Tharun Sudhir: ಸ್ಯಾಂಡಲ್ವುಡ್ನ ಖ್ಯಾತ ನಟಿಯ ಜೊತೆ ತರುಣ್ ಸುಧೀರ್ ಮದುವೆ?
ಖ್ಯಾತ ಖಳನಟ ಸುಧೀರ್ ಅವರ ಕಿರಿಯ ಪುತ್ರ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಸದ್ಯ ಕಿರುತೆರೆಯ ಮಹಾನಟಿ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಳ್ಳುತ್ತಿರುವ ತರುಣ್ ಸುಧೀರ್, ಹೊಸ ಜೀವನ ಆರಂಭಿಸಲು ಸಜ್ಜಾಗಿದ್ದಾರೆ ಎನ್ನುವ ಮಾತುಗಳು ಜೋರಾಗಿಯೇ ಕೇಳಿ ಬರುತ್ತಿದೆ.
ನಟರಾಗಿದ್ದ ತರುಣ್ ಸುಧೀರ್ ಚೌಕ ಚಿತ್ರದ ಮೂಲಕ ನಿರ್ದೇಶಕರಾದರು. ಚೌಕ ಸೂಪರ್ ಹಿಟ್ ಆದ ಬಳಿಕ ನಟ ದರ್ಶನ್ ಜೊತೆ ಬ್ಯಾಕ್ ಟು ಬ್ಯಾಕ್ ಎರಡು ಹಿಟ್ ಸಿನಿಮಾಗಳನ್ನು ನೀಡಿದ್ದು, ಕಾಟೇರ ಚಿತ್ರ ಸೂಪರ್ ಡೂಪರ್ ಹಿಟ್ ಆಗಿತ್ತು. ಹೀಗೆ ಸಾಲು ಸಾಲು ಸಿನಿಮಾಗಳ ಯಶಸ್ಸಿನ ಬಳಿಕ ಸದ್ಯ 4ನೇ ಸಿನಿಮಾದ ತಯಾರಿಯಲ್ಲಿರುವ ತರುಣ್ ಸುಧೀರ್ ಮದುವೆಗೂ ಕೂಡ ತಯಾರಿ ನಡೆಸುತ್ತಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ.

ಖಳನಟ ಸುಧೀರ್ ಹಾಗೂ ಮಾಲತಿ ಅವರ ಕಿರಿಯ ಪುತ್ರ ತರುಣ್ ಸುಧೀರ್ 40ರ ವಯಸ್ಸಿನ ಗಡಿಯಲ್ಲಿದ್ದಾರೆ. ಜೊತೆಗೆ ನಿರ್ದೇಶಕನಾಗಿ ಇತ್ತೀಚಿನ ವರ್ಷಗಳಲ್ಲಿ ಯಶಸ್ಸು ಕಾಣುತ್ತಿರುವ ತರುಣ್, ಕನ್ನಡ ಚಿತ್ರರಂಗಕ್ಕೆ ಮತ್ತಷ್ಟು ಉತ್ತಮ ಸಿನಿಮಾಗಳನ್ನು ನೀಡಬೇಕು ಎನ್ನುವ ಅಭಿಲಾಷೆಯಲ್ಲಿದ್ದಾರೆ.
ಇನ್ನು ಈ ಹಿಂದೆ ಮದುವೆ ಬಗ್ಗೆ ಮಾತನಾಡಿದ್ದ ತರುಣ್ ಸುಧೀರ್. ಸದ್ಯಕ್ಕೆ ಮದುವೆ ಬಗ್ಗೆ ಆಲೋಚನೆ ಇಲ್ಲ, ಮದುವೆ ಆಗದೇ ನೆಮ್ಮದಿಯಾಗಿ ಇದ್ದೇನೆ ಎಂದು ಹೇಳುತ್ತಿದ್ದರು. ಆದರೆ ತಾಯಿ ಮಾಲತಿ ಮಾತ್ರ ಮಗನಿಗೆ ಮದುವೇ ಮಾಡಿಯೇ ಸಿದ್ಧ ಎನ್ನುತ್ತಿದ್ದರು. ಇದೀಗ ಮತ್ತೆ ತರುಣ್ ಸುಧೀರ್ ಮದುವೆ ಸುದ್ದಿ ಮುನ್ನೆಲೆಗೆ ಬಂದಿದ್ದು, ತೆರೆಮರೆಯಲ್ಲಿ ಮದುವೆ ಸಿದ್ಧತೆಗಳು ಕೂಡ ಶುರುವಾಗಿದೆ ಎನ್ನುವ ವದಂತಿ ಹರಿದಾಡುತ್ತಿದೆ.

ಈ ಬಗ್ಗೆ ತರುಣ್ ಸುಧೀರ್ ಆಪ್ತರಿಗೂ ಗೊತ್ತಿಲ್ಲ ಎನ್ನುತ್ತಿದ್ದು ಇನ್ನೂ ಕೆಲವರು ಖಚಿತವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಇನ್ನೆರಡು ತಿಂಗಳಲ್ಲಿ ತರುಣ್ ಸುಧೀರ್ ಒಬ್ಬರು ಖ್ಯಾತ ನಟಿಯ ಜೊತೆ ಹಸೆಮಣೆ ಏರಲಿದ್ದಾರೆ ಎನ್ನಲಾಗಿದೆ. ಮದುವೆನೇ ಬೇಡ ಎನ್ನುತ್ತಿದ್ದ ತರುಣ್ ಈಗ ಒಬ್ಬರು ಖ್ಯಾತ ನಟಿಯ ಕೈ ಹಿಡಿಯಲಿದ್ದಾರಂತೆ. ಆ ನಟಿ ಯಾರಿರಬಹುದು ಎನ್ನುವ ಕುತೂಹಲ ಎಲ್ಲರಲ್ಲಿದೆ.
ಹೌದು ನಟ, ನಿರ್ದೇಶಕ ತರುಣ್ ಸುಧೀರ್ ಕನ್ನಡ ಚಿತ್ರರಂಗದ ಖ್ಯಾತ ನಟಿ ಸೋನಾಲ್ ಮೊಂತೆರೊ ಅವರ ಕೈ ಹಿಡಿಯಲಿದ್ದಾರೆ ಎನ್ನುವ ಸುದ್ದಿ ಜೋರಾಗಿಯೇ ಕೇಳಿ ಬರುತ್ತಿದೆ. ರಾಬರ್ಟ್ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೋಡಿಯಾಗಿ ಕಾಣಿಸಿಕೊಂಡಿದ್ದ ಸೋನಾಲ್ ಮೊಂತೆರೊ, ಝೈದ್ ಖಾನ್ ಅಭಿನಯದ ಬನರಾಸ್ ಚಿತ್ರದಲ್ಲಿ ಮತ್ತಷ್ಟು ಮಿಂಚಿದ್ದರು.

ಇನ್ನು ತರುಣ್ ಸುಧೀರ್ ಹಾಗೂ ಸೋನಲ್ ಆಗಸ್ಟ್ 10ರಂದು ಹಸೆಮಣೆ ಏರಲಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಯಾವುದೇ ಅಧೀಕೃತ ಮಾಹಿತಿ ಹೊರ ಬಿದ್ದಿಲ್ಲ. ತರುಣ್ ಸುಧೀರ್ ಆಗಲೀ, ನಟಿ ಸೋನಲ್ ಆಗಲೀ, ಅವರ ಕುಟುಂಬಸ್ಥರು ಹಾಗೂ ಆಪ್ತರು ಯಾರೂ ಈ ಬಗ್ಗೆ ಅಧೀಕೃತ ಮಾಹಿತಿ ನೀಡಿಲ್ಲ. ಆದರೆ ತರುಣ್ ಸುಧೀರ್ ಹಾಗೂ ಸೋನಲ್ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ.
-
ಪ್ರೇಮ್ ಬರೆದ ಹಾಡು ಅಕ್ಷರ ರೂಪದ ಬೆತ್ತಲೆ ಸಿನೆಮಾ ತೋರಿಸಿದಂತಿದೆ: ಅರುಣ್ ಜೋಳದಕೂಡ್ಲಿಗಿ ಬರಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications