Jai Hanuman: ಹನುಮನ ಪಾತ್ರದಲ್ಲಿ ರಿಷಬ್ ಶೆಟ್ಟಿ; ಫಸ್ಟ್ ಲುಕ್ ರಿಲೀಸ್
ಕಾಂತಾರ ಸಿನಿಮಾ ಮೂಲಕ ದೇಶಾದ್ಯಂತ ತನ್ನದೇ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿರುವ ನಟ ರಿಷಬ್ ಶೆಟ್ಟಿ. ಸದ್ಯ ಭಾರಿ ಬಜೆಟ್ನಲ್ಲಿ ಕಾಂತಾರ-ಅಧ್ಯಾಯ 1 ಸಿನಿಮಾವನ್ನು ತೆರೆಗೆ ತರಲು ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, 2025ರಲ್ಲಿ ತೆರೆ ಮೇಲೆ ಬರುವ ಸಾಧ್ಯತೆ ಇದೆ. ಈ ನಡುವೆ ಮತ್ತೊಂದು ದೊಡ್ಡ ಬಜೆಟ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಿಷಬ್ ಶೆಟ್ಟಿ.
ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಹನು-ಮ್ಯಾನ್ ಸಿನಿಮಾ ಭಾರಿ ಯಶಸ್ಸು ಕಂಡಿತ್ತು. ಈ ಸಿನಿಮಾ ಮುಂದುವರಿದ ಭಾಗ 'ಜೈ ಹನುಮಾನ್' ತೆರೆಗೆ ಬರಲಿದೆ. ಚಿತ್ರೀಕರಣ ನಡೆಯುತ್ತಿದ್ದು ಈ ಸಿನಿಮಾ ಕೂಡ 2025ರಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. ಜೈ ಹನುಮಾನ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಹನುಮನ ಪಾತ್ರ ಮಾಡುತ್ತಿದ್ದು ಇಂದು ಮೊದಲ ಲುಕ್ ರಿಲೀಸ್ ಮಾಡಿದ್ದಾರೆ.

ಪ್ರಶಾಂತ್ ವರ್ಮಾ ನಿರ್ದೇಶನದ ಹನು-ಮ್ಯಾನ್ ಸಿನಿಮಾ ತೆಲುಗು ಸಿನಿಮಾ ರಂಗದಲ್ಲಿ ಹಲವು ದಾಖಲೆ ಬರೆದಿದೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾದ ಸಿನಿಮಾ, ಸ್ಟಾರ್ ನಟರ ಸಿನಿಮಾಗಳಿಗೆ ಸಡ್ಡು ಹೊಡೆದು ಗಲ್ಲಾ ಪೆಟ್ಟಿಗೆಯಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಹೊಸಬರ ಸಿನಿಮಾವಾದರೂ ತಂತ್ರಜ್ಞಾನ, ಆಧ್ಯಾತ್ಮ ಎಲ್ಲವನ್ನೂ ಮಿಳಿತಗೊಳಿಸಿದ ಒಂದು ಫ್ಯಾಂಟಸಿ ಸಿನಿಮಾವಾಗಿ ಕೌಟುಂಬಿಕ ಪ್ರೇಕ್ಷಕರ ಮನ ಗೆದ್ದಿತ್ತು.
ಮೊದಲ ಭಾಗ ದೊಡ್ಡ ಮಟ್ಟದಲ್ಲಿ ಹಿಟ್ ಆದ ಬಳಿಕ ಇದೀಗ ಭಾರಿ ಬಜೆಟ್ನಲ್ಲಿ ಜೈ ಹನುಮಾನ್ ಸಿನಿಮಾವರನ್ನು ತೆರೆಗೆ ತರಲು ಸಿನಿಮಾ ತಂಡ ಸಜ್ಜಾಗಿದೆ. ಎರಡನೇ ಭಾಗದಲ್ಲಿ ಹನುಮನ ಪಾತ್ರ ಸಾಕಷ್ಟು ಪ್ರಮುಖವಾಗಿರುವ ಕಾರಣ, ದೊಡ್ಡ ನಟರೊಬ್ಬರು ಈ ಪಾತ್ರ ಮಾಡಬೇಕು ಎನ್ನುವುದು ಚಿತ್ರತಂಡದ ಆಸೆಯಾಗಿತ್ತು. ಸಿನಿಮಾ ತಂಡ ರಿಷಬ್ ಶೆಟ್ಟಿಯವರನ್ನು ಪಾತ್ರಕ್ಕಾಗಿ ಸಂಪರ್ಕಿಸಿದ್ದು, ರಿಷಬ್ ಶೆಟ್ಟಿ ಕೂಡ ಸಂತೋಷದಿಂದಲೇ ಒಪ್ಪಿಕೊಂಡಿದ್ದಾರೆ.
ಫಸ್ಟ್ ಲುಕ್ ಹಂಚಿಕೊಂಡ ರಿಷಬ್ ಶೆಟ್ಟಿ
ಸಿನಿಮಾದಲ್ಲಿ ಹನುಮನ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಾರೆ ಎನ್ನುವ ಗುಟ್ಟನ್ನು ಈವರೆಗೂ ಬಿಟ್ಟುಕೊಟ್ಟಿರಲಿಲ್ಲ. ಇದೀಗ ಸಿನಿಮಾ ತಂಡ ಅಧಿಕೃತವಾಗಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಎಲ್ಲಾ ಕುತೂಹಲಗಳಿಗೆ ತೆರೆ ಎಳೆದಿದೆ.
ಕನ್ನಡ ನೆಲದ ವರಸುತ ಆಂಜನೇಯನ ಆಶೀರ್ವಾದದೊಂದಿಗೆ ಭಾರತ ಇತಿಹಾಸದ ಸರ್ವಶ್ರೇಷ್ಠ ಭಾವವೊಂದನ್ನು ತೆರೆಯ ಮೇಲೆ ತರಲಿದ್ದೇವೆ.
— Rishab Shetty (@shetty_rishab) October 30, 2024
ನಿಮ್ಮೆಲ್ಲರ ಪ್ರೀತಿ ಬೆಂಬಲ ಆಶೀರ್ವಾದ ಎಂದಿನಂತೆ ಸದಾ ಇರಲಿ - ಜೈ ಹನುಮಾನ್
A vow from the Tretayuga, bound to be fulfilled in the Kaliyuga🙏
We bring forth an epic of loyalty, courage and… pic.twitter.com/Zvgnt1tGnl
ರಿಷಬ್ ಶೆಟ್ಟಿ ರಾಮನ ವಿಗ್ರಹ ಕುಳಿತಿರುವ ಹನುಮನ ಚಿತ್ರವನ್ನು ಹಂಚಿಕೊಂಡಿದ್ದು ಸಂತಸ ವ್ಯಕ್ತಪಡಿಸಿದ್ದಾರೆ. "ಕನ್ನಡ ನೆಲದ ವರಸುತ ಆಂಜನೇಯನ ಆಶೀರ್ವಾದದೊಂದಿಗೆ ಭಾರತ ಇತಿಹಾಸದ ಸರ್ವಶ್ರೇಷ್ಠ ಭಾವವೊಂದನ್ನು ತೆರೆಯ ಮೇಲೆ ತರಲಿದ್ದೇವೆ. ನಿಮ್ಮೆಲ್ಲರ ಪ್ರೀತಿ ಬೆಂಬಲ ಆಶೀರ್ವಾದ ಎಂದಿನಂತೆ ಸದಾ ಇರಲಿ - ಜೈ ಹನುಮಾನ್" ಎಂದು ಹೇಳಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications