ಈ ವೇಳೆ ರಣ್ವೀರ್ ಸಿಂಗ್ ಹೆಸರನ್ನು ತೆಗೆದುಕೊಳ್ಳದೆ, ದೈವವನ್ನು ಅಣಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಕಾಂತಾರ' ಸೀರಿಸ್ ಅನ್ನು ಮಾಡುವಾಗ ಹಿರಿಯರ ಸಲಹೆಯನ್ನು ತೆಗೆದುಕೊಂಡು ದೈವಕ್ಕೆ ಅಪಚಾರ ಆಗದಂತೆ ಸಿನಿಮಾ ಮಾಡಿದ್ದಾಗಿ ರಿಷಬ್ ಶೆಟ್ಟಿ ಸಂದರ್ಶನದಲ್ಲಿ ಹೇಳಿದ್ದಾರೆ.

ಜನರ ಭಾವನೆಗಳಿಗೆ ಧಕ್ಕೆ ಆಗದಂತೆ 'ಕಾಂತಾರ' ಸಿನಿಮಾಗಳಲ್ಲಿ ದೈವವನ್ನು ತೋರಿಸಲಾಗಿದೆ. ಆದರೆ, ಒಮ್ಮೆ ಸಿನಿಮಾ ರಿಲೀಸ್ ಆದ್ಮೇಲೆ ಎಲ್ಲರೂ ದೈವದ ವೇಷ ಧರಿಸಿ ಮಿಮಿಕ್ರಿ ಮಾಡುವುದಕ್ಕೆ ಮುಂದಾಗಿದ್ದಾರೆ. ತಾನು ಹೋದ ಕಡೆಯಲ್ಲೆಲ್ಲ ಇದು ನಡೆದಾಗ ನನಗೆ ಮುಜುಗರವಾಗುತ್ತೆ ಎಂದು ರಿಷಬ್ ಶೆಟ್ಟಿ ಈ ಸಂದರ್ಶನಲ್ಲಿ ಹೇಳಿದ್ದಾರೆ.
"ನನಗೆ ಮುಜಿಗರ ಆಗುವಂತೆ ಮಾಡುತ್ತೆ"
ಬಿಹೈಂಡ್ವುಡ್ ಸಂದರ್ಶನದಲ್ಲಿ ರಣ್ವೀರ್ ಸಿಂಗ್ ಹೆಸರನ್ನು ತೆಗೆದುಕೊಳ್ಳದೆ ಇಂತಹ ಘಟನೆಗಳು ತನಗೆ ಮುಜುಗರ ಆಗುವಂತೆ ಮಾಡುತ್ತೆ ಎಂದಿದ್ದಾರೆ. "ನನಗೆ ಅದು ಮುಜುಗರ ಆಗುವಂತೆ ಮಾಡುತ್ತದೆ. ಇಲ್ಲಿ ಬಹುಪಾಲು ಸಿನಿಮಾ ಹಾಗೂ ಅಭಿನಯಕ್ಕೆ ಸಂಬಂಧಿಸಿದ್ದು, ಅದರಲ್ಲಿ ದೈವದ ಅಂಶವು ಅತೀ ಸೂಕ್ಷ್ಮ ಹಾಗೂ ಪವಿತ್ರವಾದದ್ದು. ಎಲ್ಲಿಗೆ ಹೋದರೂ, ಅವರಿಗೆ ದೈವದ ಅನುಕರಣೆಯನ್ನು ಮಾಡದೆ ಇರುವಂತೆ ಕೇಳಿಕೊಳ್ಳುತ್ತೇನೆ. ಇದು ಜನರ ಭಾವನೆಗಳಲ್ಲಿ ಆಳವಾಗಿ ಉಳಿದುಕೊಂಡಿದೆ" ಎಂದು ರಿಷಬ್ ಶೆಟ್ಟಿ ಸಂದರ್ಶನದಲ್ಲಿ ಹೇಳಿದ್ದಾರೆ.

ಇದೇ ವೇಳೆ ರಿಷಬ್ ಹಾಗೂ ಸಿನಿಮಾ ತಂಡ ಖುದ್ದಾಗಿ ಮನವಿ ಮಾಡಿಕೊಂಡರೂ ಅನುಕರಣೆ ಮಾಡುವುದು ಹಾಗೂ ಅಣಕಿಸುವುದನ್ನು ನಿಲ್ಲಸದೆ ಇರುವುದಕ್ಕೆ ಬೇಸರವನ್ನು ಹೊರ ಹಾಕಿದ್ದಾರೆ. ಗೋವಾದಲ್ಲಿ ರಣ್ವೀರ್ ಸಿಂಗ್ ದೈವವನ್ನು ಅಣಕಿಸಿದ್ದು, ವಿವಾದಕ್ಕೆ ಎಡೆ ಮಾಡಿಕೊಟ್ಟಾಗ ರಿಷಬ್ ಶೆಟ್ಟಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಆದ್ರೀಗ ಇದೇ ಮೊದಲ ಬಾರಿಗೆ ರಿಷಬ್ ಶೆಟ್ಟಿ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಕ್ಷಮೆ ಕೇಳಿದ್ಧ ರಣ್ವೀರ್ ಸಿಂಗ್
ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಗೋವಾದಲ್ಲಿ ರಣ್ವೀರ್ ಸಿಂಗ್ ದೈವವನ್ನು ಅಣಿಸಿದ್ದು, ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ತುಳುನಾಡಿನ ಜನರು ಹಾಗೂ ದೈವಾರಾಧಕರು ರಿಷಬ್ ಶೆಟ್ಟಿ ವಿರುದ್ಧವೂ ಅಸಮಧಾನ ಹೊರ ಹಾಕಿದ್ದರು. ದೇಶದೆಲ್ಲೆಡೆ ರಣ್ವೀರ್ ಸಿಂಗ್ ದೈವ ಅಣಕಿಸಿದ್ದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದರು. ರಿಷಬ್ ಶೆಟ್ಟಿ ಕೂಡ ರಣ್ವೀರ್ ಸಿಂಗ್ಗೆ ಅಣಕಿಸದೇ ಇರುವಂತೆ ಮನವಿ ಮಾಡಿದ್ದರೂ ನಿಲ್ಲಿಸಿರಲಿಲ್ಲ. ವಿವಾದ ಭುಗಿಲೆದ್ದ ಬೆನ್ನಲ್ಲೇ ರಣ್ವೀರ್ ಸಿಂಗ್ ಕ್ಷಮೆಯಾಚಿಸಿದ್ದರು.
"ನನ್ನ ಉದ್ದೇಶ ರಿಷಬ್ ಶೆಟ್ಟಿಯ ಅದ್ಭುತ ಅಭಿನಯವನ್ನು ಹೈಲೈಟ್ ಮಾಡುವುದಾಗಿತ್ತು. ನಾನೊಬ್ಬ ನಟನಾಗಿ ಇಂತಹ ದೃಶ್ಯಗಳಲ್ಲಿ ಪರ್ಫಾಮ್ ಮಾಡುವುದು ಎಷ್ಟು ಕಷ್ಟ ಅನ್ನೋದು ಗೊತ್ತಿದೆ. ಇದು ನನ್ನ ಉದ್ದೇಶವಾಗಿತ್ತು. ನಾನು ಈ ದೇಶದ ಎಲ್ಲಾ ಸಂಸ್ಕೃತಿ, ಆಚಾರ-ವಿಚಾರಗಳನ್ನು ಗೌರವಿಸುತ್ತೇನೆ. ಇದರ ಹೊರತಾಗಿ ನಾನು ಯಾರದ್ದಾದರೂ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದರೆ, ಕ್ಷಮೆಯಾಚಿಸುತ್ತೇನೆ" ಎಂದು ರಣ್ವೀರ್ ಸಿಂಗ್ ಹೇಳಿದ್ದರು.
-
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ












Click it and Unblock the Notifications