MS Umesh Passes Away: "ಬೊಂಬೆಯಾಟವಯ್ಯಾ" ಖ್ಯಾತಿಯ ಸ್ಯಾಂಡಲ್ವುಡ್ ಹಿರಿಯ ನಟ ಉಮೇಶ್ ನಿಧನ
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಎಂ.ಎಸ್.ಉಮೇಶ್ (ಮೈಸೂರು ಶ್ರೀಕಂಠಯ್ಯ ಉಮೇಶ್) ನಿಧನರಾಗಿದ್ದಾರೆ. ಅವರು ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ಉಮೇಶ್ ಅವರಿಗೆ ಕ್ಯಾನ್ಸರ್ ಇರುವುದನ್ನು ವೈದ್ಯರು ದೃಢಪಡಿಸಿದ್ದರು. ಸದ್ಯ ಚಿಕಿತ್ಸೆ ಫಲಿಸದೆ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 350ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಉಮೇಶ್ ಅವರು ತಮ್ಮ ಹಾಸ್ಯದ ಹಾವಭಾವ ಹಾಗೂ "ಅಪಾರ್ಥ ಮಾಡ್ಕೋಬೇಡಿ" ಡೈಲಾಗ್ನಿಂದ ಮನೆಮಾತಾಗಿದ್ದರು.
ಗುರು ಶಿಷ್ಯರು, ಹಾಲು ಜೇನು, ಅಪೂರ್ವ ಸಂಗಮ ಸೇರಿದಂತೆ ಕನ್ನಡದ ಬಹುತೇಕ ಸ್ಟಾರ್ ನಟರೊಂದಿಗೆ ಹಿಟ್ ಸಿನಿಮಾಗಳಲ್ಲಿ ಉಮೇಶ್ ನಟಿಸಿದ್ದಾರೆ. ಇತ್ತೀಚೆಗೆ ಮನೆಯಲ್ಲಿ ಆಯತಪ್ಪಿ ಬಿದ್ದಿದ್ದ ಉಮೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರಿಗೆ ಸ್ಕ್ಯಾನಿಂಗ್ ಮಾಡಿದಾಗ ಉಮೇಶ್ ಅವರಿಗೆ ಕ್ಯಾನ್ಸರ್ ಮೂರನೇ ಸ್ಟೇಜ್ನಲ್ಲಿರುವುದು ಪತ್ತೆಯಾಗಿತ್ತು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬೇಗನೆ ಚೇತರಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ದುರಾದೃಷ್ಟವಶಾತ್ ಉಮೇಶ್ ಅವರು ಇಹಲೋಕ ತ್ಯಜಿಸಿದ್ದಾರೆ.

ಉಮೇಶ್ ಅವರ ದೇಹದ ಕೆಲ ಭಾಗಕ್ಕೆ ಕ್ಯಾನ್ಸರ್ ಹರಡಿಕೊಂಡಿದ್ದು, ಈ ಕಾರಣ ಸರ್ಜರಿ ಮಾಡುವುದು ಕೂಡ ಕಷ್ಟ ಎಂದು ವೈದ್ಯರು ಹೇಳಿದ್ದರು. ಆದರೆ ಉಮೇಶ್ ಅವರು ನಗುತ್ತಲೇ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದರು. ವೈದ್ಯರು ನನ್ನನ್ನ ಚೆನ್ನಾಗಿ ನೋಡಿಕೊಳ್ತಿದ್ದಾರೆ. ಅಭಿಮಾನಿಗಳು ಯಾರೂ ಆತಂಕಪಡಬೇಡಿ, ಆದಷ್ಟು ಬೇಗ ಹುಷಾರಾಗಿ ಬರುತ್ತೀನಿ ಎಂದಿದ್ದರು.
ಉಮೇಶ್ ಅವರ ಹಿನ್ನೆಲೆ
ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದಲ್ಲಿ ಜನಪ್ರಿಯ ಹಾಸ್ಯ ಕಲಾವಿದರಾಗಿ ಉಮೇಶ್ ಗುರುತಿಸಿಕೊಂಡಿದ್ದರು. "ಅಯ್ಯಯ್ಯೋ ಇವ್ರೂ ನನ್ನ ಅಪಾರ್ಥ ಮಾಡ್ಕೊಂಬಿಟ್ರಲ್ಲ" ಎನ್ನುವ ತಮ್ಮ ಜನಪ್ರಿಯ ಡೈಲಾಗ್ ಮೂಲಕ ಉಮೇಶ್ ಮನೆಮಾತಾಗಿದ್ದರು. ಕನ್ನಡ ಚಿತ್ರರಂಗದಲ್ಲಿ ಎಂ.ಎಸ್. ಉಮೇಶ್ ಎಂದೇ ಜನಪ್ರಿಯರಾಗಿದ್ದ ಇವರು ಆರು ದಶಕಗಳಿಂದಲೂ ಅವರು ಕನ್ನಡ ಸಿನಿಪ್ರೇಕ್ಷಕರನ್ನು ನಕ್ಕು ನಗಿಸಿದ್ದರು. ಸಿನಿಮಾವೊಂದರಲ್ಲಿ ವೃದ್ಧ ವಿಧವೆ ಅಜ್ಜಿಯ ಪಾತ್ರವೂ ಮೆಚ್ಚುಗೆ ಪಡೆದಿತ್ತು. ರಾಜ್ಕುಮಾರ್ ಅವರ "ಬೊಂಬೆಯಾಟವಯ್ಯಾ" ಹಾಡಿನಲ್ಲೂ ಉಮೇಶ್ ಕಾಣಿಸಿಕೊಂಡಿದ್ದಾರೆ.

ಉಮೇಶ್ ಮೊದಲಿಗೆ ಮಕ್ಕಳ ರಾಜ್ಯ (1960) ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕಾಗಿ ಆಯ್ಕೆಯಾಗಿದ್ದರು. 1977ರಲ್ಲಿ ತೆರೆಕಂಡ ಕಥಾ ಸಂಗಮದಲ್ಲಿ "ತಿಮ್ಮರಾಯ್" ಪಾತ್ರಕ್ಕೆ ಅವರಿಗೆ ಅತ್ಯುತ್ತಮ ಪೋಷಕ ನಟನೆಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ತಂದುಕೊಟ್ಟಿತ್ತು. ನಾಗರ ಹೊಳೆ, ಗುರು ಶಿಷ್ಯರು, ಕಾಮನ ಬಿಲ್ಲು, ಅಪೂರ್ವ ಸಂಗಮ, ಶ್ರುತಿ ಸೇರಿದಾಗ, ಮಲಯ ಮಾರುತ, ಹಾಲು ಸಕ್ಕರೆ, ಸಂಕಟದಲ್ಲಿ ವೆಂಕಟ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ಉಮೇಶ್ ಹಾಸ್ಯ ಪ್ರಧಾನ ಪಾತ್ರಗಳನ್ನು ಮಾಡಿದ್ದಾರೆ.
ಗಣ್ಯರ ಸಂತಾಪ
ಉಮೇಶ್ ಅವರ ನಿಧನಕ್ಕೆ ಚಿತ್ರರಂಗ ಹಾಗೂ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ತಮ್ಮ ನವಿರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸುತ್ತಿದ್ದ ಉಮೇಶ್ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಟರು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟರಾದ ಎಂ.ಎಸ್ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದೇವರು ನೋವು ಭರಿಸುವ ಶಕ್ತಿ ನೀಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ತಿಳಿಸಿದ್ದಾರೆ. ಉಮೇಶ್ ಅವರ ಕಾಯ ಅಳಿದರೂ ಅವರ ಚಲನಚಿತ್ರಗಳ ಮೂಲಕ ಕನ್ನಡಿಗರ ಜನಮಾನಸದಲ್ಲಿ ಅವರು ಸದಾ ಜೀವಂತ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಸ್ಮರಿಸಿದ್ದಾರೆ.
-
Kannada Vs Hindi: ಭಾಷಾ ಶಿಕ್ಷಣ–ಸಮಸ್ಯೆ ಇರುವುದು ಫೈನ್ ಟ್ಯೂನಿಂಗ್ನಲ್ಲಿ: ರಾಜಾರಾಂ ತಲ್ಲೂರು ಬರಹ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications