Yash: ರಾಕಿಂಗ್ ಸ್ಟಾರ್ ಯಶ್ ಆಪ್ತಮಿತ್ರ ನಿಧನ: ಇದೊಂದು ಅನ್ಯಾಯದ ಸಾವು
ಕನ್ನಡ ಚಿತ್ರರಂಗದ ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಆಪ್ತಮಿತ್ರ ಅರ್ಜುನ್ ಕೃಷ್ಣ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅರ್ಜುನ್ ಕೃಷ್ಣ ಅವರು ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಕಷ್ಟಪಟ್ಟು ಮಾಡಿದ್ದ ತಮ್ಮ ಮೊದಲ ಸಿನಿಮಾ ತೆರೆಮೇಲೆ ಬರಲು ಇನ್ನೇನು ಎರಡು ಮೂರು ತಿಂಗಳು ಇರುವಾಗಲೇ ಅರ್ಜುನ್ ಕೃಷ್ಣ ಕೊನೆಯುಸಿರೆಳೆದಿದ್ದು, ಇದೊಂದು ಅನ್ಯಾಯದ ಸಾವು ಎಂದು ಆಪ್ತವಲಯ ನೋವು ತೋಡಿಕೊಂಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅವರ ಬಾಲ್ಯ ಸ್ನೇಹಿತನಾಗಿರುವ ಅರ್ಜುನ್ ಕೃಷ್ಣ, ಯಶ್ ಹಾಗೂ ರಾಧಿಕಾ ಪಂಡಿತ್ ಆಪ್ತರಾಗಿದ್ದರು. ಮೂಲತಃ ಮೈಸೂರಿನವರು ಆದ ಅರ್ಜುನ್ ಕೃಷ್ಣ, ಗಾಲ್ ಬ್ಲಾಡರ್ ಸ್ಟೋನ್ ಅಂದರೆ ಕಿಡ್ನಿಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದರು. ಆಯುರ್ವೇದ ಔಷಧಿ ಪಡೆದುಕೊಳ್ಳುತ್ತಿದ್ದ ಅರ್ಜುನ್ ಕೃಷ್ಣ, ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದಂತೆ ತಮ್ಮ ಚೊಚ್ಚಲ ಸಿನಿಮಾ ಕೆಲಸದಲ್ಲಿ ಬ್ಯೂಸಿಯಾಗಿದ್ದರು. ಇನ್ನೇನು ತಮ್ಮ ಸಿನಿಮಾ ತೆರೆ ಕಾಣುತ್ತದೆ ಎನ್ನುವ ಉತ್ಸಾಹದಲ್ಲಿದ್ದರು. ಆದರೆ ವಿಧಿಯಾಟವೇ ಬೇರೆ ಆಗಿತ್ತು.

ಅರ್ಜುನ್ ಕೃಷ್ಣ ಅವರಿಗೆ ಫೆಬ್ರವರಿ ತಿಂಗಳಿನಲ್ಲಿ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಮೊದಲೇ ಇದ್ದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗಿ ಸೋಂಕು ಫ್ಯಾಂಕ್ರಿಯಾಸ್ಗೂ ಹಬ್ಬಿತ್ತು. ಕೂಡಲೇ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಕಳೆದ ತಿಂಗಳ ಶಿವರಾತ್ರಿಯ ಹಿಂದಿನ ದಿನ ಅಂದರೆ, ಫೆಬ್ರವರಿ 25ರಂದು ಅರ್ಜುನ್ ಕೃಷ್ಣ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಸೋಂಕು ಉಲ್ಬಣಗೊಂಡು ಬಳಲುತ್ತಿದ್ದ ಅವರು ಕಾರ್ಡಿಯಾಕ್ ಅರೆಸ್ನಿಂದ ವಿಧಿವಶರಾಗಿದ್ದಾರೆ.
ಇನ್ನು ಅರ್ಜುನ್ ಕೃಷ್ಣ ಅವರು ಡ್ಯಾಡ್ ಎನ್ನುವ ಕನ್ನಡ ಸಿನಿಮಾವನ್ನು ನಿರ್ದೇಶಿಸುತ್ತಿದ್ದರು. ಇನ್ನೇನು ಎರಡು- ಮೂರು ತಿಂಗಳೊಳಗೆ ಈ ಚಿತ್ರವು ಬಿಡುಗಡೆಯಾಗಬೇಕಿತ್ತು. ಚಿತ್ರತಂಡ ಕೂಡ ಬಹುಬೇಗ ಕೆಲಸ ಮುಗಿಸುವ ಆತುರದಲ್ಲಿತ್ತು. ಆದರೆ ನಿರ್ದೇಶಕರ ಸಾವು ಇಡೀ ಚಿತ್ರತಂಡಕ್ಕೆ ಆಘಾತ ಉಂಟು ಮಾಡಿದೆ. ಅರ್ಜುನ್ ಕೃಷ್ಣ ಅವರನ್ನು ಕಳೆದುಕೊಂಡು, ಕುಟುಂಬಸ್ಥರು ಹಾಗೂ ಅವರ ಆಪ್ತ ವಲಯ ನೋವಿನಲ್ಲಿ ದಿನ ಕಳೆಯುತ್ತಿದ್ದಾರೆ.
-
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications