ಲೀಲಾವತಿ 'ಅಮ್ಮ' ನನ್ನ ಧ್ವನಿ ಗುರುತಿಸಿದರು: ಮಹಾನಟಿಯ ಸ್ಥಿತಿ ಕಂಡು ಮರುಗಿದ ಶಿವಣ್ಣ
600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿ ಕನ್ನಡಿಗರ ಮನೆ ಮಾತಾಗಿರುವ ಖ್ಯಾತ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದಾಗಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ವಿಚಾರಿಸಲು ರಾಜಕೀಯ ಗಣ್ಯ ವ್ಯಕ್ತಿಗಳು ಸೇರಿದಂತೆ ಅನೇಕ ಸಿನಿ ತಾರೆಯರು ಭೇಟಿ ನೀಡುತ್ತಿದ್ದಾರೆ. ಜೊತೆಗೆ ನಟ ಶಿವರಾಜ್ ಕುಮಾರ್ ಕೂಡ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.
ಹೌದು... ಅನಾರೋಗ್ಯದ ಕಾರಣದಿಂದಾಗಿ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ಅವರ ಮನೆಗೆ ಶಿವರಾಜ್ಕುಮಾರ್ ಹಾಗೂ ಅವರ ಪತ್ನಿ ಗೀತಾ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ. ಇಂದು ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಮನೆಗೆ ಭೇಟಿ ನೀಡಿದ ಶಿವರಾಜ್ಕುಮಾರ್ ಅವರು, ಲೀಲಾವತಿ ಅವರ ಪುತ್ರ, ನಟ ವಿನೋದ್ ರಾಜ್ ಅವರಿಗೆ ಧೈರ್ಯ ತುಂಬಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನನಗೂ, ವಿನೋದ್ ಅವರಿಗೂ ಇರುವ ಆತ್ಮೀಯತೆ ನಮಗಿಬ್ಬರಿಗಷ್ಟೇ ಗೊತ್ತು. ಮಗ ಚೆನ್ನಾಗಿ ಇರಬೇಕು ಎನ್ನುವುದು ಲೀಲಾವತಿ ಅವರ ಆಸೆ. ಹೆತ್ತವರಿಗೆ ಮಕ್ಕಳು ಚೆನ್ನಾಗಿ ಇರಬೇಕು ಎನ್ನುವ ಬಯಕೆ. ವಿನೋದ್ ಅವರು ಧೈರ್ಯವಾಗಿರಬೇಕು. ಲೀಲಾವತಿ ಅಮ್ಮ ನನ್ನ ಧ್ವನಿ ಗುರುತಿಸಿದರು. ಅವರ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ಒಂದೆಡೆ ಅವರ ಸ್ಥಿತಿ ನೋಡಿ ಬೇಸರವಾಗುತ್ತದೆ. ಆದರೆ ದೇವರ ಆಶೀರ್ವಾದವಿದೆ. ಜನರ ಪ್ರೀತಿ ಇದೆ. ಹೀಗಾಗಿ ಬೇಗ ಗುಣಮುಖರಾಗುತ್ತಾರೆ. ಲೀಲಾವತಿ ಅವರ ಹೆಸರಿನಲ್ಲಿ ಪಶು ಆಸ್ಪತ್ರೆ ಆರಂಭವಾಗಿರುವುದು ಸಂತೋಷದ ವಿಚಾರ' ಎಂದರು.
ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರನ್ನು ವಿನೋದ್ ರಾಜ್ ಆರೈಕೆ ಮಾಡುತ್ತಿದ್ದಾರೆ. ಲೀಲಾವತಿ ಅವರಿಗೆ ಸದ್ಯ ಟ್ಯೂಬ್ನಲ್ಲಿ ಆಹಾರ ನೀಡಲಾಗುತ್ತಿದೆ. ಮೊನ್ನೆಯಷ್ಟೇ ನಟ ಅರ್ಜುನ್ ಸರ್ಜಾ, ದರ್ಶನ್ ಅವರು ಲೀಲಾವತಿ ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದ್ದರು. ವಯಸ್ಸಿನ ಕಾರಣದಿಂದಾಗಿ ಅವರು ಹಾಸಿಗೆ ಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಅವರ ಆರೋಗ್ಯ ವಿಚಾರಿಸಿದ್ದಾರೆ. 87 ವರ್ಷದ ಹಿರಿಯ ನಟಿ ಲೀಲಾವತಿಯವರು ಆರೋಗ್ಯ ಸಮಸ್ಯೆಯಿಂದಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಲೀಲಾವತಿ ಅವರು ಒಂದು ಕಾಲದಲ್ಲಿ ಸ್ಟಾರಿ ನಟಿ. ಕನ್ನಡ ಮಾತ್ರವಲ್ಲದೆ ಅವರು ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಇವರಿಗೆ ಕರ್ನಾಟಕ ಸರಕಾರವು ಡಾ. ರಾಜಕುಮಾರ್ ಪ್ರಶಸ್ತಿಯನ್ನು ನೀಡಿದೆ. ಇವರಿಗೆ ತುಮಕೂರು ವಿಶ್ವವಿದ್ಯಾಲಯ ಗೌರ ಡಾಕ್ಟರೇಟ್ ಪದವಿಯನ್ನೂ ನೀಡಿದೆ.
ಲೀಲಾವತಿ ಅವರ ಸಿನಿಮಾ ಪ್ರಯಾಣ 1950 ಆಸುಪಾಸಿನಲ್ಲಿ ಆರಂಭವಾಯಿತು. ಭಕ್ತ ಪ್ರಹ್ಲಾದ, ಮಾಂಗಲ್ಯ ಯೋಗ, ರಾಜ ಮಲಯ ಸಿಂಹ, ಅಬ್ಬಾ ಆ ಹುಡುಗಿ, ಧರ್ಮ ವಿಜಯ, ದಶವತಾರ, ರಣಧೀರ ಕಂಠೀರವ, ರಾಣಿ ಹೊನ್ನಮ್ಮ, ಕೈವಾರ ಮಹಾತ್ಮೆ, ಕಣ್ತೆರೆದು ನೋಡು, ಕಿತ್ತೂರು ಚೆನ್ನಮ್ಮ, ಗಾಳಿ ಗೋಪುರ, ಕರುಣೆಯೇ ಕುಟುಂಬದ ಕಣ್ಣು, ಭೂದಾನ ಮುಂದಾತ ಚಿತ್ರಗಳಲ್ಲಿ ನಟಿಸಿದ್ದಾರೆ. ಇನ್ನೂ ಅವರು ಪಟ್ಟಿನಥರ್ (ತಮಿಳು), ಮರ್ಮಯೋಗಿ (ತೆಲುಗು) ಸಿನಿಮಾಗಳಲ್ಲೂ ನಟಿಸಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ವಿಶೇಷ: ಬೆಟ್ಟದ ಹೂವಿನಿಂದ ಗಂಧದ ಗುಡಿಯವರೆಗೆ, ಅಪ್ಪು ಎಂಬ ಅಳಿಸಲಾಗದ ನಗು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications