Prakash Heggodu: ಕನ್ನಡ ಚಿತ್ರರಂಗದ ಖ್ಯಾತ ನಟ ಪ್ರಕಾಶ್ ಹೆಗ್ಗೋಡು ವಿಧಿವಶ
ಬೆಂಗಳೂರು, ಮಾರ್ಚ್ 31: ಕನ್ನಡ ಚಿತ್ರರಂಗದ ಖ್ಯಾತ ನಟ, ರಂಗಕರ್ಮಿ ಪ್ರಕಾಶ್ ಹೆಗ್ಗೋಡು(58) ವಿಧಿವಶರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಿನ್ನೆ( ಮಾರ್ಚ್ 30)ರ ಸಂಜೆ ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.
ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಪ್ರಕಾಶ್ ಹೆಗ್ಗೋಡು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

ರಂಗಭೂಮಿ ಕಲಾವಿದ, ಚಿತ್ರ ನಟ, ಸಂಘಟಕ ಮಾತ್ರವಲ್ಲದೇ ಸಾಮಾಜಿಕ ಹೋರಾಟಗಾರರಾಗಿಯೂ ಗುರುತಿಸಿಕೊಂಡಿದ್ದ ಪ್ರಕಾಶ್ ಹೆಗ್ಗೋಡು ಅವರು ಏಸು ಪ್ರಕಾಶ್ ಕಲ್ಲುಕೊಪ್ಪ ಅಂತಲೇ ಜನಪ್ರಿಯರಾಗಿದ್ದರು.
ಪ್ರಕಾಶ್ ಹೆಗ್ಗೋಡು ಅವರು ಮೂಲತಃ ಶಿವಮೊಗ್ಗ ಜಿಲ್ಲೆಯಯ ಸಾಗರ ತಾಲೂಕಿನ ಪುರಪ್ಪೆಮನೆಯವರಾಗಿದ್ದಾರೆ. ಹೀಗಾಗಿ ಪುರಪ್ಪೆಮನೆಯ ಸ್ವಗೃಹದಲ್ಲೇ ಇಂದು ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಹೊಸನಗರದ ಸಾರಾ ಸಂಸ್ಥೆಯ ಜೊತೆ ಗುರುತಿಸಿಕೊಂಡಿದ್ದ ಪ್ರಕಾಶ್ ಹೆಗ್ಗೋಡು, ಕೆರೆ ಪುನರುಜ್ಜೀವನ ಸೇರಿದಂತೆ ಮೊದಲಾದ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಅಲ್ಲದೇ ಸಾರಾ ಸಂಸ್ಥೆಯ ಖಜಾಂಚಿಯಾಗಿಯೂ ಆಗಿದ್ದರು ಎನ್ನಲಾಗಿದೆ. ರಂಗಭೂಮಿ ಕಲಾವಿದನಾಗಿ ನಟನೆ ಆರಂಭಿಸಿದ ಇವರು ರಾಕಿಂಗ್ ಸ್ಟಾರ್ ಯಶ್ ಅಭಿನಯದ ರಾಜಾಹುಲಿ, ಉಪೇಂದ್ರ ಅಭಿನಯದ ಕಲ್ಪನಾ 2 ಸೇರಿದಂತೆ ಸಂತ, ಮಾಡ್ರರ್ನ್ ಮಹಾಭಾರತ, ಭಾಗ್ಯದ ಬಳೆಗಾರ ಸೇರಿ ಒಟ್ಟು 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications