Sonal Monteiro: ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್ & ಹೀರೋಯಿನ್ ಸೋನಾಲ್ ಲವ್ ಸ್ಟೋರಿ!
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಕೊಲೆ, ಹಿಂಸೆ, ಸಾವುಗಳ ನೋವಿನ ಸಮಯದಲ್ಲೇ ಈಗ ಖುಷಿ ಖುಷಿ ಸುದ್ದಿ ಒಂದು ಹಲ್ಚಲ್ ಎಬ್ಬಿಸಿದೆ. 'ಕಾಟೇರ' ನಿರ್ದೇಶಕ ತರುಣ್ ಸುಧೀರ್ & ಹೀರೋಯಿನ್ ಸೋನಾಲ್ ಮೊಂಟೇರಿಯೋ ಮದುವೆ ಡೇಟ್ ಫಿಕ್ಸ್ ಆಗಿ ಎಲ್ಲೆಲ್ಲೂ ಈ ಬಗ್ಗೆ ಚರ್ಚೆ ಶುರುವಾಗಿದೆ. ಹಾಗಿದ್ರೆ ಸೋನಾಲ್ ಅವರನ್ನ ಲವ್ ಮಾಡಿದ್ದು ಹೇಗೆ ತರುಣ್ ಸುಧೀರ್? ಸಂಪೂರ್ಣ ಮಾಹಿತಿ ತಿಳಿಯೋಣ ಮುಂದೆ ಓದಿ.
ಸೋನಾಲ್ ಮೊಂಟೇರಿಯೋ ಅವರು ಕನ್ನಡ ಸಿನಿಮಾ ಅಭಿಮಾನಿಗಳು ಕಂಡ ಅತ್ಯದ್ಭುತ ನಟಿ. ಕೆಲವೇ ಸಿನಿಮಾಗಳಲ್ಲಿ ನಟನೆ ಮಾಡಿದ್ದರೂ ಕೋಟ್ಯಂತರ ಅಭಿಮಾನಿಗಳನ್ನು ನಟಿ ಸೋನಾಲ್ ಮೊಂಟೇರಿಯೋ ಸಂಪಾದಿಸಿದ್ದಾರೆ. ತರುಣ್ ನಿರ್ದೇಶಿಸಿದ್ದ 'ರಾಬರ್ಟ್' ಸಿನಿಮಾ ಸೋನಾಲ್ ಮೊಂಟೇರಿಯೋ ಅವರ ಸಿನಿಮಾ ಕರಿಯರ್ಗೆ ದೊಡ್ಡ ತಿರುವು ನೀಡಿತ್ತು. ಹೀಗೆ 2021ರಲ್ಲಿ ರಿಲೀಸ್ ಆಗಿದ್ದ 'ರಾಬರ್ಟ್' ಸಿನಿಮಾ ಬಳಿಕ ಸೋನಾಲ್ ಮೊಂಟೇರಿಯೋ ಅವರಿಗೆ ಹತ್ತಾರು ಸಿನಿಮಾ ಆಫರ್ ಹುಡುಕಿಕೊಂಡು ಬಂದವು. ರಾಬರ್ಟ್ ಸಿನಿಮಾದ ಅದ್ಭುತವಾದ ನಟನೆ ಸೋನಾಲ್ ಅವರಿಗೆ ದೊಡ್ಡ ಹೆಸರು ತಂದುಕೊಟ್ಟಿತ್ತು ಹಾಗಾದ್ರೆ ತರುಣ್ & ಸೋನಾಲ್ ಲವ್ ಸ್ಟೋರಿ ಶುರುವಾಗಿದ್ದು ಹೇಗೆ? ಮುಂದೆ ಓದಿ.

ತರುಣ್ & ಸೋನಾಲ್ ಲವ್ ಸ್ಟೋರಿ...
ದರ್ಶನ್ ತೂಗುದೀಪ್ & ವಿನೋದ್ ಪ್ರಭಾಕರ್ ಮುಖ್ಯ ಪಾತ್ರದಲ್ಲಿ ನಟನೆ ಮಾಡಿದ್ದ ಚಿತ್ರ 'ರಾಬರ್ಟ್' ಭಾರಿ ದೊಡ್ಡ ಸದ್ದು ಮಾಡಿತ್ತು. ನೂರಾರು ಕೋಟಿ ರೂಪಾಯಿ ಗಳಿಸಿತ್ತು ಈ 'ರಾಬರ್ಟ್' ಸಿನಿಮಾ. ಈ ಸಿನಿಮಾದಲ್ಲಿ ಸೋನಾಲ್ ಕೂಡ ಮುಖ್ಯ ಪಾತ್ರ ನಿರ್ವಹಿಸಿದ್ದರು. ಹೀಗೆ ನೋಡ ನೋಡುತ್ತಲೇ ಸೋನಾಲ್ ಮೊಂಟೇರಿಯೋ ಪ್ಯಾನ್ ಇಂಡಿಯಾ ಹೀರೋಯಿನ್ ಕೂಡ ಆದರು. ಹೀಗಿದ್ದಾಗಲೇ ಸೋನಾಲ್ & ತರುಣ್ ಲವ್ ಸ್ಟೋರಿ ಭಾರಿ ಸೌಂಡ್ ಮಾಡ್ತು. ರಾಬರ್ಟ್ ಶೂಟಿಂಗ್ ಸಮಯದಲ್ಲೇ ದರ್ಶನ್ ಅವರು ತರುಣ್ & ಸೋನಾಲ್ ಅವರ ಮದುವೆ ಬಗ್ಗೆ ತಮಾಷೆಗೆ ರೇಗಿಸುತ್ತಿದ್ದರಂತೆ.
ನಟ ದರ್ಶನ್ ತೂಗುದೀಪ್ ಅವರು ರೇಗಿಸುವಾಗ ಸೆಟ್ನಲ್ಲಿ ಎಲ್ಲರೂ ತಮಾಷೆ ಮಾಡ್ತಿದ್ರು. ತಮಾಷೆ ಮಾತು ಇಬ್ಬರ ಮನಸ್ಸಲ್ಲಿ ಪ್ರೀತಿ ಮೂಡಿಸಿತ್ತು. 'ರಾಬರ್ಟ್' ಸಿನಿಮಾ ಶೂಟಿಂಗ್ ಸಮಯದಲ್ಲೇ ಸೋನಾಲ್ & ತರುಣ್ ನಡುವೆ ಪ್ರೀತಿ ಶುರುವಾಗಿತ್ತು. 'ರಾಬರ್ಟ್' ಸಿನಿಮಾದ ಶೂಟಿಂಗ್ ಸಮಯದಲ್ಲೇ ಇಬ್ಬರು ಕೂಡ ಪ್ರೀತಿಯ ಬಲೆಗೆ ಬಿದ್ದಿದ್ದರು ಎನ್ನಲಾಗಿದೆ. ಆದರೆ, ಈ ವಿಚಾರ ಗುಟ್ಟಾಗಿ ಉಳಿದಿತ್ತು. ಕೆಲ ತಿಂಗಳ ಹಿಂದೆ ಈ ಬಗ್ಗೆ ಚರ್ಚೆ ಆರಂಭ ಆಗಿತ್ತು.
ಮದುವೆಗೆ ಮುಹೂರ್ತ ಯಾವಾಗ?
ತರುಣ್ & ಸೋನಾಲ್ ಮದುವೆಗೆ ಸಿದ್ಧತೆ ಸಾಗಿದೆ. ಆದರೆ ಈವರೆಗೆ ಅಧಿಕೃತವಾಗಿ ಸೋನಾಲ್ ಹೆಸರನ್ನ ತರುಣ್ ಸುಧೀರ್ ಅವರು ಎಲ್ಲೂ ಬಾಯಿಬಿಟ್ಟಿಲ್ಲ. ನಾಳೆ ಈ ಕುರಿತಾಗಿ ಅಧಿಕೃತ ಘೋಷಣೆ ಆಗುವುದು ಬಹುತೇಕ ಪಕ್ಕಾ ಆಗಿದೆ. ಮುಂದಿನ ತಿಂಗಳು ಅಂದ್ರೆ ಆಗಸ್ಟ್ 10 & 11ಕ್ಕೆ ಇಬ್ಬರೂ ಮದುವೆ ಆಗುವುದು ಬಹುತೇಕ ಗ್ಯಾರಂಟಿ. ಹೀಗಾಗಿ ಇಬ್ಬರ ಮದುವೆ ಸುದ್ದಿ ಕನ್ನಡ ಸಿನಿ ಇಂಡಸ್ಟ್ರಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿ ಮಾಡುವ ಮುನ್ಸೂಚನೆ ನೀಡಿದೆ.
ದರ್ಶನ್ ಕೂಡ ಮದುವೆಗೆ ಬರ್ತಾರಾ?
ಸೋನಾಲ್ ಅವರಿಗೆ ದರ್ಶನ್ ತೂಗುದೀಪ್ ಅಣ್ಣನ ಸಮಾನ. ಅಲ್ಲದೆ ಖುದ್ದು ಸೋನಾಲ್ ಕೂಡ ದರ್ಶನ್ ಅವರನ್ನ ಅಣ್ಣಾ ಅಂತಾ ಕರೆಯುತ್ತಿದ್ದರು. ಹೀಗಾಗಿ ಇದೀಗ ಜೈಲಿನಲ್ಲಿ ಇರುವ ನಟಿ ಸೋನಾಲ್ ಅವರ ಅಣ್ಣ ದರ್ಶನ್ ತೂಗುದೀಪ್ ಮದುವೆಗೆ ಬರ್ತಾರಾ? ಎಂಬ ಪ್ರಶ್ನೆ ದರ್ಶನ್ ಅಭಿಮಾನಿಗಳನ್ನ ಕಾಡುತ್ತಿದೆ. ಈಗಾಗಲೇ ದರ್ಶನ್ ತೂಗುದೀಪ್ ಅವರಿಗೆ ಮದುವೆ ಆಮಂತ್ರಣ ಪತ್ರ ತಲುಪಿದೆ. ಖುದ್ದಾಗಿ ಜೈಲಿಗೆ ತೆರಳಿದ್ದ ನಿರ್ದೇಶಕ ತರುಣ್ ಸುಧೀರ್, ಈ ಮದುವೆ ಆಮಂತ್ರಣ ಪತ್ರ ತಲುಪಿಸಿದ್ದಾರೆ. ಹೀಗಾಗಿ ತೀವ್ರ ಕುತೂಹಲ ಕೆರಳಿದ್ದು, ಮುಂದೆ ಏನಾಗಲಿದೆ? ಅನ್ನೋದನ್ನ ಕಾದು ನೋಡಬೇಕಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications