Sri Murali: ಸಿನಿಮಾ ಚಿತ್ರೀಕರಣ ವೇಳೆ ಅವಘಡ: ನಟ ಶ್ರೀಮುರಳಿ ಆಸ್ಪತ್ರೆಗೆ ದಾಖಲು
ಬೆಂಗಳೂರು, ಏಪ್ರಿಲ್ 22: ಕನ್ನಡ ಚಿತ್ರರಂಗದ ರೋರಿಂಗ್ ಸ್ಟಾರ್ ನಟ ಶ್ರೀ ಮುರಳಿ ಧಿಡೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿನಿಮಾ ಚಿತ್ರೀಕರಣದ ವೇಳೆ ನಡೆದ ಅವಘಡದಿಂದ ನಟ ಶ್ರೀ ಮುರಳಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಸದ್ಯ 'ಬಘೀರ' ಸಿನಿಮಾ ಚಿತ್ರೀಕರಣದಲ್ಲಿ ಬ್ಯೂಸಿ ಇರುವ ಶ್ರೀ ಮುರಳಿ, ಈ ಚಿತ್ರದ ಶೂಟಿಂಗ್ ವೇಳೆ ನಡೆದ ದುರ್ಘಟನೆಯಿಂದ ಮತ್ತೆ ಅವರ ಕಾಲಿಗೆ ಪೆಟ್ಟಾಗಿದೆ. ಇದರಿಂದ ಬಘೀರ ಸಿನಿಮಾ ಚಿತ್ರೀಕರಣವನ್ನು ಮತ್ತೆ ಮುಂದೂಡಲಾಗಿದ್ದು, ಅನೇಕ ವರ್ಷಗಳ ಬಳಿಕ ಶ್ರೀ ಮುರಳಿ ಅವರನ್ನು ಮತ್ತೆ ತೆರೆ ಮೇಲೆ ಕಾಣಲು ಕಾತುರರಾರಿದ್ದ ಅಭಿಮಾನಿಗಳಿಗೆ ಬೇಸರವಾಗಿದೆ.

ಈ ಹಿಂದೆ ಚಿತ್ರದ ಫೈಟಿಂಗ್ ಸೀನ್ ಚಿತ್ರೀಕರಣದ ವೇಳೆ ಶ್ರೀ ಮುರಳಿ ಅವರ ಕಾಲಿಗೆ ಪೆಟ್ಟಾಗಿತ್ತು. ಇದರಿಂದ ಅವರು ಸರ್ಜರಿಗೆ ಒಳಗಾಗಿ ಎರಡು ತಿಂಗಳು ರೆಸ್ಟ್ ಮಾಡಿದ್ದರು. ಇದೀಗ ಮತ್ತೆ ಚಿತ್ರೀಕರಣ ಆರಂಭವಾದ ಹೊತ್ತಲ್ಲೇ ಮತ್ತೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಸದ್ಯ ನಟ ಶ್ರೀ ಮುರಳಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕನ್ನಡ ಚಿತ್ರರಂಗದ ರೋರಿಂಗ್ ಸ್ಟಾರ್ ಆಗಿರುವ ನಟ ಶ್ರೀ ಮುರಳಿ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿದ್ದು, ಕೆಲ ವರ್ಷಗಳಿಂದ ಇವರ ಹೊಸ ಸಿನಿಮಾಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದಾರೆ. 2021ರ 'ಮದಗಜ' ಬಳಿಕ ಶ್ರೀ ಮುರಳಿ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಹೀಗಾಗಿ 'ಬಘೀರ' ಸಿನಿಮಾ ಮೂಲಕ ಶ್ರೀ ಮುರಳಿ ಮತ್ತೆ ಬೆಳ್ಳಿ ತೆರೆ ಮೇಲೆ ಘರ್ಜಿಸಲು ಸಜ್ಜಾಗುತ್ತಿದ್ದರು.
'ಬಘೀರ' ಸಿನಿಮಾದ ಟೀಸರ್ ಈ ಮೊದಲು ರಿಲೀಸ್ ಆಗಿತ್ತು. ಈ ಚಿತ್ರದ ಬಗ್ಗೆ ಅತೀವ ನಿರೀಕ್ಷೆ ಇರುವುದರಿಂದ ಡ್ಯೂಪ್ ಬಳಸದೆ ಸ್ವತಃ ಶ್ರೀ ಮುರಳಿ ಅವರೇ ಸ್ಟಂಟ್ಗಳನ್ನು ಮಾಡುತ್ತಿದ್ದಾರೆ. ಈ ಮೊದಲು ಫೈಟಿಂಗ್ ಸೀನ್ ವೇಳೆ ಅವರ ಕಾಲಿಗೆ ಪೆಟ್ಟಾಗಿತ್ತು. ಎರಡು ತಿಂಗಳ ರೆಸ್ಟ್ ಬಳಿಕ ಮತ್ತೆ ಚಿತ್ರೀಕರಣಕ್ಕೆ ಬಂದ ನಟ ಶ್ರೀ ಮುರಳಿ ಇದೀಗ ಮತ್ತೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅವರು ಬೇಗ ಚೇತರಿಸಿಕೊಂಡು ಚಿತ್ರ ಬಹುಬೇಗ ತೆರೆ ಮೇಲೆ ಬರಲಿ ಎನ್ನುವುದು ಅಭಿಮಾನಿಗಳ ಹಾರೈಕೆಯಾಗಿದೆ.
-
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ವಿಶೇಷ: ಬೆಟ್ಟದ ಹೂವಿನಿಂದ ಗಂಧದ ಗುಡಿಯವರೆಗೆ, ಅಪ್ಪು ಎಂಬ ಅಳಿಸಲಾಗದ ನಗು -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications