ಸಮಂತಾನ ಸೆಕೆಂಡ್ ಹ್ಯಾಂಡ್, ಬಳಕೆಯಾದವಳು ಎಂದಿದ್ದು ಯಾರು, ಸಮಂತಾ ಏನಂದ್ರು!
ನಟಿ ಸಮಂತಾ ರುತ್ ಪ್ರಭು ಅವರು ನಟ ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದುಕೊಂಡು ಮೂರು ವರ್ಷಗಳೇ ಕಳೆದಿವೆ. ಆದರೆ, ಇಂದಿಗೂ ಸಮಂತಾ ಅವರು ಆ ನೋವಿನಿಂದ ಹೊರ ಬಂದಂತೆ ಕಾಣುತ್ತಿಲ್ಲ. ಈಚೆಗೆ ಆಂಧ್ರಪ್ರದೇಶದ ಪ್ರಭಾವಿ ಸಚಿವೆಯೊಬ್ಬರು ನೀಡಿದ್ದ ವಿವಾದಾತ್ಮಕ ಸುದ್ದಿಯಿಂದ ತೀರ ನೊಂದುಕೊಂಡಿದ್ದರು. ಅಷ್ಟೇ ಅಲ್ಲ ತೆಲುಗು ಪ್ರಭಾವಿ ನಟ ಅಕ್ಕಿನೇನಿ ನಾಗಾರ್ಜುನ ಅವರ ಕುಟುಂಬ ಹಾಗೂ ನಾಗ ಚೈತನ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಸಂಬಂಧ ಕೇಸ್ ಸಹ ದಾಖಲಾಗಿತ್ತು. ಇದೀಗ ಸಮಾಂತ ಅವರು ಡಿವೋರ್ಸ್ ಆದ ಮೇಲೆ ಕೇಳಿ ಬಂದ ಕೆಟ್ಟ ಬೈಗುಳಗಳ ಬಗ್ಗೆ ಮಾತನಾಡಿದ್ದಾರೆ.
ನಟಿ ಸಮಂತಾ ಹಾಗೂ ನಾಗ ಚೈತನ್ಯ ಅವರಿಬ್ಬರು ಪ್ರೀತಿ ಮಾಡಿ ಮದುವೆಯಾಗಿದ್ದರು. ಇವರ ಜೋಡಿ ಎಂತವರ ಕಣ್ಣು ಕುಕ್ಕುವಂತೆ ಇತ್ತು. ಅದು ಆನ್ ಸ್ಕ್ರೀನ್ ಇರಲಿ.. ಇಲ್ಲ ಆಫ್ ಸ್ಕ್ರೀನ್ ಇರಲಿ. ಇವರಿಬ್ಬರ ಜೋಡಿ ಚಂದವಿತ್ತು. ಸಿನಿಮಾರಂಗದಲ್ಲಿ ಇವರಿಬ್ಬರ ಜೋಡಿಯ ಬಗ್ಗೆ ಒಳ್ಳೆಯ ಅಭಿಪ್ರಾಯವಿತ್ತು. ಅಕ್ಕಿನೇನಿಯಂತಹ ದೊಡ್ಡ ಕುಟುಂಬಕ್ಕೆ ಹೋದ ಮೇಲೆ ಸಮಂತಾ ಅವರು ಅಲ್ಲಿನ ಸಂಪ್ರದಾಯಕ್ಕೆ ಅನುಗುಣವಾಗಿ ಸಾಕಷ್ಟು ಬದಲಾಗಿದ್ದರು. ಮದುವೆಯ ನಂತರವೂ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಎಲ್ಲವೂ ಚೆನ್ನಾಗಿದೆ ಎನ್ನುವಾಗಲೇ..

ಸಮಂತಾ ಹಾಗೂ ನಾಗ ಚೈತನ್ಯ ಅವರು ಡಿವೋರ್ಸ್ ಆದರು. ಈ ಡಿವೋರ್ಸ್ ಆಗಿ ಮೂರು ವರ್ಷಗಳೇ ಕಳೆದಿವೆ. ಆದರೆ, ಇಲ್ಲಿಯ ವರೆಗೂ ಇದಕ್ಕೆ ಸಂಬಂಧಿಸಿದ ಗಾಸಿಪ್ ಅಥವಾ ಒಂದಿಲ್ಲೊಂದು ಸುದ್ದಿಗಳು ಇಂದಿಗೂ ಬರುತ್ತಲ್ಲೇ ಇವೆ. ಇದೀಗ ಸಮಂತಾ ರುತ್ ಪ್ರಭು ಅವರು ಡಿವೋರ್ಸ್ ಆದ ಮೇಲೆ ಯಾವ ರೀತಿಯ ನೋವು ಅನುಭವಿಸಿದರು. ಎಂತಹ ಕೆಟ್ಟ ಪರಿಸ್ಥಿತಿಯನ್ನು ಎದುರಿಸಿದ್ದರು. ಆ ನೋವುಗಳಿಂದ ಹೇಗೆ ಹೊರ ಬಂದರು ಎನ್ನುವ ಬಗ್ಗೆ ಮಾತನಾಡಿದ್ದಾರೆ.
ಡಿವೋರ್ಸ್ ನಂತರ ಮಾಜಿ ದಂಪತಿಗಳಿಬ್ಬರೂ ಸಾಕಷ್ಟು ನೋವು ಅನುಭವಿಸಿದ್ದಾರೆ. ಆದರೆ ನಾಗ ಚೈತನ್ಯ ಅವರು ಈ ನೋವಿನಿಂದ ಸ್ವಲ್ಪ ಹೊರ ಬಂದಿದ್ದು, ಮತ್ತೊಂದು ಮದುವೆಗೆ ಸಿದ್ಧರಾಗುತ್ತಿದ್ದಾರೆ. ನಾಗ ಚೈತನ್ಯ ಅವರ ಎರಡನೇ ವಿವಾಹಕ್ಕೆ ಸಂಬಂಧಿಸಿದಂತೆ ಈಚೆಗಷ್ಟೇ ಎಂಗೇಜ್ಮೆಂಟ್ ಸಹ ಆಗಿದೆ. ಆದರೆ, ಸಮಂತಾ ಅವರು ಇನ್ನೂ ಆ ನೋವಿನಿಂದ ಸಂಪೂರ್ಣವಾಗಿ ಹೊರ ಬಂದಂತಿಲ್ಲ.

ಸೆಕೆಂಡ್ ಹ್ಯಾಂಡ್ ಎಂದರು..
ಸಮಾಜದಲ್ಲಿ ಮಹಿಳೆಯರು ಡಿವೋರ್ಸ್ ಆದ ಮೇಲೆ ಸಾಕಷ್ಟು ಟೀಕೆ, ಅವಮಾನಗಳಿಗೆ ಒಳಗಾಗಬೇಕಾಗುತ್ತದೆ. ನಾನೂ ಕೂಡ ಡಿವೋರ್ಸ್ ತೆಗೆದುಕೊಂಡ ಮೇಲೆ ಸೆಕೆಂಡ್ ಹ್ಯಾಂಡ್ ಹಾಗೂ ಬಳಕೆಯಾದವಳು ಎಂದು ಕರೆಸಿಕೊಳ್ಳಬೇಕಾಯಿತು. ಈ ಪದಗಳನ್ನು ಬಳಸಿ ಹಲವರು ಕಮೆಂಟ್ ಮಾಡುತ್ತಿದ್ದರು. ಡಿವೋರ್ಸ್ ಆದ ಮೇಲೆ ಮಹಿಳೆಯರು ಮತ್ತು ಅವರ ಕುಟುಂಬದವರು ಇನ್ನಿಲ್ಲದ ಕಷ್ಟ ಅನುಭವಿಸಬೇಕಾಗುತ್ತೆ ಅಂತ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಮೊದ ಮೊದಲು ಇದು ತುಂಬಾ ಕಷ್ಟವಾಗಿತ್ತು. ಹಾಗಂದ ಮಾತ್ರಕ್ಕೆ ನಾನು ಅಳುತ್ತಾ ಇರುತ್ತೇನೆ ಎಂದುಕೊಳ್ಳಬೇಕಿಲ್ಲ. ನಾನು ಡಿವೋರ್ಸ್ ಪಡೆದಿದ್ದೇನೆ ಎನ್ನುವುದು ವಾಸ್ತವ. ಅದನ್ನು ನಾನು ಮುಚ್ಚಿಡುವ ಅವಶ್ಯಕತೆಯೂ ಇಲ್ಲ. ನನ್ನ ಜೀವನ ಇಲ್ಲಿಗೆ ಕೊನೆಯಾಗಿಲ್ಲ. ಒಂದು ಅಂತ್ಯವಾದರೆ, ಮತ್ತೊಂದರ ಪ್ರಾರಂಭವಾಗುತ್ತದೆ ಎಂದು ಹೇಳಿದ್ದಾರೆ. ಸಮಂತಾ ಅವರು ಡಿವೋರ್ಸ್ನ ಬಗ್ಗೆ ಅಷ್ಟಾಗಿ ಎಲ್ಲೂ ಮುಕ್ತವಾಗಿ ಹೇಳಿಕೊಂಡಿಲ್ಲ.
ಡಿವೋರ್ಸ್ ವಿಚಾರದಲ್ಲಿ ಸಮಂತಾ ಹಾಗೂ ನಾಗಚೈತನ್ಯ ಇಬ್ಬರೂ ಮೊದಲಿನಿಂದಲೂ ಬದ್ಧತೆ ಕಾಪಾಡಿಕೊಂಡಿದ್ದಾರೆ. ಇಬ್ಬರು ಡಿವೋರ್ಸ್ ಬಗ್ಗೆ ಒಂದೇ ಸಮಯಕ್ಕೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. ಭಿನ್ನಾ ಅಭಿರುಚಿ ಹಾಗೂ ಜೀವನ ಶೈಲಿಗಾಗಿ ಒಪ್ಪಿತರಾಗಿ ಸ್ನೇಹಪೂರ್ವಕವಾಗಿಯೇ ಇಬ್ಬರು ಡಿವೋರ್ಸ್ ತೆಗೆದುಕೊಂಡಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications