Sri Murali: ಸಿನಿಮಾ ಚಿತ್ರೀಕರಣ ವೇಳೆ ಅವಘಡ: ನಟ ಶ್ರೀಮುರಳಿ ಆಸ್ಪತ್ರೆಗೆ ದಾಖಲು
ಬೆಂಗಳೂರು, ಏಪ್ರಿಲ್ 22: ಕನ್ನಡ ಚಿತ್ರರಂಗದ ರೋರಿಂಗ್ ಸ್ಟಾರ್ ನಟ ಶ್ರೀ ಮುರಳಿ ಧಿಡೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿನಿಮಾ ಚಿತ್ರೀಕರಣದ ವೇಳೆ ನಡೆದ ಅವಘಡದಿಂದ ನಟ ಶ್ರೀ ಮುರಳಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಸದ್ಯ 'ಬಘೀರ' ಸಿನಿಮಾ ಚಿತ್ರೀಕರಣದಲ್ಲಿ ಬ್ಯೂಸಿ ಇರುವ ಶ್ರೀ ಮುರಳಿ, ಈ ಚಿತ್ರದ ಶೂಟಿಂಗ್ ವೇಳೆ ನಡೆದ ದುರ್ಘಟನೆಯಿಂದ ಮತ್ತೆ ಅವರ ಕಾಲಿಗೆ ಪೆಟ್ಟಾಗಿದೆ. ಇದರಿಂದ ಬಘೀರ ಸಿನಿಮಾ ಚಿತ್ರೀಕರಣವನ್ನು ಮತ್ತೆ ಮುಂದೂಡಲಾಗಿದ್ದು, ಅನೇಕ ವರ್ಷಗಳ ಬಳಿಕ ಶ್ರೀ ಮುರಳಿ ಅವರನ್ನು ಮತ್ತೆ ತೆರೆ ಮೇಲೆ ಕಾಣಲು ಕಾತುರರಾರಿದ್ದ ಅಭಿಮಾನಿಗಳಿಗೆ ಬೇಸರವಾಗಿದೆ.

ಈ ಹಿಂದೆ ಚಿತ್ರದ ಫೈಟಿಂಗ್ ಸೀನ್ ಚಿತ್ರೀಕರಣದ ವೇಳೆ ಶ್ರೀ ಮುರಳಿ ಅವರ ಕಾಲಿಗೆ ಪೆಟ್ಟಾಗಿತ್ತು. ಇದರಿಂದ ಅವರು ಸರ್ಜರಿಗೆ ಒಳಗಾಗಿ ಎರಡು ತಿಂಗಳು ರೆಸ್ಟ್ ಮಾಡಿದ್ದರು. ಇದೀಗ ಮತ್ತೆ ಚಿತ್ರೀಕರಣ ಆರಂಭವಾದ ಹೊತ್ತಲ್ಲೇ ಮತ್ತೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಸದ್ಯ ನಟ ಶ್ರೀ ಮುರಳಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕನ್ನಡ ಚಿತ್ರರಂಗದ ರೋರಿಂಗ್ ಸ್ಟಾರ್ ಆಗಿರುವ ನಟ ಶ್ರೀ ಮುರಳಿ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿದ್ದು, ಕೆಲ ವರ್ಷಗಳಿಂದ ಇವರ ಹೊಸ ಸಿನಿಮಾಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದಾರೆ. 2021ರ 'ಮದಗಜ' ಬಳಿಕ ಶ್ರೀ ಮುರಳಿ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಹೀಗಾಗಿ 'ಬಘೀರ' ಸಿನಿಮಾ ಮೂಲಕ ಶ್ರೀ ಮುರಳಿ ಮತ್ತೆ ಬೆಳ್ಳಿ ತೆರೆ ಮೇಲೆ ಘರ್ಜಿಸಲು ಸಜ್ಜಾಗುತ್ತಿದ್ದರು.
'ಬಘೀರ' ಸಿನಿಮಾದ ಟೀಸರ್ ಈ ಮೊದಲು ರಿಲೀಸ್ ಆಗಿತ್ತು. ಈ ಚಿತ್ರದ ಬಗ್ಗೆ ಅತೀವ ನಿರೀಕ್ಷೆ ಇರುವುದರಿಂದ ಡ್ಯೂಪ್ ಬಳಸದೆ ಸ್ವತಃ ಶ್ರೀ ಮುರಳಿ ಅವರೇ ಸ್ಟಂಟ್ಗಳನ್ನು ಮಾಡುತ್ತಿದ್ದಾರೆ. ಈ ಮೊದಲು ಫೈಟಿಂಗ್ ಸೀನ್ ವೇಳೆ ಅವರ ಕಾಲಿಗೆ ಪೆಟ್ಟಾಗಿತ್ತು. ಎರಡು ತಿಂಗಳ ರೆಸ್ಟ್ ಬಳಿಕ ಮತ್ತೆ ಚಿತ್ರೀಕರಣಕ್ಕೆ ಬಂದ ನಟ ಶ್ರೀ ಮುರಳಿ ಇದೀಗ ಮತ್ತೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅವರು ಬೇಗ ಚೇತರಿಸಿಕೊಂಡು ಚಿತ್ರ ಬಹುಬೇಗ ತೆರೆ ಮೇಲೆ ಬರಲಿ ಎನ್ನುವುದು ಅಭಿಮಾನಿಗಳ ಹಾರೈಕೆಯಾಗಿದೆ.
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications