ಸೋನು ನಿಗಮ್ ವಿವಾದದ ಬಳಿಕ ಹೊಸ ರೂಲ್ಸ್, ಕನ್ನಡ ಹಾಡು ಕೇಳಿದ್ರೆ ಗಾಯಕರು ಹಾಡಲೇಬೇಕು!
ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿ ಅವಹೇಳನ ಮಾಡಿದ ಕಾರಣಕ್ಕೆ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಬ್ಯಾನ್ ಮಾಡಲಾಗಿದೆ. ಕನ್ನಡ ಹಾಡು ಕೇಳಿದ್ದಕ್ಕೆ ಸೋನು ನಿಗಮ್ ಇದಕ್ಕೇನೆ ಪೆಹಲ್ಗಾಮ್ ದಾಳಿಯಾಗಿದ್ದು ಎನ್ನುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಗ್ಗೆ ಕೊನೆಗೂ ಸೋನು ನಿಗಮ್ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಹಾಗಾಗಿ ಅವರ ಮೇಲಿರುವ ನಿಷೇಧ ತೆರವಾಗುವ ಸಾಧ್ಯತೆಯೂ ಇದೆ. ಮತ್ತೊಂದೆಡೆ ಸೋನು ನಿಗಮ್ ಸೇರಿದಂತೆ ಯಾವುದೇ ಗಾಯಕರು ಇನ್ನು ಮುಂದೆ ರಾಜ್ಯದ ಈ ಭಾಗದಲ್ಲಿ ಸಂಗೀತ ಕಾರ್ಯಕ್ರಮ ನೀಡಬೇಕಾದರೆ ಈ ನಿಯಮ ಪಾಲಿಸಲೇಬೇಕು ಎಂಬ ಖಡಕ್ ರೂಲ್ಸ್ ತರಲಾಗಿದೆ.
ಗಾಯಕನ ಒಂದು ಹೇಳಿಕೆಯಿಂದ ಭಾರಿ ವಿವಾದ ಸೃಷ್ಟಿಯಾದ ಕಾರಣ ಇನ್ನು ಮುಂದೆ ಈ ಈತಿಯ ಘಟನೆಗಳು ಮರುಕಳಿಸದಂತೆ ತಡೆಯಲು ಪೊಲೀಸರು ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಸೋನು ನಿಗಮ್ ಅವರಿಗೆ ಬೆಂಗಳೂರು ಗ್ರಾಮಾಂತರ ಪೊಲೀಸರು ಹೊಸ ರೂಲ್ಸ್ ಜಾರಿ ಮಾಡಿದ್ದಾರೆ. ಅದರಂತೆ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಸೋನು ನಿಗಮ್ ಸಂಗೀತ ಕಾರ್ಯಕ್ರಮ ನೀಡುವಾಗ ಯಾರಾದರೂ ಕನ್ನಡ ಹಾಡಿಗಾಗಿ ಬೇಡಿಕೆ ಇಟ್ಟರೆ ಅದರಂತೆ ಕನ್ನಡ ಹಾಡನ್ನು ಅವರು ಹಾಡಲೇಬೇಕು ಎಂದು ಸೂಚನೆ ನೀಡಲಾಗಿದೆ.

ಬೆಂಗಳೂರಿನ ಕಾಲೇಜೊಂದರ ಕಾರ್ಯಕ್ರಮದಲ್ಲಿ ಸೋನು ನಿಗಮ್ ಕನ್ನಡ ಹಾಡು ಕೇಳಿದ್ದಕ್ಕೆ ನಾಲಿಗೆ ಹರಿಬಿಟ್ಟಿದ್ದರು. ಇದಕ್ಕೇನೇ ಪೆಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಾಗಿದ್ದು ಎನ್ನುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಮುಂದೆ ಈ ರೀತಿಯ ಘಟನೆಗಳು ನಡೆಯಬಾರದು ಎಂಬ ಉದ್ದೇಶಕ್ಕೆ ಬೆಂಗಳೂರು ಗ್ರಾಮಾಂತರ ಪೊಲೀಸರು ಈ ಹೊಸ ನಿಯಮ ತಂದಿದ್ದಾರೆ. ಈ ಭಾಗದಲ್ಲೂ ಸಾಕಷ್ಟು ಕಾಲೇಜುಗಳು ಇರುವುದರಿಂದ ಅಲ್ಲಿಯೂ ಅವರ ಸಂಗೀತ ಕಾರ್ಯಕ್ರಮಗಳು ಆಯೋಜಿಸಲಾಗುತ್ತದೆ. ಹಾಗಾಗಿ ಯಾವುದೇ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡ ಹಾಡಿಗೆ ಬೇಡಿಕೆ ಇಟ್ಟರೆ ಅದನ್ನು ಅವರು ಹಾಡಲೇಬೇಕು ಎಂದು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಎಸ್ಪಿ ಈ ಬಗ್ಗೆ ಖಡಕ್ ಸೂಚನೆ ನೀಡಿದ್ದಾರೆ. ಯಾರೇ ಕಾರ್ಯಕ್ರಮ ಮಾಡಿದರೂ ಅದಕ್ಕೆ ಪೊಲೀಸರ ಅನುಮತಿ ಪಡೆಯುವುದು ಕಡ್ಡಾಯ. ಒಂದು ವೇಳೆ ಈ ರೀತಿಯ ಘಟನೆಗಳು ನಡೆದರೆ ಅದಕ್ಕೆ ಕಾರ್ಯಕ್ರಮದ ಆಯೋಜಕರನ್ನೇ ಹೊಣೆ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.
ಸೋನು ನಿಗಮ್ ವಿಡಿಯೋ ವೈರಲ್ ಆದ ಬಳಿಕ ಭಾರಿ ವಿರೋಧಕ್ಕೆ ಕಾರಣವಾಯಿತು. ಕನ್ನಡ ಸಂಘಟನೆಗಳು ಸೋನು ನಿಗಮ್ ಅವರನ್ನು ಬ್ಯಾನ್ ಮಾಡುವಂತೆ ಪ್ರತಿಭಟನೆ ನಡೆಸಿದವು. ಅದರಂತೆ ಅವರನ್ನು ಬ್ಯಾನ್ ಕೂಡ ಮಾಡಲಾಗಿದೆ. ವಿವಾದ ಹುಟ್ಟುಕೊಂಡಿದ್ದರಿಂದ ಮತ್ತೊಂದು ವಿಡಿಯೋ ಮಾಡಿ ಸೋನು ನಿಗಮ್ ಸ್ಪಷ್ಟನೆ ನೀಡಿದ್ದರು. ಆದರೆ ಅದು ಕನ್ನಡಿಗರ ಕೋಪ ಶಮನ ಮಾಡಲಿಲ್ಲ. ಬಳಿಕ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಗಾಯಕ "ಕನ್ನಡಿಗರ ಪ್ರೀತಿಗಿಂತ ನನ್ನ ಅಹಂ ದೊಡ್ಡದಲ್ಲ. ನಾನು ಕನ್ನಡಿಗರಲ್ಲಿ ಕ್ಷಮೆ ಕೇಳುತ್ತೇನೆ" ಎಂದಿದ್ದರು. ಈ ಹಿನ್ನೆಲೆ ಅವರ ಮೇಲಿನ ನಿಷೇಧ ತೆರವಾಗುವ ಸಾಧ್ಯತೆ ಇದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications