Srujan Lokesh: ಸೃಜನ್ ಲೋಕೇಶ್ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದೇಕೆ..?
ನಟ ಹಾಗೂ ನಿರೂಪಕ ಸೃಜನ್ ಲೋಕೇಶ್ ಅವರು ಏಕಾಏಕಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸೃಜನ್ ಲೋಕೇಶ್ ಅವರಿಗೆ ಲಕ್ಷ್ಮೀ ನಿವಾಸ ಸೀರಿಯಲ್ ನಿರ್ಮಾಪಕರಾದ ಸತ್ಯ ಹಾಗೂ ಪತ್ನಿ ನಿರ್ಮಲಾ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಧಾರಾವಾಹಿ ನಿರ್ಮಾಣಕ್ಕೆ ಪಡೆದುಕೊಂಡಿದ್ದ ಒಂದು ಕೋಟಿ ಸಾಲವನ್ನು ಹಿಂತಿರುಗಿಸದ ಹಿನ್ನೆಲೆಯಲ್ಲಿ ದಂಪತಿ ವಿರುದ್ಧ ನಟ ಹಾಗೂ ನಿರೂಪಕ ಸೃಜನ್ ಲೋಕೇಶ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಕನ್ನಡದ ನಂಬರ್ ಒನ್ ಮನರಂಜನಾ ವಾಹಿನಿ ಜೀ ಕನ್ನಡದಲ್ಲಿ 'ಲಕ್ಷ್ಮೀ ನಿವಾಸ' ಎನ್ನುವ ಜನಪ್ರಿಯ ಧಾರಾವಾಹಿ ಪ್ರಸಾರ ಆಗುತ್ತಿದೆ. ಆದರೆ, ಸ್ಯಾಂಡಲ್ವುಡ್ ನಟ ಸತ್ಯ ಹಾಗೂ ಅವರ ಪತ್ನಿ ನಿರ್ಮಲಾ ಮತ್ತೊಮ್ಮೆ ಸಂಕಷ್ಟಕ್ಕೆ ಸಿಕ್ಕಿಕೊಂಡಿದ್ದು, ಧಾರಾವಾಹಿ ನಿರ್ಮಾಣಕ್ಕೆ ಪಡೆದುಕೊಂಡಿದ್ದ ಒಂದು ಸಾಲವನ್ನು ಹಿಂತಿರುಗಿಸದ ಹಿನ್ನೆಲೆಯಲ್ಲಿ ದಂಪತಿಯ ವಿರುದ್ಧ ದೂರನ್ನು ದಾಖಲಿಸಲಾಗಿದೆ. ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಠಾಣೆಯಲ್ಲಿ ನಟ ಸೃಜನ್ ಲೋಕೇಶ್ ಒಡೆತನದ ಲೋಕೇಶ್ ಪ್ರೊಡಕ್ಷನ್ಸ್ ಸಂಸ್ಥೆಯ ಆಗ್ನಿ ಯು ಸಾಗರ್ ಎಂಬುವವರು ದೂರನ್ನು ದಾಖಲಿಸಿದ್ದಾರೆ.

ಜೀ ಕನ್ನಡದಲ್ಲಿ 'ಲಕ್ಷ್ಮೀ ನಿವಾಸ' ಎನ್ನುವ ಜನಪ್ರಿಯ ಧಾರಾವಾಹಿ ಪ್ರಸಾರ ಆಗುತ್ತಿದೆ. ಆದರೆ, ಕೆಲವು ದಿನಗಳ ಹಿಂದಷ್ಟೇ ಈ ಸೀರಿಯಲ್ ಮರು ಪ್ರಸಾರ ಕಂಡಿತ್ತು. ಕನ್ನಡದ ಪ್ರಮುಖ ಮನರಂಜನಾ ವಾಹಿನಿಯಲ್ಲಿ ಸಾಮಾನ್ಯವಾಗಿ ಇಂತಹ ಘಟನೆಗಳು ನಡೆಯುವುದಿಲ್ಲ. ಆಗಲೇ ಏನೋ ಸರಿಯಿಲ್ಲ ಅನ್ನೋದು ಗೊತ್ತಾಗಿತ್ತು. ಲಕ್ಷ್ಮೀ ನಿವಾಸ ಸೀರಿಯಲ್ ನಿರ್ಮಾಣದ ಬಳಿಕ ನಷ್ಟ ಅನುಭವಿಸಿದ್ದ ದಂಪತಿ ಸೀರಿಯಲ್ ನಿಲ್ಲಿಸುವ ಅಲೋಚನೆಯಲ್ಲಿದ್ರಂತೆ. ಈ ವೇಳೆ ನಟ ಹಾಗೂ ನಿರೂಪಕ ಸೃಜನ್ ಲೋಕೇಶ್ ಬಳಿ 1 ಕೋಟಿ ಸಾಲ ಪಡೆದಿದ್ದರು ಎನ್ನಲಾಗ್ತಿದೆ.
ಲಕ್ಷ್ಮಿ ನಿವಾಸ ಧಾರಾವಾಹಿ ಮರು ಪ್ರಸಾರ ಕಂಡಾಗಲೇ ನಿರ್ಮಾಪಕರಿಂದ ಏನೋ ತೊಂದರೆಯಾಗಿದೆ ಎನ್ನುವುದು ಗೊತ್ತಾಗಿತ್ತು. ಅರ್ಧಕ್ಕೆ ನಿಂತು ಹೋಗಿದ್ದ ಲಕ್ಷ್ಮಿನಿವಾಸ ಧಾರಾವಾಹಿಯನ್ನು ಮುಂದುವರಿಸಲು ಸೃಜನ್ ಲೋಕೇಶ್ 1 ಕೋಟಿ ಕೊಟ್ಟಿದ್ರಂತೆ. ಸಾಲವಾಗಿ ತೆಗೆದುಕೊಂಡ ಒಂದು ಕೋಟಿ ಹಣವನ್ನು ಮರುಪಾವತಿ ಮಾಡದೆ ವಂಚಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.
ಲಕ್ಷ್ಮಿ ನಿವಾಸ ಈ ಧಾರಾವಾಹಿಯಲ್ಲಿ ನಟಿಸುತ್ತಿರುವ ಪ್ರಮುಖ ಪಾತ್ರಧಾರಿಗಳಿಗೆ ಸಂಭಾವನೆ ನೀಡಿರಲಿಲ್ಲ. ಹೀಗಾಗಿ ಒಬ್ಬೊಬ್ಬರೇ ಈ ಧಾರಾವಾಹಿಯಿಂದ ಹಿಂದೆ ಸರಿದಿದ್ದರು. ಆರಂಭದಿಂದ ಇದ್ದವರು ಒಬ್ಬೊಬ್ಬರೇ ಸೀರಿಯಲ್ ಅನ್ನು ಬಿಟ್ಟು ಹೋಗಿದ್ದಕ್ಕೆ ಹಣ ಕಾಸಿನ ಸಮಸ್ಯೆಯೇ ಕಾರಣವೆಂದು ಹೇಳಾಗಿತ್ತು. ಈಗ ಇವರ ಮೇಲೆ ದೂರು ನೀಡಿದ ಬಳಿಕ ಅದೂ ಸಾಬೀತಾಗಿದೆ. ನಟ ಸತ್ಯ ಹಾಗೂ ಅವರ ಪತ್ನಿ ನಿರ್ಮಲಾ ಅವರ ವಿರುದ್ಧ ಹಣ ಪಡೆದು ಹಿಂತಿರುಗಿಸದೇ ವಂಚನೆ ಮಾಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಸೃಜನ್ ಲೋಕೇಶ್ ಪ್ರೊಡಕ್ಷನ್ಸ್ನ ಜೆಪಿಎ ಹೋಲ್ಡರ್ ಆಗಿರುವ ಅಗ್ನಿ ಯು ಸಾಗರ್ ಎಂಬುವವರು ದೂರನ್ನು ದಾಖಲಿಸಿದ್ದಾರೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
‘ಲವ್ ಮಾಕ್ಟೇಲ್ 3’ ಕಥೆ ವಿವಾದ ಸುಖಾಂತ್ಯ: ಫಿಲ್ಮ್ ಚೇಂಬರ್ ಸಭೆಯಲ್ಲಿ ಡಾರ್ಲಿಂಗ್ ಕೃಷ್ಣ-ಗುರು ದೇಶಪಾಂಡೆ ಸಂಧಾನ ಯಶಸ್ವಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications