ಸರಿಗಮಪ ಫೈನಲ್ ಅಂಗಳ ತಲುಪಿದ 6 ಸ್ಪರ್ಧಿಗಳು, ಕಪ್ ಗೆಲ್ಲೋದು ಯಾರು?
ಕನ್ನಡದ ಜನಪ್ರಿಯ ಸಂಗೀತ ಕಾರ್ಯಕ್ರಮ ಸರಿಗಮಪ ಸೀಸನ್ 21 ಫಿನಾಲೆ ಹಂತ ತಲುಪಿದೆ. ಸ್ಪರ್ಧಿಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು, ಇತ್ತೀಚೆಗೆ ಟಿಕೆಟ್ ಟು ಫಿನಾಲೆ ರೌಂಡ್ನಲ್ಲಿ ಒಬ್ಬರು ನೇರವಾಗಿ ಫೈನಲ್ ಅಂಗಳ ತಲುಪಿದ್ದರು. ಬಳಿಕ ನಡೆದ ಸೆಮಿಫೈನಲ್ ರೌಂಡ್ ಸೇರಿ ಅಂತಿಮವಾಗಿ ಆರು ಸ್ಪರ್ಧಿಗಳು ಫಿನಾಲೆಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ಕಪ್ ಗೆಲ್ಲೋರು ಯಾರು ಅನ್ನೋ ಕುತೂಹಲ ಕೂಡ ಹೆಚ್ಚಾಗಿದ್ದು, ಎಲ್ಲರ ಚಿತ್ತ ಈ ಆರು ಸ್ಪರ್ಧಿಗಳತ್ತ ಇದೆ.
ಟಿಕೆಟ್ ಟು ಫಿನಾಲೆ ರೌಂಡ್ನಲ್ಲಿ ಬೀದರ್ನ ಶಿವಾನಿ ಹಾಗೂ ಉಡುಪಿಯ ಆರಾಧ್ಯ ರಾವ್ ನೇರವಾಗಿ ಆಯ್ಕೆಯಾಗಿದ್ದರು. ಮೇ 24 ಹಾಗೂ 25ರಂದು ನಡೆದ ಸೆಮಿ ಫೈನಲ್ನಲ್ಲಿ ರಶ್ಮಿ, ಬಾಳು ಬೆಳಗುಂದಿ, ದ್ಯಾಮೇಶ್, ಅಮೋಘ ವರ್ಷ ಅವರು ಕೂಡ ಫಿನಾಲೆಗೆ ಆಯ್ಕೆಯಾಗಿದ್ದಾರೆ. ಈಗ ಫಿನಾಲೆಯಲ್ಲಿ ಶಿವಾನಿ, ರಶ್ಮಿ ಡಿ, ಬಾಳು ಬೆಳಗುಂದಿ, ಆರಾಧ್ಯಾ ರಾವ್, ದ್ಯಾಮೇಶ್ ಹಾಗೂ ಅಮೋಘ ವರ್ಷ ನಡುವೆ ಸಂಗೀತದ ಬಿಗ್ಫೈಟ್ ನಡೆಯಲಿದೆ.

ಇತ್ತೀಚೆಗೆ ನಡೆದ ಸೆಮಿಫೈನಲ್ನಲ್ಲೂ ಸ್ಪರ್ಧಿಗಳು ತಮ್ಮ ಗಾನ ಪ್ರತಿಭೆಯ ಮೂಲಕ ತೀರ್ಪುಗಾರರಾದ ರಾಜೇಶ್ ಕೃಷ್ಣನ್, ಅರ್ಜುನ್ ಜನ್ಯ, ವಿಜಯ್ ಪ್ರಕಾಶ್ ಅವರನ್ನು ಮೋಡಿ ಮಾಡುವ ಮೂಲಕ ಫಿನಾಲೆಗೆ ಕಾಲಿಟ್ಟಿದ್ದಾರೆ. ಸೆಮಿಫೈನಲ್ ರೌಂಡ್ ಸೇರಿ ಅಂತಿಮವಾಗಿ ಆರು ಸ್ಪರ್ಧಿಗಳು ಫಿನಾಲೆಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ಕಪ್ ಗೆಲ್ಲೋರು ಯಾರು ಅನ್ನೋ ಕುತೂಹಲ ಕೂಡ ಹೆಚ್ಚಾಗಿದ್ದು, ಎಲ್ಲರ ಚಿತ್ತ ಈ ಆರು ಸ್ಪರ್ಧಿಗಳತ್ತ ಇದೆ.
ಲಹರಿ ಅಭಿಮಾನಿಗಳ ಬೇಸರ!
ಸೆಮಿಫೈನಲ್ನಲ್ಲಿ ಹಾಡಿದವರ ಪೈಕಿ ಲಹರಿ ಕೂಡ ಸೊಗಸಾಗಿ ಹಾಡಿದ್ದಾರೆ. ಆದರೆ ಅವರನ್ನು ಫೈನಲ್ಗೆ ಆಯ್ಕೆ ಮಾಡಿಲ್ಲ ಎಂದು ಅವರ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಈ ರೌಂಡ್ನಲ್ಲಿ ಅತ್ಯುತ್ತಮವಾಗಿ ಹಾಡಿದ ಲಹರಿಗೆ ಫಿನಾಲೆಗೆ ಅವಕಾಶ ಸಿಕ್ಕಿಲ್ಲ ಎಂದು ಹಲವರು ಆಕ್ಷೇಪ ಹೊರಹಾಕಿದ್ದಾರೆ. ಕೊನೆಯ ಪಕ್ಷ ಲಹರಿಯನ್ನು ಫೈನಲ್ ರೌಂಡ್ನಲ್ಲಿ ನೋಡುವ ಅವಕಾಶವೂ ಇಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಈ ಬಾರಿಯ ಸೀಸನ್ನಲ್ಲಿ ಎಲ್ಲ ಸ್ಪರ್ಧಿಗಳು ಕೂಡ ತಮ್ಮ ಗಾಯನದ ಮೂಲಕ ಮೋಡಿ ಮಾಡುತ್ತಿದ್ದು, ಕಪ್ ಗೆಲ್ಲೋದು ಯಾರು ಅನ್ನೋದೆ ಈಗ ಎಲ್ಲರಲ್ಲಿರುವ ಕುತೂಹಲ. ಅನೇಕರು ಆರಾಧ್ಯಾ ರಾವ್ ಈ ಬಾರಿ ವಿಜೇತರಾಗುತ್ತಾರೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಬಾಳು ಬೆಳಗುಂದಿ, ಶಿವಾನಿ ಅವರಿಗೂ ಕೂಡ ಅಪಾರ ಅಭಿಮಾನಿ ಬಳಗ ಹುಟ್ಟಿಕೊಂಡಿದೆ. ಸರಿಗಮಪ ಫೈನಲ್ಗೆ ಕ್ಷಣಗಣನೆ ಶುರುವಾಗಿದ್ದು, ಸದ್ಯದಲ್ಲೇ ಈ ಸೀಸನ್ ವಿನ್ನರ್ ಯಾರು ಎನ್ನುವ ಕುತೂಹಲಕ್ಕೆ ತೆರೆಬೀಳಲಿದೆ. ಈ ಬಾರಿ ಸರಿಗಮಪ ಸೀಸನ್ 21 ಅನ್ನು ಒಟಿಟಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ. ಈ ಶನಿವಾರ ಹಾಗೂ ಭಾನುವಾರ ಸಂಜೆ 7.30ಕ್ಕೆ ಫಿನಾಲೆ ಎಪಿಸೋಡ್ ಪ್ರಸಾರ ಕಾಣಲಿದ್ದು, ಕಪ್ ಯಾರ ಮುಡಿಗೇರಲಿದೆ ಎಂಬುದು ಕಾದು ನೋಡೋಣ..
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications