AR Rahman: ಎಆರ್ ರೆಹಮಾನ್ ಬಾಳಲ್ಲಿ ಬಿರುಗಾಳಿ! ವಿಚ್ಛೇದನ ಘೋಷಿಸಿದ ಪತ್ನಿ ಸಾಯಿರಾ
ಸಂಗೀತ ಮಾಂತ್ರಿಕರೆಂದೇ ಹೆಸರಾಗಿರುವ ಗಾಯಕ, ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಬಾಳಲ್ಲಿ ಬಿರುಗಾಳಿ ಎದ್ದಿದೆ. ರೆಹಮಾನ್ ಪತ್ನಿ ಸಾಯಿರಾ ತಾವು ಗಂಡನಿಂದ ಬೇರೆಯಾಗುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಸಾಯಿರಾ ಅವರ ವಕೀಲರಾದ ವಂದನಾ ಶಾ ಇಬ್ಬರು ವಿಚ್ಛೇದನ ಪಡೆಯುತ್ತಿರುವ ನಿರ್ಧಾರದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾಲಿವುಡ್ನಲ್ಲಿ ಮಾತ್ರವಲ್ಲದೆ ಭಾರತ ಚಲನಚಿತ್ರರಂಗದಲ್ಲಿ ಈ ಸುದ್ದಿ ಅಚ್ಚರಿಗೊಳ್ಳುವಂತೆ ಮಾಡಿದೆ.
"ಮದುವೆಯಾಗಿ ಹಲವು ವರ್ಷಗಳ ಬಳಿಕ, ಸಾಯಿರಾ ಅವರು ತಮ್ಮ ಪತಿ ಎಆರ್ ರೆಹಮಾನ್ರಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇಬ್ಬರ ನಡುವಿನ ಸಂಬಂಧದಲ್ಲಿ ಭಾವನಾತ್ಮಕ ಒತ್ತಡ ಹೆಚ್ಚಾಗಿದ್ದು, ಈ ನಿರ್ಧಾರಕ್ಕೆ ಬರಲಾಗಿದೆ. ಇಬ್ಬರ ನಡುವೆ ಉತ್ತಮ ಪ್ರೀತಿಯಿದ್ದರೂ, ಉದ್ವಿಗ್ನತೆ, ಸಮಸ್ಯೆಗಳು ಇಬ್ಬರ ನಡುವೆ ಅಂತರವನ್ನು ಹೆಚ್ಚಿಸಿವೆ ಎಂದು ದಂಪತಿಗಳು ಅರ್ಥ ಮಾಡಿಕೊಂಡಿದ್ದಾರೆ.

ಈ ಸಮಯದಲ್ಲಿ ಇಬ್ಬರ ನಡುವೆ ಮತ್ತೆ ಬಾಂಧವ್ಯ ಉತ್ತಮವಾಗಲು ಸಾಧ್ಯವಿಲ್ಲ ಎಂದು ಅರ್ಥ ಮಾಡಿಕೊಂಡಿದ್ದು, ಸಾಯಿರಾ ಅವರು ನೋವು ಮತ್ತು ಸಂಕಟದಿಂದಲೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ಸಾಯಿರಾ, ಸಾರ್ವಜನಿಕರು ಗೌಪ್ಯತೆ, ಘನತೆ ಕಾಪಾಡುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಎಆರ್ ರಹಮಾನ್ ಮತ್ತು ಸಾಯಿರಾ 1995ರಲ್ಲಿ ಮದುವೆಯಾಗಿದ್ದರು, ಇವರಿಗೆ ಖತೀಜಾ, ರಹೀಮಾ ಮತ್ತು ಅಮೀನ್ ಎನ್ನುವ ಮೂವರು ಮಕ್ಕಳಿದ್ದಾರೆ. ಎಆರ್ ರೆಹಮಾನ್ ಭಾರತೀಯ ಸಂಗೀತ ಕ್ಷೇತ್ರದಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ಸಂಗೀತ ನಿರ್ದೇಶಕರು, ಭಾರತಕ್ಕೆ ಆಸ್ಕರ್ ಪ್ರಶಸ್ತಿ ತಂದುಕೊಟ್ಟ ಹೆಗ್ಗಳಿಕೆ ಕೂಡ ಅವರದ್ದಾಗಿದೆ.
ಎಆರ್ ರೆಹಮಾನ್ ಇತ್ತೀಚೆಗೆ ಸಂಗೀತ ನಿರ್ದೇಶನ ಮಾಡಿದ ಧನುಷ್ ನಿರ್ದೇಶನದ ರಾಯನ್ ಸಿನಿಮಾದ ಹಾಡು ಭಾರಿ ಜನಪ್ರಿಯವಾಗಿತ್ತು. ಛಾವಾ, ಥಗ್ ಲೈಫ್, ಗಾಂಧಿ ಟಾಕ್ಸ್ ಮುಂತಾದ ಸಿನಿಮಾಗಳಿಗೆ ಎಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications