Get Updates
Get notified of breaking news, exclusive insights, and must-see stories!

Sabarimala Gold Case: ಶಬರಿಮಲೆ ಚಿನ್ನ ಕಳವು ಪ್ರಕರಣ: ಕಾಂತಾರ: ಚಾಪ್ಟರ್ 1 ನಟ ಜಯರಾಮ್ ವಿಚಾರಣೆ

Sabarimala Gold Theft Case: ಶಬರಿಮಲೆ ಚಿನ್ನ ಕಳವು ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಈ ಸಂಬಂಧ ಕಾಂತಾರ: ಚಾಪ್ಟರ್ 1 ಚಿತ್ರದಲ್ಲಿ ನಟಿಸಿರುವ ನಟ ಜಯರಾಮ್ ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಜೊತೆ ಜಯರಾಮ್ ಅವರಿಗೆ ಸಂಪರ್ಕ ಇರಬಹುದೆಂಬ ಅನುಮಾನ ಹಿನ್ನೆಲೆಯಲ್ಲಿ ಈ ವಿಚಾರಣೆ ನಡೆದಿದೆ ಎಂದು ತಿಳಿದುಬಂದಿದೆ.

ಶಬರಿಮೆಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳ್ಳತನ ಸಂಬಂಧ ಸದ್ದಿಲ್ಲದೆ, ಎಸ್‌ಐಟಿ ತನಿಖೆಯನ್ನು ಚುರುಕುಪಡಿಸಿದ್ದು, ಇದೀಗ ಪ್ರಕರಣ ಸಂಬಂಧ ಮಲಯಾಳಂ ನಟ ಜಯರಾಮ್ ಅವರನ್ನು ವಿಚಾರಣೆ ನಡೆಸಿದೆ. ಇವರು ಮೂಲತಃ ಮಲಯಾಳಂ ನಟರಾಗಿದ್ದರೂ ಸಹ ಹಲವು ಭಾಷೆಗಳ ಚಿತ್ರಗಳಲ್ಲಿ ನಟನೆ ಮಾಡಿದವರಾಗಿದ್ದಾರೆ.

Sabarimala Gold Theft Case Takes New Turn Kantara Chapter 1 Actor Jayaram Investigation by SIT

2019ರಲ್ಲಿ ಶಬರಿಮಲೆ ದೇವಸ್ಥಾನದ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ವೇಳೆ ಸುಮಾರು 4.5 ಕೆಜಿ ಚಿನ್ನ ಕಾಣೆಯಾಗಿತ್ತು. ಈ ಪ್ರಕರಣದಲ್ಲಿ ಉನ್ನಿಕೃಷ್ಣನ್ ಪೊಟ್ಟಿ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ. ಉನ್ನಿಕೃಷ್ಣನ್ ಜೊತೆ ಜಯರಾಮ್ ಅವರ ಪರಿಚಯ ಮತ್ತು ಒಡನಾಟದ ಬಗ್ಗೆ ಮಾಹಿತಿ ಪಡೆಯಲು ಎಸ್‌ಐಟಿ ಅವರನ್ನು ಕರೆಸಿ ಪ್ರಶ್ನಿಸಿದೆ ಎನ್ನಲಾಗಿದೆ.

ವಿಚಾರಣೆಗೆ ಇಳಿದಿದ್ದು ಯಾವಾಗ?: ತನಿಖಾ ಮೂಲಗಳ ಪ್ರಕಾರ, 2019ರಲ್ಲಿ ಚೆನ್ನೈನಲ್ಲಿ ಉನ್ನಿಕೃಷ್ಣನ್ ಆಯೋಜಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಜಯರಾಮ್ ಭಾಗವಹಿಸಿದ್ದರು. ಈ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಇದೇ ವಿಡಿಯೋ ಎಸ್‌ಐಟಿ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ವಿಚಾರಣೆ ವೇಳೆ ಉನ್ನಿಕೃಷ್ಣನ್ ಆಯೋಜಿಸಿದ್ದ ಇತರ ಪೂಜೆಗಳಲ್ಲಿ ಜಯರಾಮ್ ಎಷ್ಟು ಬಾರಿ ಭಾಗವಹಿಸಿದ್ದರು, ಅವರಿಬ್ಬರ ನಡುವೆ ಆರ್ಥಿಕ ಅಥವಾ ವೈಯಕ್ತಿಕ ಸಂಬಂಧವಿದೆಯೇ ಎಂಬ ಪ್ರಶ್ನೆಗಳನ್ನೂ ಕೇಳಲಾಗಿದೆ. ಆದರೆ, ಈ ವಿಚಾರಣೆ ಸಂಪೂರ್ಣವಾಗಿ ಪೂಜಾ ಕಾರ್ಯಕ್ರಮಗಳು ಮತ್ತು ಪರಿಚಯದ ಮಟ್ಟಕ್ಕೆ ಮಾತ್ರ ಸೀಮಿತವಾಗಿತ್ತು ಎನ್ನಲಾಗಿದೆ.

ಹಲವು ಭಾಷೆಗಳ ಸಿನಿಮಾಗಳಲ್ಲಿ ನಟನೆ: ನಟ ಜಯರಾಮ್ ಕನ್ನಡ ಚಿತ್ರರಂಗಕ್ಕೂ ಚಿರಪರಿಚಿತರು. ಇತ್ತೀಚೆಗೆ ಅವರು ಘೋಸ್ಟ್ ಸಿನಿಮಾದಲ್ಲಿ ನಟಿಸಿದ್ದರು. ಮೂಲತಃ ಮಲಯಾಳಂ ನಟರಾಗಿರುವ ಅವರು, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವಲ್ಲೂ ಪರಿಣಿತರಾಗಿದ್ದು, ಪರಭಾಷಾ ಚಿತ್ರಗಳಿಗೂ ಸ್ವತಃ ಡಬ್ಬಿಂಗ್ ಮಾಡುವ ಮೂಲಕ ಮೆಚ್ಚುಗೆ ಪಡೆದಿದ್ದಾರೆ. ಇನ್ನೂ ಇತ್ತೀಚೆಗಷ್ಟೇ ತೆರೆಗೆ ಅಪ್ಪಳಿಸಿದ ರಿಷಭ್ ಶೆಟ್ಟಿ ನಟನೆಯ ಕಾಂತಾರ: ಚಾಪ್ಟರ್ 1 ಚಿತ್ರದಲ್ಲಿ ಅವರು ರಾಜಶೇಖರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನೂ ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ ಕುರಿತು ಎಸ್‌ಐಟಿ ತನಿಖೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಗಳು ಹೊರಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಚುರುಕುಪಡಿಸಿದ್ದು, ಸದ್ದಿಲ್ಲದೆ ವಿಚಾರಣೆ ನಡೆಸುತ್ತಲೇ ಬಂದಿದೆ. ಇದು ಮುಂದಿನ ದಿನಗಳಲ್ಲಿ ಮತ್ತೆ ಯಾವ ತಿರುವುದು ಪಡೆದಯಲಿದೆ ಎಂದು ಕಾದುನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+