Sudeep: ಉಪೇಂದ್ರ ವಿರುದ್ಧ ಸಿಟ್ಟಿಗೆದ್ದ ಸುದೀಪ್ ಅಭಿಮಾನಿಗಳು; ಕಾರಣವೇನು?
ಈ ವರ್ಷದ ಕೊನೆಯಲ್ಲಿ ಕನ್ನಡ ಚಿತ್ರರಂಗಕ್ಕೆ ಆಶಾಭಾವನೆ ಸಿಕ್ಕಿದೆ. ವರ್ಷದ ಕೊನೆಯಲ್ಲಿ ಒಂದೇ ವಾರದ ಅಂತರದಲ್ಲಿ ಬಿಡುಗಡೆಯಾದ ಯುಐ ಮತ್ತು ಮ್ಯಾಕ್ಸ್ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಗೆದ್ದು ಬೀಗಿವೆ. ಎರಡೂ ದೊಡ್ಡ ಸಿನಿಮಾಗಳು ಒಂದೇ ವಾರದ ಅಂತರದಲ್ಲಿ ಬಿಡುಗಡೆಯಾಗಿದ್ದು ಸಿನಿಮಾ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು, ಆದರೆ ಪ್ರೇಕ್ಷಕ ಎರಡೂ ಸಿನಿಮಾಗಳನ್ನು ಅಪ್ಪಿಕೊಂಡಿದ್ದಾನೆ.
ಯುಐ ಸಿನಿಮಾ ನೋಡಿದ್ದ ಸುದೀಪ್ ಚಿತ್ರವನ್ನು ಮನಸಾರೆ ಮೆಚ್ಚಿಕೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಅವರು ಇಂತಹ ಸಿನಿಮಾ ಮಾಡಲು ನಿಮ್ಮೊಬ್ಬರಿಂದ ಮಾತ್ರ ಸಾಧ್ಯ ಎಂದು ಹೇಳಿದ್ದರು. ಎರಡೂ ಸಿನಿಮಾಗಳು ಈಗಾಗಲೇ ಸಿನಿಮಾ ಯಶಸ್ಸಿನ ಖುಷಿಯಲ್ಲಿವೆ. ಆದರೆ ಶನಿವಾರ ಉಪೇಂದ್ರ ಆಡಿರುವ ಮಾತುಗಳು ಸುದೀಪ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಯುಐ ಸಿನಿಮಾ ಭರ್ಜರಿ ಯಶಸ್ಸಿನ ಬೆನ್ನಲ್ಲೇ ನಟ, ನಿರ್ದೇಶಕ ಉಪೇಂದ್ರ ಮತ್ತು ಚಿತ್ರತಂಡ ಸಕ್ಸಸ್ ಮೀಟ್ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಉಪೇಂದ್ರ ಮ್ಯಾಕ್ಸ್ ಸಿನಿಮಾ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ರೀತಿ ಸುದೀಪ್ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ.
ಉಪೇಂದ್ರ ಹೇಳಿದ್ದೇನು?
ಸಕ್ಸಸ್ ಮೀಟ್ ಸಂದರ್ಭದಲ್ಲಿ ಮಾಧ್ಯಮದವರು ಹಲವು ಪ್ರಶ್ನೆಗಳನ್ನು ಕೇಳಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಬ್ಬರು ಒಂದೇ ವಾರದ ಅಂತರದಲ್ಲಿ ಯುಐ ಮತ್ತು ಮ್ಯಾಕ್ಸ್ ಬಿಡುಗಡೆಯಾಗಿದೆ. ಮ್ಯಾಕ್ಸ್ ಬಿಡುಗಡೆಯಾದ ಬಳಿಕ ಯುಐ ಸಿನಿಮಾ ಗಳಿಕೆ ಮೇಲೆ ಪರಿಣಾಮ ಬೀರಿದೆಯಾ ಎಂದು ಪ್ರಶ್ನೆ ಕೇಳಿದರು.
ಇದಕ್ಕೆ ಉತ್ತರ ನೀಡಿದ ಉಪೇಂದ್ರ ಯಾವ ಮ್ಯಾಕ್ಸ್ ಕೂಡ ನನಗೆ ಗೊತ್ತಿಲ್ಲ, ನಾವು ಯುಐ ಸಿನಿಮಾ ಬಗ್ಗೆ ಮಾತ್ರ ಗಮನ ಹರಿಸಿದ್ದೇವೆ, ನಮ್ಮ ಸಿನಿಮಾ ಕಲೆಕ್ಷನ್ ಮಾತ್ರ ನೋಡುತ್ತೇವೆ. ಇದು ಮಾರುಕಟ್ಟೆ ನಾವು ಒಂದು ವಸ್ತುವನ್ನು ಮಾರುತ್ತೇವೆ ಎಂದರೆ ಅಕ್ಕ ಪಕ್ಕದಲ್ಲಿ ಇನ್ನೊಬ್ಬರು ಬಂದು ಅಂಗಡಿ ಇಡುತ್ತಾರೆ ನಾವು ಅವರ ಬಗ್ಗೆ ತಲೆ ಕೆಡಿಸಿಕೊಳ್ಳಲು ಆಗಲ್ಲ, ನಮ್ಮ ವ್ಯಾಪಾರ ನಾವು ಮಾಡುತ್ತೇವೆ, ಇಲ್ಲಿ ಅನೇಕ ತೆಲುಗು, ತಮಿಳು ಸಿನಿಮಾ ಬರುತ್ತವೆ ನಾವ್ಯಾಕೆ ತಲೆ ಕೆಡಿಸಿಕೊಳ್ಳಬೇಕು ಎಂದಿದ್ದಾರೆ.
ಮ್ಯಾಕ್ಸ್ ಸಿನಿಮಾ ಬಿಡುಗಡೆಯಾಗಿರುವುದೇ ಗೊತ್ತಿಲ್ಲ ಎಂದು ಉಪೇಂದ್ರ ಹೇಳಿರುವುದು ಸುದೀಪ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಸುದೀಪ್ ಅವರು ನಾನು ಉಪೇಂದ್ರ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ. ಯುಐ ಸಿನಿಮಾ ಬಿಡುಗಡೆ ಕೇಳಿದ್ದಾಗ, ನಾನು ಯುಐ ಸಿನಿಮಾಗೆ ಕಾಯುತ್ತಿದ್ದೇನೆ, ಸಿನಿಮಾ ಬಿಡುಗಡೆ ಮಾಡುವುದು ನಿರ್ಮಾಪಕರ ಜವಾಬ್ದಾರಿ ಅವರೂ ಎಲ್ಲಾ ಲೆಕ್ಕಾಚಾರ ಹಾಕಿಕೊಂಡಿರುತ್ತಾರೆ ಎರಡೂ ಸಿನಿಮಾ ಗೆಲ್ಲಲಿ ಎಂದು ಆಶಿಸಿದ್ದರು.
ಆದರೆ ಇಂದು ಉಪೇಂದ್ರ ಮ್ಯಾಕ್ಸ್ ಸಿನಿಮಾ ಬಗ್ಗೆ ಕೇಳಿದಾಗ ಹಂಗೆ ಮಾತನಾಡುವ ಬದಲು, ಎರಡೂ ಸಿನಿಮಾ ಕಲೆಕ್ಷನ್ ಚನ್ನಾಗಿದೆ ಎಂದಿದ್ದರೂ ಸಾಕಿತ್ತು, ಹಿರಿಯ ನಟರಾಗಿ ಮತ್ತೊಬ್ಬ ನಟನ ಕನ್ನಡ ಸಿನಿಮಾ ಬಗ್ಗೆ ಹೀಗೆ ಮಾತನಾಡಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications