Rachita Ram: ಬಿಕ್ಲು ಶಿವ ಹತ್ಯೆ ಕೇಸ್ ಆರೋಪಿ ಜಗ್ಗನಿಂದ ರಚ್ಚುಗೆ ಭರ್ಜರಿ ಗಿಫ್ಟ್: ಫೋಟೋ ವೈರಲ್
ಬೆಂಗಳೂರು, ಜುಲೈ 22: ಹೊಸ ಸಿನಿಮಾವೊಂದ ಪ್ರಚಾರಕ್ಕೆ ಹೋಗಿಲ್ಲ ಎಂಬ ಆರೋಪ ಎದುರಿಸಿದ್ದ ನಟಿ ರಚಿತಾ ರಾಮ್ ಬೇರೆ ಬೇರೆ ಸಿನಿಮಾ ಹಾಗೂ ಇತರ ಕೆಲಸಗಳಲ್ಲಿ ಬ್ಯೂಸಿ ಇದ್ದಾರೆ. ಇದೀಗ ಅವರು ಕೊಲೆ ಆರೋಪಿ ರೌಡಿ ಜಗ್ಗನಿಂದ ಸೀರೆ ಹಾಗೂ ಚಿನ್ನಾಭರಣ ಉಡುಗೊರೆ ಪಡೆದಿರುವುದು ಬೆಳಕಿಗೆ ಬಂದಿದೆ. ಕೊಲೆ ಪ್ರಕರಣ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಆರೋಪಿ ಜಗ್ಗನಿಗೂ ಸಿನಿಮಾ ರಂಗಕ್ಕೂ ನಂಟಿರುವುದು ವೈರಲ್ ಆಗುತ್ತಿರುವ ಫೋಟೋದಿಂದ ಗೊತ್ತಾಗಿದೆ. ಏನಿದು ಪ್ರಕರಣ?
ಬೆಂಗಳೂರಿನಲ್ಲಿ ಈ ಹಿಂದೆ ನಡೆದಿದ್ದ ಭಾರತಿನಗರ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನಿಗೆ ಸಿನಿಮಾ ರಂಗದವರ ಜೊತೆಗೆ ಒಡನಾಟವಿತ್ತು ಎಂಬ ಮಾಹಿತಿ ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ತನಿಖೆ ಆರಂಭಿಸಿದ್ದ ಪೊಲೀಸರಿಗೆ ಒಂದೊಂದಾಗೆ ಮಾಹಿತಿ ಸಿಕ್ಕಿದೆ. ಅದರಲ್ಲಿ ರಚಿತಾ ರಾಮ್ ಶೂಟಿಂಗ್ ವೇಳೆ ಇದೇ ಆರೋಪಿ ಭರ್ಜರಿ ಗಿಫ್ಟ್ ನೀಡಿದ್ದಾನೆ. ಈ ವೇಳೆ ನಟ ರವಿಚಂದ್ರನ್ ಅವರು ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ರವಿ ಬೋಪಣ್ಣ ಸಿನಿಮಾ ಶೂಟಿಂಗ್ ವೇಳೆ ತೆರಳಿದ್ದ ಆರೋಪಿ ಜಗ್ಗ ಡಿಂಪಲ್ ಕ್ವೀನ್ ರಚಿತಾ ರಾಮ್ಗೆ ಕಾಸ್ಲಿ ಉಡುಗೊರೆ ನೀಡಿದ್ದ ಫೋಟೋ ವೈರಲ್ ಆಗಿದೆ. ರೆಷ್ಮೆ ಸೀರೆ, ಚಿನ್ನಾಭರಣ ಗಿಫ್ಟ್ ನೀಡಿದ್ದಾನೆ. ಅದರಲ್ಲಿ ಚಿನ್ನದ ನಕ್ಲೇಸ್ ಗಿಫ್ಟ್ ಅನ್ನು ತೋರಿಸುತ್ತಲೇ ನಟಿ ರಚಿತಾರಾಮ್ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಸಂತೋಷದಿಂದಲೇ ಗಿಫ್ಟ್ ಸ್ವೀಕರಿಸಿ ಕೈ ಕುಲುಕಿದ್ದ ಕಾಣಿಸುತ್ತದೆ. ಈ ಮೂಲಕ ಸಿನಿರಂಗದವರ ಜೊತೆಗೆ ಆರೋಪಿಗೆ ನಂಟಿರುವುದು ಪೊಲೀಸರಿಗೆ ಖಚಿತವಾಗಿದೆ. ಆ ಆಯಾಮದಲ್ಲೂ ಬಿಕ್ಲು ಶಿವನ ಹತ್ಯೆ ಪ್ರಕರಣ ತನಿಖೆ ಮುಂದುವರಿಸಿದ್ದಾರೆ.
ನಟಿ ವಿಚಾರಣೆ ಸಾಧ್ಯತೆ, ಎದುರಾಯ್ತಾ ಸಂಕಷ್ಟ?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬೈರತಿ ಬಸವರಾಜ ಅವರು ಸೇರಿ ಐವರ ಮೇಲೆ FIR ಹಾಕಲಾಗಿತ್ತು. ಬೈರತಿ ಬಸವರಾಜ ಅವರನ್ನು ವಿಚಾರಣೆ ನಡೆಸಿದ್ದರು. ಮುಂದೆ ಕರೆದಾಗ ಬರುವಂತೆ ಮತ್ತೆ ಹೇಳಿ ಕಳುಹಿಸಿದ್ದಾರೆ. ಇದೀಗ ಸಿನಿಮಾ ನಟ-ನಟಿಯರೊಂದಿಗೆ ನಂಟು ಗೊತ್ತಾಗುತ್ತಿದ್ದಂತೆ, ಮುಂದಿನ ದಿನಗಳಲ್ಲಿ ನಟಿ ರಚಿತಾರಾಮ್ ಅವರನ್ನು ಕರೆಸಿ ವಿಚಾರಣೆ ನಡೆಸಿದರೂ ಅಚ್ಚರಿಪಡಬೇಕಿಲ್ಲ. ಏಕೆಂದರೆ ಅಂದು ಶೂಟಿಂಗ್ ವೇಳೆ ಆರೋಪಿ ಸಿಕ್ಕಿದ್ದು ಹೇಗೆ? ಗಿಫ್ಟ್ ಪಡೆದಿದ್ದು ಏಕೆ? ಕಾರಣವೇನು?, ಇಬ್ಬರ ಮಧ್ಯದ ಮಾತುಗಳ ಕುರಿತು ಪೊಲೀಸರು ಪ್ರಶ್ನಿಸಬಹುದು. ಇದರಿಂದ ನಟಿ ರಚಿತಾರಾಮ್ಗೂ ಸಂಕಷ್ಟ ಎದುರಾಗುತ್ತದೆ ಎಂದು ಹೇಳಲಾಗುತ್ತಿದೆ.

ಹತ್ಯೆ ಪ್ರಕರಣದ ಹಿನ್ನೆಲೆ
ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಜುಲೈ 15ರಂದು ಹತ್ಯೆ ಮಾಡಲಾಗಿತ್ತು. ಕೆಲವರ ಮೇಲೆ ಎಫ್ಐಆರ್ ಹಾಕಿದ್ದರು. ಪ್ರಕರಣ ಸಂಬಂಧಿಸಿದಂತೆ ಎಒನ್ ಆರೋಪಿ ಜಗ್ಗ ಜೊತೆಗೆ ನವೀನ್, ಅನಿಲ್ ಮತ್ತು ಅರುಣ್ ಮೂವರು ಆರೋಪಿಗಳನ್ನು ಭಾರತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೀವ್ರ ವಿಚಾರಣೆ ಮುಂದುವರಿದಿದೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications