ಗಾಯಕಿಯೊಬ್ಬರ ಅಶ್ಲೀಲ ವಿಡಿಯೋ ಭಾರೀ ವೈರಲ್
ಕೆಲ ನಟ-ನಟಿಯರು ವಿವಾದಾತ್ಮಕ ಹೇಳಿಕೆ ನೀಡಿ ಜನರ ಕೆಂಗಣ್ಣಿಗೆ ಗುರಿಯಾಗಿರುವ ಉದಾಹರಣೆಗಳಿವೆ. ಈ ನಡುವೆಯೇ ಗಾಯಕಿಯೊಬ್ಬರು ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾದ್ರೆ ಆ ಗಾಯಕಿ ಯಾರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೆಲ ನಟ-ನಟಿಯರು, ಗಾಯಕ, ಗಾಯಕಿಯರು ವಿವಾದದ ಕಿಡಿ ಹೊತ್ತಿಸಿ ಬಳಿಕ ನೆಪಮಾತ್ರಕ್ಕೆ ಕ್ಷಮೆಯಾಚನೆ ಮಾಡಿರುವ ಉದಾಹರಣೆಗಳಿವೆ. ಇಂತಹ ಪ್ರಕರಣಗಳಲ್ಲಿ ಪರಭಾಷಿಕರ ಪಾಲು ಹೆಚ್ಚಿದೆ. ಇದೀಗ ರ್ಯಾಪರ್ ಟೋಮಿ ಜೆನೆಸಿಸ್ ಯಾಸ್ಮಿನ್ ಮೋಹನರಾಜ್ ವಿವಾದಕ್ಕೆ ಒಳಗಾಗಿದ್ದಾರೆ. ಈ ವಿಡಿಯೋವನ್ನು tommygenesis ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ರ್ಯಾಪರ್ ಜೆನೆಸಿಸ್ ಯಾಸ್ಮಿನ್ ಮೋಹನರಾಜ್ ಅವರ ಮ್ಯೂಸಿಕ್ ಅಶ್ಲೀಲ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ಅವರು ನೀಲಿ ಬಣ್ಣದ ದೇಹ, ಚಿನ್ನದ ಆಭರಣ ಮತ್ತು ಕೆಂಪು ಬಿಂದಿ ಧರಿಸಿ ಹಿಂದೂ ದೇವತೆಯಂತೆ ವೇಷ ಧರಿಸಿದ್ದು, ಕ್ರಿಶ್ಚಿಯನ್ ಶಿಲುಬೆಯನ್ನು ಬಳಕೆ ಮಾಡಿದ್ದಾರೆ. ಅಲ್ಲದೆ, ಇದರಲ್ಲಿ ಅವಳು ಶಿಲುಬೆಯನ್ನು ನೆಕ್ಕಿ ಅದನ್ನು ತನ್ನ ಹಿಂಬದಿಯ ಬಳಿ ಹಿಡಿದುಕೊಂಡು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾಳೆ. ಈ ದೃಶ್ಯಗಳು ಹಿಂದೂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಜನರನ ಆಕ್ರೋಶಕ್ಕೆ ಕಾರಣವಾಗಿವೆ.
ಟ್ರೂ ಬ್ಲೂ ಮ್ಯೂಸಿಕ್ ವೀಡಿಯೊದಲ್ಲಿನ ವಿವಾದಾತ್ಮಕ ದೃಶ್ಯಗಳಿಗಾಗಿ ಸಾಮಾಜಿಕ ಮಾಧ್ಯಮ ಬಳಕೆದಾರರು ರ್ಯಾಪರ್ ಟಾಮಿ ಜೆನೆಸಿಸ್ ಅವರ ವಿರುದ್ಧ ಕೆಂಡಕಾರುತ್ತಿದ್ದಾರೆ. ಅವರು ಉದ್ದೇಶಪೂರ್ವಕವಾಗಿ ಧಾರ್ಮಿಕ ಸಮುದಾಯಗಳನ್ನು ಪ್ರಚೋದನೆ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಯಾರು ಗುರು ಇವಳಿಗೆ ಗಾಯಕಿ ಪಟ್ಟ ಕೊಟ್ಟಿದ್ದು? ಇವಳಿಗೆ ಎರಡೂ ಸಮುದಾಯಗಳಿಗೂ ಅವಮಾನ ಮಾಡಲೆಂಬ ಉದ್ದೇಶದಿಂಲೇ ಈ ರೀತಿ ಮಾಡಿದ್ದಾಳೆ. ಇವಳ ವಿರುದ್ಧ ಮೊದಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಟ್ಟ ಕೆಟ್ಟದಾಗಿಯೂ ಕಾಮೆಂಟ್ ಬಾಕ್ಸ್ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಟಾಮಿ ಜೆನೆಸಿಸ್ ಎಂದೂ ಕರೆಯಲ್ಪಡುವ ಜೆನೆಸಿಸ್ ಯಾಸ್ಮಿನ್ ಮೋಹನರಾಜ್, ಕೆನಡಾದ ವ್ಯಾಂಕೋವರ್ನಲ್ಲಿ ಜನಿಸಿದರು. ಇವರು ಭಾರತೀಯ ಮೂಲದವರಾಗಿದ್ದಾರೆ. ಅವರ ಸಂಗೀತವು ಹೆಚ್ಚಾಗಿ ಲಿಂಗ, ಗುರುತು ಮತ್ತು ಲೈಂಗಿಕತೆಗೆ ಸಂಬಂಧಿಸಿದ್ದು ಆಗಿರುತ್ತವೆ. ಅದೇನೆ ಇರಲಿ ಈ ರೀತಿ ಧರ್ಮಗಳನ್ನು ಇಟ್ಟುಕೊಂಡು ಬೆಂಕಿ ಹಚ್ಚುವ ಕೆಲಸವನ್ನು ಮಾಡಬಾರದಿತ್ತು ಅಂತಲೂ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.
-
Viral Video: ಕಡಿಮೆ ಹಣದಲ್ಲಿ ಬದುಕೋದು ಹೇಗೆ ? ಬೆಂಗಳೂರು ಇಂಟರ್ನ್ ಹೇಳಿದ ಟ್ರಿಕ್ಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications