Darshan Thoogudeepa: ದರ್ಶನ್ಗೆ ಬಿಗ್ ಶಾಕ್- ಗನ್ ಸೆರಂಡರ್ ಮಾಡಲು ನೋಟೀಸ್
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಮುಗಿಯುವವರೆಗೂ ಗನ್ ಸೆರಂಡರ್ ಮಾಡಲು ನೋಟೀಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ ಆರ್ಆರ್ ನಗರ ಪೊಲೀಸರು ದರ್ಶನ್ಗೆ ನೋಟೀಸ್ ಜಾರಿ ಮಾಡಿದ್ದಾರೆ.
ದರ್ಶನ್ಗೆ ಜಾಮೀನು ಮಂಜೂರು ಮಾಡಿದ್ದರೂ ಕೂಡ ನಾನಾ ಷರತ್ತುಗಳನ್ನು ವಿಧಿಸಲಾಗಿದೆ. ಗನ್ ಲೈಸೆನ್ಸ್ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದ ದರ್ಶನ್ ಅವರಿಗೆ ಪೊಲೀಸರು ಬಿಗ್ ಶಾಕ್ ಕೊಟ್ಟಿದ್ದಾರೆ. ನಟ ದರ್ಶನ್ ಅವರ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತಾಗಿದೆ. ಹೀಗಾಗಿ ಪ್ರಕರಣ ಮುಗಿಯುವವರೆಗೂ ಡಿ-ಬಾಸ್ ಗನ್ ಬಳಸುವಂತಿಲ್ಲ.

ಸ್ಯಾಂಡಲ್ವುಡ್ ನಟ ದರ್ಶನ್ ಬಳಿ ಇರುವ ಗನ್ ಸೆರಂಡರ್ ಮಾಡುವಂತೆ ಆರ್.ಆರ್ ನಗರ ಪೊಲೀಸರು ದರ್ಶನ್ಗೆ ನೋಟೀಸ್ ಜಾರಿ ಮಾಡಿದ್ದರು. ಕೊಲೆ ಪ್ರಕರಣ ಇತ್ಯಾರ್ಥ ಆಗುವವರೆಗೂ ಗನ್ ತಮ್ಮ ಬಳಿ ಇಟ್ಟುಕೊಳ್ಳದಿರಲು ಪೊಲೀಸರು ನೋಟೀಸ್ ಜಾರಿ ಮಾಡಿದ್ದರು. ಆದರೆ ಇದಕ್ಕೆ ದರ್ಶನ್ ತಮಗೆ ಗನ್ ಬೇಕು ಎನ್ನುವ ಮನವಿಯನ್ನು ಮಾಡಿದ್ದರು.
ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಗೆ ದರ್ಶನ್ ಪತ್ರ ಪರೆದು ತಮ್ಮ ಆತ್ಮ ರಕ್ಷಣೆಗೆ ಗನ್ ಬೇಕು ಎಂದು ಮನವಿ ಮಾಡಿದ್ದರು. ನಾನೊಬ್ಬ ಸೆಲೆಬ್ರಿಟಿ. ನಾನು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ಜನ ಸೇರಿರುತ್ತಾರೆ. ಹೀಗಾಗಿ ನನ್ನ ಆತ್ಮ ರಕ್ಷಣೆಗೆ ನನಗೆ ಗನ್ ಬೇಕು ಎಂದು ದರ್ಶನ್ ಪತ್ರದಲ್ಲಿ ತಿಳಿಸಿದ್ದರು. ಆದರೆ ಇದು ಪ್ರಯೋಜವಾಗಿಲ್ಲ. ದರ್ಶನ್ ಒಬ್ಬ ಆರೋಪಿ ಆಗಿರುವುದರಿಂದ ಪ್ರಕರಣ ಮುಗಿಯುವವರೆಗೂ ಗನ್ ಸೆರಂಡರ್ ಮಾಡುವಂತೆ ತಿಳಿಸಿಲಾಗಿದೆ.
ಹೀಗಾಗಿ ದರ್ಶನ್ ಅವರ ಬಳಿ ಇರುವ ಎರಡು ಗನ್ಗಳನ್ನು ಸೆರಂಡರ್ ಮಾಡಲು ನಗರದ ಆರ್ಆರ್ ನಗರ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications