AR Rahman: ಎಆರ್ ರೆಹಮಾನ್ ಬಾಳಲ್ಲಿ ಬಿರುಗಾಳಿ! ವಿಚ್ಛೇದನ ಘೋಷಿಸಿದ ಪತ್ನಿ ಸಾಯಿರಾ
ಸಂಗೀತ ಮಾಂತ್ರಿಕರೆಂದೇ ಹೆಸರಾಗಿರುವ ಗಾಯಕ, ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಬಾಳಲ್ಲಿ ಬಿರುಗಾಳಿ ಎದ್ದಿದೆ. ರೆಹಮಾನ್ ಪತ್ನಿ ಸಾಯಿರಾ ತಾವು ಗಂಡನಿಂದ ಬೇರೆಯಾಗುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಸಾಯಿರಾ ಅವರ ವಕೀಲರಾದ ವಂದನಾ ಶಾ ಇಬ್ಬರು ವಿಚ್ಛೇದನ ಪಡೆಯುತ್ತಿರುವ ನಿರ್ಧಾರದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾಲಿವುಡ್ನಲ್ಲಿ ಮಾತ್ರವಲ್ಲದೆ ಭಾರತ ಚಲನಚಿತ್ರರಂಗದಲ್ಲಿ ಈ ಸುದ್ದಿ ಅಚ್ಚರಿಗೊಳ್ಳುವಂತೆ ಮಾಡಿದೆ.
"ಮದುವೆಯಾಗಿ ಹಲವು ವರ್ಷಗಳ ಬಳಿಕ, ಸಾಯಿರಾ ಅವರು ತಮ್ಮ ಪತಿ ಎಆರ್ ರೆಹಮಾನ್ರಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇಬ್ಬರ ನಡುವಿನ ಸಂಬಂಧದಲ್ಲಿ ಭಾವನಾತ್ಮಕ ಒತ್ತಡ ಹೆಚ್ಚಾಗಿದ್ದು, ಈ ನಿರ್ಧಾರಕ್ಕೆ ಬರಲಾಗಿದೆ. ಇಬ್ಬರ ನಡುವೆ ಉತ್ತಮ ಪ್ರೀತಿಯಿದ್ದರೂ, ಉದ್ವಿಗ್ನತೆ, ಸಮಸ್ಯೆಗಳು ಇಬ್ಬರ ನಡುವೆ ಅಂತರವನ್ನು ಹೆಚ್ಚಿಸಿವೆ ಎಂದು ದಂಪತಿಗಳು ಅರ್ಥ ಮಾಡಿಕೊಂಡಿದ್ದಾರೆ.

ಈ ಸಮಯದಲ್ಲಿ ಇಬ್ಬರ ನಡುವೆ ಮತ್ತೆ ಬಾಂಧವ್ಯ ಉತ್ತಮವಾಗಲು ಸಾಧ್ಯವಿಲ್ಲ ಎಂದು ಅರ್ಥ ಮಾಡಿಕೊಂಡಿದ್ದು, ಸಾಯಿರಾ ಅವರು ನೋವು ಮತ್ತು ಸಂಕಟದಿಂದಲೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ಸಾಯಿರಾ, ಸಾರ್ವಜನಿಕರು ಗೌಪ್ಯತೆ, ಘನತೆ ಕಾಪಾಡುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಎಆರ್ ರಹಮಾನ್ ಮತ್ತು ಸಾಯಿರಾ 1995ರಲ್ಲಿ ಮದುವೆಯಾಗಿದ್ದರು, ಇವರಿಗೆ ಖತೀಜಾ, ರಹೀಮಾ ಮತ್ತು ಅಮೀನ್ ಎನ್ನುವ ಮೂವರು ಮಕ್ಕಳಿದ್ದಾರೆ. ಎಆರ್ ರೆಹಮಾನ್ ಭಾರತೀಯ ಸಂಗೀತ ಕ್ಷೇತ್ರದಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ಸಂಗೀತ ನಿರ್ದೇಶಕರು, ಭಾರತಕ್ಕೆ ಆಸ್ಕರ್ ಪ್ರಶಸ್ತಿ ತಂದುಕೊಟ್ಟ ಹೆಗ್ಗಳಿಕೆ ಕೂಡ ಅವರದ್ದಾಗಿದೆ.
ಎಆರ್ ರೆಹಮಾನ್ ಇತ್ತೀಚೆಗೆ ಸಂಗೀತ ನಿರ್ದೇಶನ ಮಾಡಿದ ಧನುಷ್ ನಿರ್ದೇಶನದ ರಾಯನ್ ಸಿನಿಮಾದ ಹಾಡು ಭಾರಿ ಜನಪ್ರಿಯವಾಗಿತ್ತು. ಛಾವಾ, ಥಗ್ ಲೈಫ್, ಗಾಂಧಿ ಟಾಕ್ಸ್ ಮುಂತಾದ ಸಿನಿಮಾಗಳಿಗೆ ಎಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications