ಶ್ರೀರಾಮನ ಬಂಟ ‘ಹನುಮಾನ್’ ಸಿನಿಮಾಗೆ ಕನ್ನಡಿಗರ ಬೆಂಬಲ!
ಸದ್ದೇ ಇಲ್ಲದೆ ಬರುವ ಸಿನಿಮಾಗಳು ದೊಡ್ಡ ಹೆಸರು ಮಾಡುತ್ತವೆ. ಹಾಗೇ ಗಲ್ಲಾಪೆಟ್ಟಿಗೆಯ ತುಂಬಾ ಕಾಸು ಮಾಡುತ್ತವೆ. ಈ ಮಾತು ಇದೀಗ 'ಹನುಮಾನ್' ಸಿನಿಮಾ ವಿಚಾರದಲ್ಲೂ ನಿಜವಾಗಿ ಹೋಗಿದೆ. ಅದರಲ್ಲೂ ಈ ಸಿನಿಮಾಗೆ ಕನ್ನಡ ಸಿನಿಮಾ ರಂಗದ ದೊಡ್ಡ ದೊಡ್ಡ ಸ್ಟಾರ್ ನಟರೇ ಸಾಥ್ ನೀಡುತ್ತಿದ್ದಾರೆ. ಅಲ್ಲದೆ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.
ಸೂಪರ್ ಹೀರೋ ಕಾನ್ಸೆಪ್ಟ್ ಹೊಂದಿದ ಹನು-ಮಾನ್ ಸಿನಿಮಾಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ ತೇಜ ಸಜ್ಜಾ, ವರಲಕ್ಷ್ಮೀ ಶರತ್ ಕುಮಾರ್, ಕನ್ನಡದವರೇ ಆದ ಅಮೃತಾ ಐಯ್ಯರ್, ದೀಪಕ್ ಶೆಟ್ಟಿ ನಟಿಸಿದ ಚಿತ್ರಕ್ಕೆ ಪ್ರೇಕ್ಷಕ ಜೈಕಾರ ಹಾಕುತ್ತಿದ್ದಾರೆ. ದೊಡ್ಡ ದೊಡ್ಡ ಸಿನಿಮಾಗಳಿಗೆ ಟಕ್ಕರ್ ಕೊಡುತ್ತಿರುವ ಹನು-ಮಾನ್ ಚಿತ್ರವನ್ನ ಈಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ವೀಕ್ಷಿಸಿ ಖುಷಿ ವ್ಯಕ್ತಪಡಿಸಿದ್ದಾರೆ.

ಹ್ಯಾಟ್ರಿಕ್ ಹೀರೋ ಹೇಳಿದ್ದೇನು?
ಬೆಂಗಳೂರಿನ ಒರಾಯನ್ ಮಾಲ್ನಲ್ಲಿ, ಕುಟುಂಬ ಸಮೇತ ಹನು-ಮಾನ್ ಸಿನಿಮಾ ನೋಡಿದ ಶಿವಣ್ಣ ಅವರಿಗೆ ತೇಜ್ ಸಜ್ಜಾ & ಅಮೃತಾ ಸಾಥ್ ಕೊಟ್ಟರು. ಇನ್ನ ಚಿತ್ರ ವೀಕ್ಷಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಿವಣ್ಣ ಹನುಮಾನ್ ಸಿನಿಮಾವನ್ನ 'ಮೈಂಡ್ ಬ್ಲೋಯಿಂಗ್' ಅಂತಾ ಹೇಳಿದ್ರು. ತೇಜ ಸಜ್ಜಾ, ಅಮೃತಾ, ವರಲಕ್ಷ್ಮೀ ಅಭಿನಯದ ಬಗ್ಗೆ ಈ ವೇಳೆ ಹೆಮ್ಮೆಯಿಂದ ಮಾತನಾಡಿದ್ರು. ಈ ಮಾತುಗಳು ಸಿನಿಮಾ ತಂಡಕ್ಕೆ ಮತ್ತಷ್ಟು ಬಲ ನೀಡಿದಂತೆ ಇತ್ತು.
ಪ್ಯಾನ್ ವರ್ಲ್ಡ್ ಸಿನಿಮಾ ಇದು
ಹೌದು, ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ & ತೇಜ ಸಜ್ಜ ನಟನೆ ಮಾಡಿರುವ ಪ್ಯಾನ್ ಇಂಡಿಯಾ ಸಿನಿಮಾ 'ಹನು-ಮಾನ್' ಸಂಕ್ರಾಂತಿಗೆ ರಿಲೀಸ್ ಆಗಿದ್ದು. ಈಗಾಗಲೇ ಸಿನಿಮಾಗೆ ಸಖತ್ ರೆಸ್ಪಾನ್ ಸಿಕ್ಕಿದೆ. ಇನ್ನು ಈ ಸಿನಿಮಾದ ನಾಯಕ ನಟ ತೇಜ್ ಸಜ್ಜಾ ಫುಲ್ ಖುಷಿಯಾಗಿ ಮೊದಲ ಸಿನಿಮಾದಲ್ಲೇ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ವರಲಕ್ಷ್ಮೀ ಶರತ್ ಕುಮಾರ್ & ವಿನಯ್ ರೈ, ರಾಜ್ ದೀಪಕ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ರಿಲೀಸ್ ಆಗಿದ್ದು ಯಾವಾಗ?
ನಿರ್ದೇಶಕ ಪ್ರಶಾಂತ್ ವರ್ಮಾ ಭಾರತದ ಮೊದಲ ಸೂಪರ್ ಹೀರೋ 'ಹನು-ಮಾನ್' ಕುರಿತು ಕಥೆಯ ಹೆಣೆದು ಪ್ಯಾನ್ ಇಂಡಿಯಾ ನಿರ್ದೇಶಕನಾಗಿ ಹೊರ ಹೊಮ್ಮಿದ್ದು. ಹೀರೋ ಆಗಿ ತೇಜ ಸಜ್ಜ ನಟಿಸಿದ್ದು, ನಾಯಕಿ ಆಗಿ ಅಮೃತಾ ಐಯ್ಯರ್ ನಟಿಸಿದ್ದಾರೆ. ಇನ್ನು ಅಂಜನಾದ್ರಿ ಎಂಬ ಕಾಲ್ಪನಿಕ ಊರಲ್ಲಿ ನಡೆಯುವ ಹನುಮಾನ್ ಬಗ್ಗೆ ಎಲ್ಲರಲ್ಲಿಯೂ ನಿರೀಕ್ಷೆ ಹೆಚ್ಚಾಗಿತ್ತು. ಚಿತ್ರ ಜನವರಿ 12ಕ್ಕೆ ರಿಲೀಸ್ ಆಗಿದ್ದು, ಪ್ಯಾನ್ ವರ್ಲ್ಡ್ ಲೆವೆಲ್ನಲ್ಲಿ ಹನುಮಾನ್ ರಿಲೀಸ್ ಆಗಿದೆ.

ಯಾವ ಯಾವ ಭಾಷೆಯಲ್ಲಿ ರಿಲೀಸ್?
ತೆಲುಗು, ಕನ್ನಡ, ಮರಾಠಿ, ತಮಿಳು, ಮಲಯಾಳಂ, ಇಂಗ್ಲೀಷ್, ಸ್ಯಾನೀಶ್, ಚೈನೀಸ್, ಜಪಾನೀಸ್ ಮತ್ತು ಕೊರಿಯನ್ ಭಾಷೆಯಲ್ಲಿ ರಿಲೀಸ್ ಆಗಿದೆ. ಸಂಕ್ರಾಂತಿ ಹಬ್ಬಕ್ಕೆ ವಿಶ್ವಾದ್ಯಂತ ಹನುಮಾನ್ ದರ್ಶನ ಆಗಿದ್ದು, ಕನ್ನಡದಲ್ಲಿ ಚಿತ್ರವನ್ನು ಕೆಆರ್ಜಿ ಬಿಡುಗಡೆ ಮಾಡಿದೆ. ಹೀಗೆ ಸಖತ್ ಸದ್ದು ಮಾಡುತ್ತಿದೆ ಟಾಲಿವುಡ್ ಸಿನಿಮಾ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications