SeethaRama Serial: ಇನ್ಮುಂದೆ ಮಲಯಾಳಂನಲ್ಲಿ ಸೀತಾ ರಾಮ: ಏನಿದು ಹೊಸ ವಿಚಾರ?
ಕಿರುತೆರೆಯ ಸೆನ್ಸಷೇನಲ್ ಧಾರಾವಾಹಿ ಸೀತಾ ರಾಮ ಕಿರುತೆರೆ ಪ್ರೇಕ್ಷಕರ ಮೆಚ್ಚಿನ ಆಯ್ಕೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಈ ಧಾರಾವಾಹಿ ಕಥೆ ಎಂತವರಿಗಾದರೂ ಇಷ್ಟವಾಗುತ್ತದೆ. ಪ್ರಸಾರಕ್ಕೂ ಮೊದಲು ಹಾಡಿನಿಂದಲೇ ಜನಪ್ರಿಯತೆ ಪಡೆದ ಸೀತಾ ರಾಮ ಧಾರಾವಾಹಿ, ಪ್ರಸಾರ ಕಂಡ ಬಳಿಕ ನೋಡುಗರ ಮನಸ್ಸು ಗೆದ್ದಿದೆ. ಟಿಆರ್ಪಿ ಪಟ್ಟಿಯಲ್ಲಿಯೂ ಮೂರನೇ ಸ್ಥಾನ ಪಡೆದುಕೊಂಡಿರುವ ಸೀತಾ ರಾಮ ಧಾರಾವಾಹಿ ಕಥೆ ದಿನದಿಂದ ದಿನಕ್ಕೆ ಇಂಟ್ರಸ್ಟಿಂಗ್ ಆಗುತ್ತಿದೆ.
ಕನ್ನಡ ಕಿರುತೆರೆ ಪ್ರೇಕ್ಷಕರ ಮೆಚ್ಚಿನ ಸೀತಾ ರಾಮ ಧಾರಾವಾಹಿ ತಂಡ ಇದೀಗ ಮಲಯಾಳಂನತ್ತ ಮುಖ ಮಾಡಿದ್ದಾರೆ. ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಸೀತಾ ರಾಮ ಧಾರಾವಾಹಿ ಮಲಯಾಳಂಗೆ ಡಬ್ ಆಗಿದೆ. ಜೀ ಕೇರಳಂನಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ. ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ರೀತು ಸಿಂಗ್ ಕಾಣಿಸಿಕೊಂಡಿರುವ ಸೀತಾ ರಾಮ ಧಾರಾವಾಹಿಯ ಮೊದಲ ಪ್ರೋಮೋವನ್ನು ಮಲಯಾಳಂನಲ್ಲಿ ಡಬ್ ಮಾಡಲಾಗಿದೆ.

ಈ ವಿಡಿಯೋವನ್ನು ಜೀ ಕೇರಳಂನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಜೀ ಕೇರಳಂ ಕುಟುಂಬಕ್ಕೆ ಹೊಸ ಸರಣಿಯನ್ನು ಸೇರಿಸಲಾಗಿದೆ. ನಿಮ್ಮದೇ ಆದ ಕೇರಳ ವಾಹಿನಿಯಲ್ಲಿ ಸೀತಾ ರಾಮ ಶೀಘ್ರದಲ್ಲೇ ಬರಲಿದ್ದಾರೆ ಎಂದು ಜೀ ಕೇರಳಂನಲ್ಲಿ ಹಂಚಿಕೊಳ್ಳಲಾಗಿದೆ.
ಇನ್ನು ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಸೀತಾ ರಾಮ ಧಾರಾವಾಹಿ ಇತ್ತೀಚಿಗಷ್ಟೇ 200 ಸಂಚಿಕೆಗಳನ್ನು ಪೂರ್ಣಗೊಳಿಸಿದೆ. ಕಥೆ ಈಗ ಇಂಟ್ರಸ್ಟಿಂಗ್ ಆಗಿದ್ದು, ಸೀತಾಳ ಹಿಂದಿನ ಕಥೆಗಾಗಿ ಪ್ರೇಕ್ಷಕರು ಕಾತುರರಾಗಿದ್ದಾರೆ. ಸದ್ಯ ಸೀತಾ-ರಾಮರ ಮಧ್ಯೆ ಪ್ರೀತಿ ಮೂಡಿ. ಈ ಪ್ರೀತಿಗೆ ದೇಸಾಯಿ ಕುಟುಂಬದ ಒಪ್ಪಿಗೆ ಕೂಡ ಸಿಕ್ಕಿದೆ. ರಾಮ ಹಾಗೂ ಸೀತಾರ ಪ್ರೀತಿಗೆ ಸೇತುವೆಯಾಗಿರುವ ಸಿಹಿ ಹುಟ್ಟಿನ ರಹಸ್ಯ ಏನು ಏನ್ನುವುದು ಸದ್ಯದ ಪ್ರಶ್ನೆಯಾಗಿದೆ. ಇನ್ನು ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ರೀತು ಸಿಂಗ್, ಮುಖ್ಯಮಂತ್ರಿ ಚಂದ್ರು, ಪೂಜಾ ಲೋಕೇಶ್ ಸೇರಿದಂತೆ ಸೀತಾ ರಾಮ ಧಾರಾವಾಹಿಯಲ್ಲಿ ದೊಡ್ಡ ತಾರಾ ಬಳಗವೇ ಇದೆ.
-
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ












Click it and Unblock the Notifications