Shah Rukh Khan & Yash: ಗೆಳೆಯ ಯಶ್ಗೆ ವಿಶೇಷ ಮನವಿ ಮಾಡಿದ ಶಾರುಖ್ ಖಾನ್
ಬಾಲಿವುಡ್ ನಟ ಶಾರುಖ್ ಖಾನ್ ಕೆಜಿಎಫ್ ನಟ ಯಶ್ ಸೇರಿದಂತೆ ದಕ್ಷಿಣ ಭಾರತದ ಹಲವು ನಟರನ್ನು ನನ್ನ ಸ್ನೇಹಿತರು ಎಂದು ಕರೆದಿದ್ದಾರೆ. ಜೊತೆಗೆ ದಕ್ಷಿಣ ಭಾರತದ ಹೀರೋಗಳಿಗೆ ವಿಶೇಷವಾದ ಮನವಿಯೊಂದನ್ನು ಮಾಟಿದ್ದಾರೆ. ಅವರ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
ಭಾನುವಾರ ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈನಲ್ಲಿರುವ ಗ್ಲೋಬಲ್ ವಿಲೇಜ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಅವರ ವಿಡಿಯೋ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಒಂದು ವಿಡಿಯೋದಲ್ಲಿ ಅವರು ದಕ್ಷಿಣ ಭಾರತದ ನಟರನ್ನು ನನ್ನ ಸ್ನೇಹಿತರು ಎಂದು ಕರೆದಿದ್ದಾರೆ.

ಶಾರುಖ್ ಖಾನ್ ಅವರ ಅಭಿಮಾನಿಯೊಬ್ಬರು ಹಂಚಿಕೊಂಡಿರುವ ವಿಡಿಯೋದಲ್ಲಿ ಜನ ಶಾರುಖ್ ಖಾನ್ ಅವರನ್ನು ಡ್ಯಾನ್ಸ್ ಮಾಡಲು ಹುರಿದುಂಬಿಸುವಾಗ ಮಾತನಾಡಿದ ಅವರು, ಕರ್ನಾಟಕ, ಕೇರಳ, ತೆಲಂಗಾಣ ಮತ್ತು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಜನರನ್ನು ಉದ್ದೇಶಿಸಿ, ನನಗೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಹಲವು ಸ್ನೇಹಿತರಿದ್ದಾರೆ. ಯಶ್, ಪ್ರಭಾಸ್, ಅಲ್ಲು ಅರ್ಜುನ್, ರಾಮ್ ಚರಣ್, ಮಹೇಶ್ ಬಾಬು, ವಿಜಯ್ ದಳಪತಿ, ರಜಿನಿ ಕಾಂತ್ ಸರ್, ಕಮಲ್ ಹಾಸನ್ ಸರ್ ನನ್ನ ಸ್ನೇಹಿತರಾಗಿದ್ದಾರೆ. ಅವರಿಗೆ ನನ್ನದೊಂದು ಮನವಿ ಇದೆ, ಅವರು ಇಷ್ಟು ವೇಗವಾಗಿ ಡ್ಯಾನ್ಸ್ ಮಾಡುವುದನ್ನು ನಿಲ್ಲಿಸಬೇಕು, ಅವರಂತೆ ವೇಗವಾಗಿ ಡ್ಯಾನ್ಸ್ ಮಾಡುವುದು ನನಗೆ ಕಷ್ಟ ಎಂದು ಮನವಿ ಮಾಡಿದರು. ದಕ್ಷಿಣ ಭಾರತದ ನಟರನ್ನು ನನ್ನ ಸ್ನೇಹಿತರು ಎಂದಿದ್ದಕ್ಕೆ ಹಲವು ನಟರ ಅಭಿಮಾನಿಗಳು ಖುಷಿಯಾಗಿದ್ದಾರೆ.
ಪಠಾಣ್, ಜವಾನ್ ಸಿನಮಾದ ಭರ್ಜರಿ ಯಶಸ್ಸಿನ ಬಳಿಕ ಹೊಸ ಚಿತ್ರಕ್ಕೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಪಠಾಣ್ ಸಿನಿಮಾ ನಿರ್ದೇಶಕ ಸಿದ್ಧಾರ್ಥ್ ಆನಂದ್ ಜೊತೆ ಮುಂದಿನ ಸಿನಿಮಾಗೆ ಕೈಜೋಡಿಸಿದ್ದಾರೆ. ಇದಕ್ಕೆ ಕಿಂಗ್ ಎಂದು ಹೆಸರಿಡಲಾಗಿದೆ.
ನಾನು ಇಲ್ಲಿ ಚಿತ್ರೀಕರಣ ಮಾಡಲು ಬಂದಿಲ್ಲ, ಒಂದೆರಡು ತಿಂಗಳ ಬಳಿಕ ಮುಂಬೈನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾದ ಬಗ್ಗೆ ಯಾವುದೇ ವಿಚಾರವನ್ನು ಬಹಿರಂಗಪಡಿಸಬಾರದು ಎಂದು ನಿರ್ದೇಶಕ ಸಿದ್ಧಾರ್ಥ್ ಆನಂದ್ ಕಟ್ಟುನಿಟ್ಟಾಗಿ ಸೂಚನೆ ಕೊಟ್ಟಿದ್ದಾರೆ. ಆದ್ದರಿಂದ ಸಿನಿಮಾದ ಬಗ್ಗೆ ನಾನು ಏನೂ ಹೇಳಲಾರೆ, ಆದರೆ ಅದು ನಿಮಗೆ ಉತ್ತಮ ಮನರಂಜನೆ ನೀಡುತ್ತೆ ಎಂದು ಭರವಸೆ ನೀಡುತ್ತೇನೆ ಎಂದು ಹೇಳಿದರು.
ಶಾರುಖ್ ಖಾನ್ ಅವರ ಮಗಳು ಸುಹಾನಾ ಖಾನ್ ಮತ್ತು ಅಭಿಷೇಕ್ ಬಚ್ಚನ್ ಕೂಡ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications