Jai Hanuman: ಹನುಮನ ಪಾತ್ರದಲ್ಲಿ ರಿಷಬ್ ಶೆಟ್ಟಿ; ಫಸ್ಟ್ ಲುಕ್ ರಿಲೀಸ್
ಕಾಂತಾರ ಸಿನಿಮಾ ಮೂಲಕ ದೇಶಾದ್ಯಂತ ತನ್ನದೇ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿರುವ ನಟ ರಿಷಬ್ ಶೆಟ್ಟಿ. ಸದ್ಯ ಭಾರಿ ಬಜೆಟ್ನಲ್ಲಿ ಕಾಂತಾರ-ಅಧ್ಯಾಯ 1 ಸಿನಿಮಾವನ್ನು ತೆರೆಗೆ ತರಲು ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, 2025ರಲ್ಲಿ ತೆರೆ ಮೇಲೆ ಬರುವ ಸಾಧ್ಯತೆ ಇದೆ. ಈ ನಡುವೆ ಮತ್ತೊಂದು ದೊಡ್ಡ ಬಜೆಟ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಿಷಬ್ ಶೆಟ್ಟಿ.
ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಹನು-ಮ್ಯಾನ್ ಸಿನಿಮಾ ಭಾರಿ ಯಶಸ್ಸು ಕಂಡಿತ್ತು. ಈ ಸಿನಿಮಾ ಮುಂದುವರಿದ ಭಾಗ 'ಜೈ ಹನುಮಾನ್' ತೆರೆಗೆ ಬರಲಿದೆ. ಚಿತ್ರೀಕರಣ ನಡೆಯುತ್ತಿದ್ದು ಈ ಸಿನಿಮಾ ಕೂಡ 2025ರಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. ಜೈ ಹನುಮಾನ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಹನುಮನ ಪಾತ್ರ ಮಾಡುತ್ತಿದ್ದು ಇಂದು ಮೊದಲ ಲುಕ್ ರಿಲೀಸ್ ಮಾಡಿದ್ದಾರೆ.

ಪ್ರಶಾಂತ್ ವರ್ಮಾ ನಿರ್ದೇಶನದ ಹನು-ಮ್ಯಾನ್ ಸಿನಿಮಾ ತೆಲುಗು ಸಿನಿಮಾ ರಂಗದಲ್ಲಿ ಹಲವು ದಾಖಲೆ ಬರೆದಿದೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾದ ಸಿನಿಮಾ, ಸ್ಟಾರ್ ನಟರ ಸಿನಿಮಾಗಳಿಗೆ ಸಡ್ಡು ಹೊಡೆದು ಗಲ್ಲಾ ಪೆಟ್ಟಿಗೆಯಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಹೊಸಬರ ಸಿನಿಮಾವಾದರೂ ತಂತ್ರಜ್ಞಾನ, ಆಧ್ಯಾತ್ಮ ಎಲ್ಲವನ್ನೂ ಮಿಳಿತಗೊಳಿಸಿದ ಒಂದು ಫ್ಯಾಂಟಸಿ ಸಿನಿಮಾವಾಗಿ ಕೌಟುಂಬಿಕ ಪ್ರೇಕ್ಷಕರ ಮನ ಗೆದ್ದಿತ್ತು.
ಮೊದಲ ಭಾಗ ದೊಡ್ಡ ಮಟ್ಟದಲ್ಲಿ ಹಿಟ್ ಆದ ಬಳಿಕ ಇದೀಗ ಭಾರಿ ಬಜೆಟ್ನಲ್ಲಿ ಜೈ ಹನುಮಾನ್ ಸಿನಿಮಾವರನ್ನು ತೆರೆಗೆ ತರಲು ಸಿನಿಮಾ ತಂಡ ಸಜ್ಜಾಗಿದೆ. ಎರಡನೇ ಭಾಗದಲ್ಲಿ ಹನುಮನ ಪಾತ್ರ ಸಾಕಷ್ಟು ಪ್ರಮುಖವಾಗಿರುವ ಕಾರಣ, ದೊಡ್ಡ ನಟರೊಬ್ಬರು ಈ ಪಾತ್ರ ಮಾಡಬೇಕು ಎನ್ನುವುದು ಚಿತ್ರತಂಡದ ಆಸೆಯಾಗಿತ್ತು. ಸಿನಿಮಾ ತಂಡ ರಿಷಬ್ ಶೆಟ್ಟಿಯವರನ್ನು ಪಾತ್ರಕ್ಕಾಗಿ ಸಂಪರ್ಕಿಸಿದ್ದು, ರಿಷಬ್ ಶೆಟ್ಟಿ ಕೂಡ ಸಂತೋಷದಿಂದಲೇ ಒಪ್ಪಿಕೊಂಡಿದ್ದಾರೆ.
ಫಸ್ಟ್ ಲುಕ್ ಹಂಚಿಕೊಂಡ ರಿಷಬ್ ಶೆಟ್ಟಿ
ಸಿನಿಮಾದಲ್ಲಿ ಹನುಮನ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಾರೆ ಎನ್ನುವ ಗುಟ್ಟನ್ನು ಈವರೆಗೂ ಬಿಟ್ಟುಕೊಟ್ಟಿರಲಿಲ್ಲ. ಇದೀಗ ಸಿನಿಮಾ ತಂಡ ಅಧಿಕೃತವಾಗಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಎಲ್ಲಾ ಕುತೂಹಲಗಳಿಗೆ ತೆರೆ ಎಳೆದಿದೆ.
ಕನ್ನಡ ನೆಲದ ವರಸುತ ಆಂಜನೇಯನ ಆಶೀರ್ವಾದದೊಂದಿಗೆ ಭಾರತ ಇತಿಹಾಸದ ಸರ್ವಶ್ರೇಷ್ಠ ಭಾವವೊಂದನ್ನು ತೆರೆಯ ಮೇಲೆ ತರಲಿದ್ದೇವೆ.
— Rishab Shetty (@shetty_rishab) October 30, 2024
ನಿಮ್ಮೆಲ್ಲರ ಪ್ರೀತಿ ಬೆಂಬಲ ಆಶೀರ್ವಾದ ಎಂದಿನಂತೆ ಸದಾ ಇರಲಿ - ಜೈ ಹನುಮಾನ್
A vow from the Tretayuga, bound to be fulfilled in the Kaliyuga🙏
We bring forth an epic of loyalty, courage and… pic.twitter.com/Zvgnt1tGnl
ರಿಷಬ್ ಶೆಟ್ಟಿ ರಾಮನ ವಿಗ್ರಹ ಕುಳಿತಿರುವ ಹನುಮನ ಚಿತ್ರವನ್ನು ಹಂಚಿಕೊಂಡಿದ್ದು ಸಂತಸ ವ್ಯಕ್ತಪಡಿಸಿದ್ದಾರೆ. "ಕನ್ನಡ ನೆಲದ ವರಸುತ ಆಂಜನೇಯನ ಆಶೀರ್ವಾದದೊಂದಿಗೆ ಭಾರತ ಇತಿಹಾಸದ ಸರ್ವಶ್ರೇಷ್ಠ ಭಾವವೊಂದನ್ನು ತೆರೆಯ ಮೇಲೆ ತರಲಿದ್ದೇವೆ. ನಿಮ್ಮೆಲ್ಲರ ಪ್ರೀತಿ ಬೆಂಬಲ ಆಶೀರ್ವಾದ ಎಂದಿನಂತೆ ಸದಾ ಇರಲಿ - ಜೈ ಹನುಮಾನ್" ಎಂದು ಹೇಳಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications