Shivarajkumar Health: ಶಿವರಾಜ್ಕುಮಾರ್ಗೆ ಕ್ಯಾನ್ಸರ್ ತಗುಲಿದ್ದು ದೇಹದ ಈ ಭಾಗಕ್ಕೆ: ವೈದ್ಯರು ಹೇಳಿದ್ದೇನು?
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಶಿವರಾಜ್ಕುಮಾರ್ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ನಿರಂತರವಾಗಿ ಪ್ರಚಾರ ಮಾಡಿದ್ದರು. ಇದೇ ಸಂದರ್ಭದಲ್ಲಿ ಶಿವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು.
ಈ ಸಂದರ್ಭದಲ್ಲಿ ಆರೋಗ್ಯ ತಾಪಸಣೆ ಒಳಗಾಗಿದ್ದರು. ಈ ವೇಳೆ ಮೂತ್ರಾಶಯದ ಕ್ಯಾನ್ಸರ್ ಇರುವ ಬಗ್ಗೆ ಆತಂಕಕ್ಕೆ ಒಳಗಾಗದೆ ಶಿವಣ್ಣ ಚಿಕಿತ್ಸೆಗೆ ಮುಂದಾಗಿದ್ದರು. ಸರ್ಜರಿಗೆ ಒಳಗಾಗುವ ನಿಟ್ಟಿನಲ್ಲಿ ಡಿಸೆಂಬರ್ 18ರಂದು ಪತ್ನಿ ಹಾಗೂ ಪುತ್ರಿ ಜೊತೆ ಶಿವಣ್ಣ ಅಮೆರಿಕಾಗೆ ತೆರಳಿದ್ದರು. ನಿನ್ನೆ( ಡಿಸೆಂಬರ್ 24) 6 ಗಂಟೆಗಳ ಕಾಲ ಶಿವಣ್ಣ ಅವರಿಗೆ ಆಪರೇಷನ್ ನಡೆಸಿದ್ದು, ಯಶಸ್ವಿಯಾಗಿ ಆಪರೇಷನ್ ನೆರವೇರಿದೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಮಿಯಾಮಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಶಸ್ತ್ರಚಿಕಿತ್ಸೆಯಲ್ಲಿ ಕ್ಯಾನ್ಸರ್ಗ್ರಸ್ತ ಭಾಗವನ್ನು ತೆಗೆದು ಹಾಕಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಸ್ಥಿರವಾಗಿ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ ನಟ ಶಿವರಾಜ್ ಕುಮಾರ್ ಕುಟುಂಬ ಮತ್ತು ಅಭಿಮಾನಿಗಳಿಗೆ ವೈದ್ಯರ ಭರವಸೆ ನೀಡಿದ್ದಾರೆ.
ಶಿವರಾಜ್ಕುಮಾರ್ ಅಮೆರಿಕದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಟ ಶಿವರಾಜ್ ಕುಮಾರ್ ಅವರ ಆರೋಗ್ಯದ ಕುರಿತು ವೈದ್ಯರು ಮಾಹಿತಿ ನೀಡಿದ್ದಾರೆ. ಶಿವರಾಜ್ಕುಮಾರ್ ಅವರು ಮೊದಲು ಕ್ಯಾನ್ಸರ್ ಇರುವ ವಿಚಾರವನ್ನು ರಿವೀಲ್ ಮಾಡಲಾಗಿರಲಿಲ್ಲ. ಅನಾರೋಗ್ಯ ಎಂದಷ್ಟೇ ಅವರು ಹೇಳಿದ್ದರು. ಅಮೆರಿಕಕ್ಕೆ ತೆರಳುವುದಕ್ಕೂ ಮೊದಲು ಅವರು ಈ ಬಗ್ಗೆ ಮಾಹಿತಿ ನೀಡಿದರು. ತಮಗೆ ಕ್ಯಾನ್ಸರ್ ಇರುವ ವಿಚಾರವನ್ನು ಅವರು ಒಪ್ಪಿಕೊಂಡರು. ಶಿವರಾಜ್ಕುಮಾರ್ ಅವರಿಗೆ ಮೂತ್ರಪಿಂಡದ ಕ್ಯಾನ್ಸರ್ ಇತ್ತು ಎಂಬುದು ನಂತರ ರಿವೀಲ್ ಆಗಿದೆ.
ನಟ ಶಿವಣ್ಣ ಅವರಿಗೆ ಕ್ಯಾನ್ಸರ್ ತಗುಲಿದ ಮೂತ್ರ ಪಿಂಡವನ್ನ ತೆಗೆದು ಹಾಕಲಾಗಿದೆ. ಶಸ್ತ್ರಚಿಕಿತ್ಸೆ ನಂತರ ಕರುಳನ್ನು ಬಳಸಿ ಕೃತಕ ಮೂತ್ರ ಪಿಂಡವನ್ನ ಅಳವಡಿಸಲಾಗಿದೆ. ಶಿವರಾಜ್ಕುಮಾರ್ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನೂ ಶಿವಣ್ಣ ಅವರ ಆರೋಗ್ಯದ ಕುರಿತು ಗೀತಾ ಅವರು ಮಾಹಿತಿ ಹಂಚಿಕೊಂಡಿದ್ದು, ಅಭಿಮಾನಿಗಳು ಹೇಗೆ ದೇವರೋ ಹಾಗೆ ಡಾಕ್ಟರ್ ಕೂಡ ದೇವರ ರೀತಿ ಬಂದಿದ್ದಾರೆ. ಸದ್ಯ ಶಿವರಾಜ್ಕುಮಾರ್ ಐಸಿಯುನಲ್ಲಿದ್ದಾರೆ. ಎಲ್ಲವೂ ಯಶಸ್ವಿಯಾಗಿದೆ. ಸದ್ಯದಲ್ಲಿಯೇ ಶಿವರಾಜ್ಕುಮಾರ್ ನಿಮ್ಮ ಬಳಿ ಮಾತನಾಡುತ್ತಾರೆ ಎಂದು ಗೀತಾ ಅವರು ಮಾಹಿತಿ ನೀಡಿದ್ದಾರೆ.
ಪ್ರೆಸ್ನೋಟ್ನಲ್ಲಿ ಏನಿದೆ?
ನಟ ಶಿವರಾಜ್ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಈ ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ್ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದೆ. ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಡಾ. ಶಿವರಾಜ್ಕುಮಾರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಎಂದು ಪ್ರೆಸ್ನೋಟ್ನಲ್ಲಿ ತಿಳಿಸಲಾಗಿದೆ
ಶಿವರಾಜ್ಕುಮಾರ್ ಪ್ರಸ್ತುತ ತೀವ್ರ ನಿರೀಕ್ಷಣೆಯಲ್ಲಿದ್ದಾರೆ. ಪರಿಣಿತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ತಂಡದಿಂದ ಅತ್ಯುತ್ತಮ ಆರೈಕೆ ಪಡೆಯುತ್ತಿದ್ದಾರೆ. ಶಿವರಾಜ್ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳು ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ತೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ. ಶಿವರಾಜ್ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ. ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು ಎಂದು ಪ್ರೆಸ್ನೋಟ್ನಲ್ಲಿ ತಿಳಿಸಲಾಗಿದೆ.












Click it and Unblock the Notifications