ಪ್ರಶಾಂತ್ ನೀಲ್ ಸಿನಿಮಾಗೆ ಶಾಕ್; ನಟ ಜೂನಿಯರ್ ಎನ್ಟಿಆರ್ಗೆ ಗಂಭೀರ ಗಾಯ, ಆಗಿದ್ದೇನು?
ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ಟಾಲಿವುಡ್ ನಟ ಜ್ಯೂನಿಯರ್ ಎನ್ಟಿಆರ್ (ತಾರಕ್) ಅವರಿಗೆ ಚೊಚ್ಚಲ ಸಿನಿಮಾ ನಿರ್ದೇಶಿಸಲು ಸಜ್ಜಾಗಿದ್ದಾರೆ. ಆದರೆ ಇದೇ ಹೊತ್ತಿನಲ್ಲಿ ದೊಡ್ಡ ಪ್ರಮಾದವೊಂದು ನಡೆದಿದೆ. ಈ ಸಿನಿಮಾಗೂ ಮುನ್ನವೇ ನಟ ತಾರಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಿಂದ ನಟ ಯಾವುದೇ ಶೂಟಿಂಗ್ನಲ್ಲಿ ಪಾಲ್ಗೊಳ್ಳಲು ಆಗದ ಸ್ಥಿತಿ ತಲುಪಿದ್ದಾರೆ. ಹೀಗಾಗಿ ಪ್ರಶಾಂತ್ ನೀಲ್ ಅವರ ಬಹುನಿರೀಕ್ಷಿತ ಸಿನಿಮಾಗೆ ದೊಡ್ಡ ಆಘಾತ ಎದುರಾಗಿದೆ. ನಟ ತಾರಕ್ ಅವರಿಗೆ ಅಸಲಿಗೆ ಏನಾಯ್ತು ಎಂಬ ವಿವರ ಇಲ್ಲಿದೆ.
ನಟ ಜ್ಯೂನಿಯರ್ ಎನ್ಟಿಆರ್ ಇತ್ತೀಚೆಗಷ್ಟೇ ವಾರ್-2 ಸಿನಿಮಾ ಮುಗಿಸಿ, ಪ್ರಶಾಂತ್ ನೀಲ್ ಅವರ ಪ್ಯಾನ್ ಇಂಡಿಯಾ ಸಿನಿಮಾಗೆ ರೆಡಿಯಾಗಿದ್ದರು. ಇನ್ನೇನು ಇದರ ಶೂಟಿಂಗ್ ಕೂಡ ಶುರುವಾಗಬೇಕಿತ್ತು. ಇದೇ ಸಮಯದಲ್ಲಿ ನಟ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಜಾಹೀರಾತಿನ ಚಿತ್ರೀಕರಣದ ಸಮಯದಲ್ಲಿ ನಟ ಗಾಯ ಗಾಯಗೊಂಡಿರುವುದು ಖಚಿತವಾಗಿದೆ. ಈ ಬಗ್ಗೆ ನಟನ ತಂಡ ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತ ಹೇಳಿಕೆಯನ್ನು ಸಹ ಬಿಡುಗಡೆ ಮಾಡಿದೆ.

ನಟನ ಗಾಯಗೊಂಡಿದ್ದೇಕೆ?
"ನಟ ಜ್ಯೂನಿಯರ್ ಎನ್ಟಿಆರ್ ಅವರು ಇಂದು ಜಾಹೀರಾತಿನ ಚಿತ್ರೀಕರಣದ ಸಮಯದಲ್ಲಿ ಸಣ್ಣಪುಟ್ಟ ಗಾಯ ಮಾಡಿಕೊಂಡರು. ಹೀಗಾಗಿ ವೈದ್ಯಕೀಯ ಸಲಹೆಯ ಮೇರೆಗೆ ಅವರು ಸಂಪೂರ್ಣ ಗುಣಮುಖರಾಗಲು ಮುಂದಿನ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಹಾಗೂ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ನಾವು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇವೆ. ಅಭಿಮಾನಿಗಳು, ಮಾಧ್ಯಮಗಳು ಮತ್ತು ಸಾರ್ವಜನಿಕರು ಯಾವುದೇ ಊಹಾಪೋಹಗಳಿಂದ ದೂರವಿರಬೇಕೆಂದು ನಾವು ಪ್ರಾಮಾಣಿಕವಾಗಿ ವಿನಂತಿಸುತ್ತೇವೆ" ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸದ್ಯ ಗಂಭೀರ ಗಾಯದಿಂದಾಗಿ ನಟ ತಾರಕ್ ಅವರು ಕೆಲಕಾಲ ವಿಶ್ರಾಂತಿಯಲ್ಲೇ ಇರಲಿದ್ದು, ಅಲ್ಲಿಯವರೆಗೆ ಯಾವುದೇ ಶೂಟಿಂಗ್ನಲ್ಲಿ ಪಾಲ್ಗೊಳ್ಳುವುದಿಲ್ಲ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದರು. ಹೇಳಿಕೆ ಬಿಡುಗಡೆ ಮಾಡಿದರೂ ನಟನಿಗೆ ಏನಾಯ್ತು? ಎಂದು ಹೆದರಿದ್ದಾರೆ. ಆದರೆ ಅವರ ತಂಡದಿಂದಲೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಕಾರಣ ತುಸು ನಿರಾಳರಾಗಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಮುಂದಿನ ಕೆಲವು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಬಾಲಿವುಡ್ನ್ 'ವಾರ್ 2' ಸಿನಿಮಾದಲ್ಲಿ ತಾರಕ್ ನಟಿಸಿದ್ದರಿಂದ ಭಾರೀ ನಿರೀಕ್ಷೆ ಇತ್ತು. ಆದರೆ ಈ ಸಿನಿಮಾ ಉತ್ತಮ ಪ್ರದರ್ಶನ ಕಾಣಲಿಲ್ಲ. ವಾರ್ 2 ಚಿತ್ರದಲ್ಲಿ ಹೃತಿಕ್ ರೋಷನ್ ಜತೆ ನಟಿಸಿದರೂ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಯಶಸ್ಸು ಪಡೆಯಲಿಲ್ಲ. ಹೀಗಾಗಿ ಪ್ರಶಾಂತ್ ನೀಲ್ ನಿರ್ದೇಶನದ ಮುಂದಿನ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇತ್ತು. ಈಗ ದಿಢೀರನೆ ಗಂಭೀರವಾಗಿ ಗಾಯಗೊಂಡಿರುವ ಹಿನ್ನೆಲೆ, ಅವರು ಗುಣಮುಖರಾಗುವವರೆಗೆ ಈ ಸಿನಿಮಾ ಶೂಟಿಂಗ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ನೆಲ್ಸನ್ ದಿಲೀಪ್ ಕುಮಾರ್ ಅವರ ಹೊಸ ಚಿತ್ರಕ್ಕೂ ತಾರಕ್ ಸಹಿ ಮಾಡಿದ್ದಾರೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications