ಹೊಸ ವರ್ಷಕ್ಕೆ ಖುಷಿ ಸುದ್ದಿ: 2024ಕ್ಕೆ ನಾನು 'ಅಮ್ಮ' ಎಂದ ನಟಿ ಅದಿತಿ ಪ್ರಭುದೇವ
ಕನ್ನಡ ಚಿತ್ರರಂಗದ ಶಾನೇ ಟಾಪ್ ಹುಡುಗಿ ನಟಿ ಅದಿತಿ ಪ್ರಭುದೇವ ಹೊಸ ವರ್ಷಕ್ಕೆ ಖುಷಿ ಸುದ್ದಿಯನ್ನು ಕೊಟ್ಟಿದ್ದಾರೆ. 2024ರ ಮೊದಲ ದಿನವೇ ನಟಿ ಅದಿತಿ ಪ್ರಭುದೇವ ತಮ್ಮ ಜೀವನ ಅಮೂಲ್ಯವಾದ ವಿಚಾರವನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
2024 ಕ್ಕೆ ನಾನು 'ಅಮ್ಮ' ಎನ್ನುವ ಮೂಲಕ ನಟಿ ಅದಿತಿ ಪ್ರಭುದೇವ ಹೊಸ ವರ್ಷದ ದಿನವೇ ತಾವು ತಾಯಿಯಾಗುತ್ತಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಮೆಟರ್ನಿಟಿ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಅದಿತಿ ಪ್ರಭುದೇವ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಅದಿತಿ, ಪತಿ ಯಶಸ್ ಚಂದ್ರಕಾಂತ್ ಪಟ್ಲಾ ಹಾಗೂ ತಮ್ಮ ಪ್ರೀತಿಯ ಪೆಟ್ ಚಾಕಲೇಟ್ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫೋಟೋಗಳ ಜೊತೆಗೆ ನಟಿ ಅದಿತಿ ಪ್ರಭುದೇವ ನೀಡಿರುವ ಸಾಲುಗಳು ವಾವ್ ಎನಿಸುವಂತಿದೆ. ಹೀಗಾಗಿ ಅಭಿಮಾನಿಗಳು ಶುಭಾಶಯದ ಜೊತೆ ಅದಿತಿ ಪ್ರಭುದೇವ ಅವರ ಅಮ್ಮ ಪದದ ವರ್ಣನೆಗೆ ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.

'ಸಂಬಂಧಗಳಲ್ಲಿ ಶ್ರೇಷ್ಠವಾದದ್ದು , ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ ಅಮ್ಮ. ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ ಅಮ್ಮ. ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ ಅಮ್ಮ. 2024 ಕ್ಕೆ ನಾನು ಅಮ್ಮ' ಎಂದು ಅದಿತಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ಹೊಸ ವರ್ಷಕ್ಕೆ ಶುಭಾಶಯ ತಿಳಿಸಿದ್ದಾರೆ.

ಗುಡ್ ನ್ಯೂಸ್ ಹಚ್ಚಿಕೊಂಡ ಅದಿತಿ ಪ್ರಭುದೇವ ದಂಪತಿಗೆ ಆ್ಯಂಕರ್ ಅನುಶ್ರೀ ಸೇರಿದಂತೆ ಸೆಲೆಬ್ರೆಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ದಾವಣಗೆರೆ ಮೂಲದ ನಟಿ ಅದಿತಿ ಪ್ರಭುದೇವ ಅವರು 2022ರಲ್ಲಿ ಉದ್ಯಮಿ ಯಶಸ್ ಚಂದ್ರಕಾಂತ್ ಪಟ್ಲಾ ಅವರನ್ನು ವಿವಾಹವಾದರು.

ಇನ್ನು ಅದಿತಿ ಪ್ರಭುದೇವ ಸಿನಿಮಾದ ಜೊತೆಗೆ ತಮ್ಮ ಯೂಟ್ಯೂಬ್ ಚಾನಲ್ ಕೂಡ ತೆರೆದಿದ್ದು, ನೋಡುಗರಿಗೆ ಉಪಯುಕ್ತ ಮಾಹಿತಿ ಜೊತೆಗೆ ತಮ್ಮ ದಿನ ನಿತ್ಯದ ಜೀವನದ ಘಟನೆಗಳನ್ನು ಕೂಡ ಹಂಚಿಕೊಳ್ಳುತ್ತಿರುತ್ತಾರೆ. ತಾವು ತಾಯಾಗುತ್ತಿರುವ ವಿಚಾರವನ್ನು ಪತಿ ಯಶಸ್ ಅವರಿಗೆ ತಿಳಿಸಿದ ಸುಂದರ ಕ್ಷಣವನ್ನು ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ಹಂಚಿಕೊಂಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications