Shah Rukh Khan & Yash: ಗೆಳೆಯ ಯಶ್ಗೆ ವಿಶೇಷ ಮನವಿ ಮಾಡಿದ ಶಾರುಖ್ ಖಾನ್
ಬಾಲಿವುಡ್ ನಟ ಶಾರುಖ್ ಖಾನ್ ಕೆಜಿಎಫ್ ನಟ ಯಶ್ ಸೇರಿದಂತೆ ದಕ್ಷಿಣ ಭಾರತದ ಹಲವು ನಟರನ್ನು ನನ್ನ ಸ್ನೇಹಿತರು ಎಂದು ಕರೆದಿದ್ದಾರೆ. ಜೊತೆಗೆ ದಕ್ಷಿಣ ಭಾರತದ ಹೀರೋಗಳಿಗೆ ವಿಶೇಷವಾದ ಮನವಿಯೊಂದನ್ನು ಮಾಟಿದ್ದಾರೆ. ಅವರ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
ಭಾನುವಾರ ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈನಲ್ಲಿರುವ ಗ್ಲೋಬಲ್ ವಿಲೇಜ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಅವರ ವಿಡಿಯೋ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಒಂದು ವಿಡಿಯೋದಲ್ಲಿ ಅವರು ದಕ್ಷಿಣ ಭಾರತದ ನಟರನ್ನು ನನ್ನ ಸ್ನೇಹಿತರು ಎಂದು ಕರೆದಿದ್ದಾರೆ.

ಶಾರುಖ್ ಖಾನ್ ಅವರ ಅಭಿಮಾನಿಯೊಬ್ಬರು ಹಂಚಿಕೊಂಡಿರುವ ವಿಡಿಯೋದಲ್ಲಿ ಜನ ಶಾರುಖ್ ಖಾನ್ ಅವರನ್ನು ಡ್ಯಾನ್ಸ್ ಮಾಡಲು ಹುರಿದುಂಬಿಸುವಾಗ ಮಾತನಾಡಿದ ಅವರು, ಕರ್ನಾಟಕ, ಕೇರಳ, ತೆಲಂಗಾಣ ಮತ್ತು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಜನರನ್ನು ಉದ್ದೇಶಿಸಿ, ನನಗೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಹಲವು ಸ್ನೇಹಿತರಿದ್ದಾರೆ. ಯಶ್, ಪ್ರಭಾಸ್, ಅಲ್ಲು ಅರ್ಜುನ್, ರಾಮ್ ಚರಣ್, ಮಹೇಶ್ ಬಾಬು, ವಿಜಯ್ ದಳಪತಿ, ರಜಿನಿ ಕಾಂತ್ ಸರ್, ಕಮಲ್ ಹಾಸನ್ ಸರ್ ನನ್ನ ಸ್ನೇಹಿತರಾಗಿದ್ದಾರೆ. ಅವರಿಗೆ ನನ್ನದೊಂದು ಮನವಿ ಇದೆ, ಅವರು ಇಷ್ಟು ವೇಗವಾಗಿ ಡ್ಯಾನ್ಸ್ ಮಾಡುವುದನ್ನು ನಿಲ್ಲಿಸಬೇಕು, ಅವರಂತೆ ವೇಗವಾಗಿ ಡ್ಯಾನ್ಸ್ ಮಾಡುವುದು ನನಗೆ ಕಷ್ಟ ಎಂದು ಮನವಿ ಮಾಡಿದರು. ದಕ್ಷಿಣ ಭಾರತದ ನಟರನ್ನು ನನ್ನ ಸ್ನೇಹಿತರು ಎಂದಿದ್ದಕ್ಕೆ ಹಲವು ನಟರ ಅಭಿಮಾನಿಗಳು ಖುಷಿಯಾಗಿದ್ದಾರೆ.
ಪಠಾಣ್, ಜವಾನ್ ಸಿನಮಾದ ಭರ್ಜರಿ ಯಶಸ್ಸಿನ ಬಳಿಕ ಹೊಸ ಚಿತ್ರಕ್ಕೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಪಠಾಣ್ ಸಿನಿಮಾ ನಿರ್ದೇಶಕ ಸಿದ್ಧಾರ್ಥ್ ಆನಂದ್ ಜೊತೆ ಮುಂದಿನ ಸಿನಿಮಾಗೆ ಕೈಜೋಡಿಸಿದ್ದಾರೆ. ಇದಕ್ಕೆ ಕಿಂಗ್ ಎಂದು ಹೆಸರಿಡಲಾಗಿದೆ.
ನಾನು ಇಲ್ಲಿ ಚಿತ್ರೀಕರಣ ಮಾಡಲು ಬಂದಿಲ್ಲ, ಒಂದೆರಡು ತಿಂಗಳ ಬಳಿಕ ಮುಂಬೈನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾದ ಬಗ್ಗೆ ಯಾವುದೇ ವಿಚಾರವನ್ನು ಬಹಿರಂಗಪಡಿಸಬಾರದು ಎಂದು ನಿರ್ದೇಶಕ ಸಿದ್ಧಾರ್ಥ್ ಆನಂದ್ ಕಟ್ಟುನಿಟ್ಟಾಗಿ ಸೂಚನೆ ಕೊಟ್ಟಿದ್ದಾರೆ. ಆದ್ದರಿಂದ ಸಿನಿಮಾದ ಬಗ್ಗೆ ನಾನು ಏನೂ ಹೇಳಲಾರೆ, ಆದರೆ ಅದು ನಿಮಗೆ ಉತ್ತಮ ಮನರಂಜನೆ ನೀಡುತ್ತೆ ಎಂದು ಭರವಸೆ ನೀಡುತ್ತೇನೆ ಎಂದು ಹೇಳಿದರು.
ಶಾರುಖ್ ಖಾನ್ ಅವರ ಮಗಳು ಸುಹಾನಾ ಖಾನ್ ಮತ್ತು ಅಭಿಷೇಕ್ ಬಚ್ಚನ್ ಕೂಡ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications