ಕಮಲ್ ಹಾಸನ್ ಅಪ್ಪುಗೆ - ಮೂರು ದಿನ ಸ್ನಾನ ಮಾಡಲಿಲ್ಲ: ಶಿವರಾಜ್ ಕುಮಾರ್!
ಬಹುಭಾಷಾ ನಟ ಕಮಲ್ ಹಾಸನ್ ಅವರ ಬಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಹೇಳಿರುವ ಮಾತುಗಳು ಭಾರೀ ಚರ್ಚೆಗೆ ಕಾರಣವಾಗಿದೆ. ಶಿವರಾಜ್ ಕುಮಾರ್ ಅವರು ಈ ರೀತಿ ಹೇಳಿಕೆ ನೀಡಬಾರದಿತ್ತು ಅಂತ ಕನ್ನಡಿಗರು ಹೇಳುತ್ತಿದ್ದಾರೆ. ಈಗಾಗಲೇ ಕಮಲ್ ಹಾಸನ್ ಅವರು ತಮಿಳಿನಿಂದಲೇ ಕನ್ನಡ ಹುಟ್ಟಿದೆ ಅಂತ ಹೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಇರುವಾಗಲೇ ಶಿವರಾಜ್ ಕುಮಾರ್ ಅವರು ಕಮಲ್ ಹಾಸನ್ ಅವರ ಅಪ್ಪುಗೆ ಹೇಳಿಕೆ ಸಹ ಭಾರೀ ಚರ್ಚೆಗೆ ಕಾರಣವಾಗಿದೆ. ಹಲವು ಕನ್ನಡಿಗರು ಈ ಹೇಳಿಕೆಯನ್ನು ವಿರೋಧ ಮಾಡಿದರೆ, ಇನ್ನೂ ಕೆಲವರು ಇದು ಶಿವರಾಜ್ಕುಮಾರ್ ಅವರು ಅಭಿಮಾನದಿಂದ ಹೇಳಿರುವ ಮಾತು ಇದಕ್ಕೆ ವಿವಾದ ಬೇಡ ಅಂತಿದ್ದಾರೆ. ಇಷ್ಟಕ್ಕೂ ಶಿವಣ್ಣ ಹೇಳಿದ್ದೇನು, ಯಾಕಿ ಚರ್ಚೆ ನೋಡೋಣ.
ನಟ ಶಿವರಾಜ್ ಕುಮಾರ್ ಅವರು ಕನ್ನಡದೊಂದಿಗೆ ಇದೀಗ ತಮಿಳು ಭಾಷೆಯಲ್ಲೂ ಮಿಂಚುತ್ತಿದ್ದಾರೆ. ತಮಿಳು ಭಾಷೆಯಲ್ಲಿ ನಟ ರಜನೀಕಾಂತ್ ಅವರ ಸಿನಿಮಾ ಜೈಲರ್ನಲ್ಲಿ ನಟ ಶಿವರಾಜ್ ಕುಮಾರ್ ಸಣ್ಣ ಪಾತ್ರದಲ್ಲಿ ಮಿಂಚಿದ್ದಾರೆ. ಇದೀಗ ಅವರು ಜೈಲರ್ ಪಾರ್ಟ್ 2 ನಲ್ಲೂ ನಟಿಸಿದ್ದು, ಇದೀಗ ಈ ಸಿನಿಮಾ ಸಹ ತೆರೆಗೆ ಬರಲು ಪೂರ್ವ ಸಿದ್ಧತೆ ನಡೆದಿದೆ. ಇದರ ನಡುವೆ ನಟ ಕಮಲ್ ಹಾಸನ್ ಅವರ ಬಹು ನಿರೀಕ್ಷಿತ ಸಿನಿಮಾ ಥಗ್ ಲೈಫ್ ಆಡಿಯೋ ಲಾಂಚ್ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿವರಾಜ್ ಕುಮಾರ್ ಅವರು ಉತ್ಪ್ರೇಕ್ಷೆಯಿಂದ ಮಾತನಾಡಿದ್ದಾರೆ ಎಂದು ಕನ್ನಡಿಗರು ಹೇಳುತ್ತಿದ್ದಾರೆ.

ಮೂರು ದಿನ ನಾನು ಸ್ನಾನ ಮಾಡಿರಲಿಲ್ಲ: ನಟ ಶಿವರಾಜ್ ಕುಮಾರ್ ಅವರು ಕಮಲ್ ಹಾಸನ್ ಅವರನ್ನು ಮೊದಲ ಬಾರಿ ಭೇಟಿಯಾಗಿದ್ದನ್ನು ಹಾಗೂ ಅವರೊಂದಿಗಿನ ಮೊದಲ ಭೇಟಿಯ ಅನುಭವವನ್ನು ಹಂಚಿಕೊಂಡಿದ್ದಾರೆ. ಆದರೆ, ಇದೇ ಸಂದರ್ಭದಲ್ಲಿ ಮೂರು ದಿನ ಸ್ನಾನ ಮಾಡಿಲ್ಲ ಅಂತ ಹೇಳಿದ್ದು ಚರ್ಚೆಗೆ ಕಾರಣವಾಗಿದೆ.
ಶಿವಣ್ಣ ಕಾರ್ಯಕ್ರಮದಲ್ಲಿ ಮಾತನಾಡಿ, ಅದು ನಮ್ಮ ಬಾಲ್ಯದ ದಿನಗಳು ಮೊದಲ ಬಾರಿ ನಟ ಕಮಲ್ ಹಾಸನ್ ಅವರು ನಮ್ಮ ಮನೆಗೆ ಭೇಟಿ ನೀಡಿದ್ದರು. ನಮ್ಮ ತಂದೆ ಡಾ.ರಾಜ್ ಕುಮಾರ್ ಅವರೊಂದಿಗೆ ಮಾತನಾಡಿದ್ದರು. ಆಗ ನಮ್ಮ ತಂದೆ ನನ್ನನ್ನು ಕಮಲ್ ಅವರಿಗೆ ಪರಿಚಯಿಸಿದ್ದರು. ಕಮಲ್ ಅವರು ಬಂದು ಶೇಕ್ ಹ್ಯಾಂಡ್ ಕೊಟ್ಟರು, ನಾನು ಒಂದು ಸಲ ಹಗ್ (ಅಪ್ಪುಗೆ) ಸಿಗಬಹುದಾ ಅಂತ ಕೇಳಿದೆ. ಕಮಲ್ ಅವರು ಅಪ್ಪುಗೆ ನೀಡಿದರು. ಇದಾದ ಮೇಲೆ ನಾನು ಮೂರು ದಿನಗಳ ಕಾಲ ಸ್ನಾನ ಮಾಡಿರಲಿಲ್ಲ ಅಂತ ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ.
ಕಮಲ್ ಹಾಸನ್ ಸರ್ ಗೆ ನಾನು ದೊಡ್ಡ ಅಭಿಮಾನಿ. ಅವರು ಹಗ್ ಮಾಡಿದ್ರೆ ಮೂರು ದಿನ ಸ್ನಾನ ಮಾಡೋದಿಲ್ಲ. ಅವರ ದೇಹದ ಸ್ಮೆಲ್ ಹಾಗೆ ಇರಬೇಕು ಅಂತ!! ಮೂರು ದಿನ ಅವರ ದೇಹದ ಸ್ಮೆಲ್ ಜೊತೆಗೆ ಜೀವನ ಮಾಡ್ತಿನಿ.
— ಗುರುದೇವ್ ನಾರಾಯಣ್ 💛❤️ GURUDEV NARAYAN🌿 (@Gurudevnk16) May 26, 2025
- ಶಿವರಾಜ್ ಕುಮಾರ್ , ಹಿರಿಯ ಕನ್ನಡ ಸಿನಿ ನಟ ಈಗ ಹೊಸ ತಮಿಳು ನಟ
✍️ಆಯುಷ್
(ಶಿವರಾಜ್ ಕುಮಾರ್ ತಮಿಳಿನಲ್ಲಿ ಮಾತಾಡಿದ್ದನ್ನು ಕನ್ನಡಕ್ಕೆ… pic.twitter.com/RL4j6BPWiI
ಮುಂದುವರಿದು ಅವರ ದೇಹದ ಪರಿಮಳವನ್ನು ನಾನು ಎಂಜಾಯ್ ಮಾಡಿದ್ದೆ. ನಾನು ಅವರ ಅಷ್ಟು ದೊಡ್ಡ ಅಭಿಮಾನಿ ಅಂತ ಶಿವರಾಜ್ ಕುಮಾರ್ ಅವರು ಹೇಳಿಕೊಂಡಿದ್ದಾರೆ.
ನೆಟ್ಟಿಗರು ಹೇಳಿದ್ದೇನು ?
ಶಿವರಾಜ್ ಕುಮಾರ್ ಅವರು ತಮಿಳುನಾಡಿನಲ್ಲಿ ಹೋಗಿ ಈ ರೀತಿ ಹೇಳಬಾರದಿತ್ತು. ಕನ್ನಡಿಗರು ನಾವು ಇವರಿಗೆ ಏನು ಕಡಿಮೆ ಮಾಡಿದ್ದೇವೆ ಎಂದು ಕೆಲವರು ಪ್ರಶ್ನೆ ಮಾಡಿದರೆ, ಇನ್ನೂ ಕೆಲವರು ಇದು ಪೂರ್ತಿ ಅವರ ವೈಯಕ್ತಿಕ ವಿಚಾರ ಶಿವರಾಜ್ ಕುಮಾರ್ ಅವರು ಕಮಲ್ ಹಾಸನ್ ಅವರ ಮೇಲಿನ ಅಭಿಮಾನದಿಂದ ಈ ರೀತಿ ಮಾತನಾಡಿದ್ದಾರೆ. ಅದರಲ್ಲಿ ತಪ್ಪೇನಿದೆ ಅಂತಲೂ ಪ್ರಶ್ನೆ ಮಾಡಿದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications