ಚಿತ್ರಾಪುರ ಮಠದಲ್ಲಿ ರಾಕಿಂಗ್ ದಂಪತಿ: ಕಿರಾಣಿ ಅಂಗಡಿಯಲ್ಲಿ ರಾಧಿಕಾಗೆ ಐಸ್ಕ್ರೀಮ್ ಕೊಡಿಸಿದ ಯಶ್
ಕನ್ನಡ ಚಿತ್ರರಂಗದ ಕ್ಯೂಟ್ ದಂಪತಿ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಸದ್ಯ ಉತ್ತರ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿರುವ ಈ ಸ್ಟಾರ್ ದಂಪತಿ ನಿನ್ನೆ(ಫೆಬ್ರವರಿ 16) ಶಿರಾಲಿಯ ಚಿತ್ರಾಪುರ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಯಶ್ ಸ್ಥಳೀಯ ಕಿರಾಣಿ ಅಂಗಡಿಯೊಂದಕ್ಕೆ ತೆರಳಿ ರಾಧಿಕಾ ಪಂಡಿತ್ಗೆ ಐಸ್ ಕ್ರೀಮ್ ಕೊಡಿಸಿದ್ದಾರೆ.
ಶಿರಾಲಿಯ ಚಿತ್ರಾಪುರ ಮಠ ಬೀದಿಯಲ್ಲಿರುವ ಅಂಗಡಿಯಲ್ಲಿ ಯಶ್ ಐಸ್ ಕ್ರೀಮ್ ಖರೀದಿಸಿ ರಾಧಿಕಾ ಪಂಡಿತ್ ಅವರಿಗೆ ನೀಡಿರುವ ಹಾಗೂ ರಾಧಿಕಾ ಪಂಡಿತ್ ಕಿರಾಣಿ ಅಂಗಡಿ ಬೆಂಚ್ ಮೇಲೆ ಕುಳಿತು ಐಸ್ ಕ್ರೀಮ್ ತಿನ್ನುತ್ತಿರುವ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಪ್ರೀತಿಯಿಂದ ಕಮೆಂಟ್ ಮಾಡುತ್ತಿದ್ದು, ಇದು ಬಾಸ್ ಹಾಗೂ ಅತ್ತಿಗೆ ಸರಳತೆ ಎಂದಿದ್ದಾರೆ.

ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯ ಚಿತ್ರಾಪುರ ಮಠಕ್ಕೆ ನಟ ಯಶ್ ಹಾಗೂ ರಾಧಿಕಾ ಪಂಡಿತ ದಂಪತಿ ನಿನ್ನೆ ರಾತ್ರಿ ಭೇಟಿ ಮಾಡಿ ದೇವರ ದರ್ಶನ ಪಡೆದಿದ್ದಾರೆ. ಅಲ್ಲದೇ ನಿನ್ನೆ ರಾತ್ರಿ ಅಲ್ಲೇ ವಾಸ್ತವ್ಯ ಮಾಡಿದ್ದಾರೆ. ಚಿತ್ರಾಪುರ ಮಠದ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಯಶ್ ಹಾಗೂ ರಾಧಿಕಾ ಪಂಡಿತ ದಂಪತಿ ಸತತ 2 ವರೆಗೆ ಗಂಟೆಗೂ ಅಧಿಕ ಕಾಲ ಸ್ವಾಮೀಜಿಗಳ ಜೊತೆಗೆ ಮಾತು ಕತೆ ನಡೆಸಿದ್ದಾರೆ.
ಚಿತ್ರಾಪುರ ಮಠಕ್ಕೆ ಯಶ್ ಹಾಗೂ ರಾಧಿಕಾ ಪಂಡಿತ್ ಜೊತೆಗೆ ಮಕ್ಕಳು ಐರಾ ಮಗ ಯಥರ್ವ ಹಾಗೂ ರಾಧಿಕಾ ಪಂಡಿತ್ ತಂದೆ ತಾಯಿ ಕೂಡ ಆಗಮಿಸಿದ್ದರು. ಸ್ಯಾಂಡಲ್ವುಡ್ನ ಸ್ಟಾರ್ ದಂಪತಿ ಆಗಮಿಸುತ್ತಿರುವ ಸುದ್ದಿ ತಿಳಿದು ಅಭಿಮಾನಿಗಳು ಚಿತ್ರಾಪುರ ಮಠಕ್ಕೆ ದೌಡಾಯಿಸಿ ಕಾದಿದ್ದಾರೆ. ಚಿತ್ರಾಪುರ ಮಠದ ಸ್ವಾಮೀಜಿಗಳ ಭೇಟಿ ಬಳಿಕ ಮಠದಿಂದ ಹೊರಬಂದ ಯಶ್ ಹಾಗೂ ರಾಧಿಕಾ ಪಂಡಿತ ಅಭಿಮಾನಿಗಳ ಬಳಿ ಬಂದು ಸಮಯ ಕಳೆದು ಫೋಟೋ ಹಾಗೂ ಆಟೋಗ್ರಾಫ್ ನೀಡಿ ತೆರಳಿದ್ದಾರೆ.
ಯಶ್ ಹಾಗೂ ರಾಧಿಕಾ ಪಂಡಿತ್ ಆಗಮನದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಿತ್ರಾಪುರ ಮಠದ ಸುತ್ತಲೂ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿತ್ತು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications