Sudeep-Darshan: ರೇಣುಕಾಸ್ವಾಮಿ ಪತ್ನಿಗೆ ನ್ಯಾಯ ಸಿಗಲಿ: ದರ್ಶನ್ ಬಂಧನದ ಬಗ್ಗೆ ಕಿಚ್ಚ ಸುದೀಪ್ ಫಸ್ಟ್ ರಿಯಾಕ್ಷನ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಬಗ್ಗೆ ಮತ್ತೊಂದು ದೊಡ್ಡ ನಟ ಸುದೀಪ್ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಮೃತ ರೇಣುಕಾಸ್ವಾಮಿ ಮತ್ತು ಆತನ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದಾರೆ.
ಈ ತರದ ಯಾವುದೇ ಘಟನೆ ಆದರೂ ಇಡೀ ಚಿತ್ರರಂಗದ ಮೇಲೆ ಪರಿಣಾಮ ಬೀರುತ್ತದೆ. ಮೊದಲೇ ಜನ ಸಿನಿಮಾ ನೋಡಲು ಬರುತ್ತಿಲ್ಲ, ನಾವು ಒಳ್ಳೆ ಸಿನಿಮಾ ಮಾಡಿ ಪ್ರಯತ್ನ ಪಟ್ಟರೆ ಮಾತ್ರ ಚಿತ್ರರಂಗ ಬೆಳೆಯುತ್ತದೆ ಎಂದು ಹೇಳಿದರು.

ಮಾಧ್ಯಮಗಳಲ್ಲಿ ಏನು ಬರುತ್ತಿದಿಯೋ ಅಷ್ಟೇ ನನಗೂ ಗೊತ್ತಿರುವುದು. ಸತ್ಯವನ್ನು ಹೊರತರಲು ಮಾಧ್ಯಮಗಳು, ಪೊಲಿಸರು ಪ್ರಯತ್ನ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ಈ ಪ್ರಕರಣದಲ್ಲಿ ಸತ್ಯ ಹೊರತರಲು ಹಠ ಹಿಡಿದಿದ್ದಾರೆ ಎಂದು ಮಾಧ್ಯಮಗಳು ಹೇಳಿವೆ. ಸಾಮಾನ್ಯ ಮನುಷ್ಯನಾಗಿ ನಾನು ಯಾರ ಪರ, ವಿರುದ್ಧವೂ ಅಲ್ಲ, ಆದರೆ ಬಾಳಿ ಬದುಕಬೇಕಾದ ಹುಡುಗ ಸತ್ತಿದ್ದಾನಲ್ಲ ಆತನಿಗೆ ನ್ಯಾಯ ಸಿಗಬೇಕು, ಆತನ ಕುಟುಂಬಕ್ಕೆ, ಹುಟ್ಟುವ ಮಗುವಿಗೆ ನ್ಯಾಯ ಸಿಗಬೇಕು ಎಂದರು.
ಎಲ್ಲರಿಗೂ ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಬರಬೇಕು ಎಂದರೆ ಈ ಪ್ರಕರಣದಲ್ಲಿ ನ್ಯಾಯ ಸಿಗಬೇಕು. ಚಿತ್ರರಂಗಕ್ಕೆ ಇಂದು ನ್ಯಾಯ ಸಿಗಬೇಕು, ಚಿಕ್ಕ ಚಿಕ್ಕ ವಿಚಾರಗಳಿಗೂ ಚಿತ್ರರಂಗವನ್ನು ದೂಷಿಸಲಾಗುತ್ತಿದೆ. ಒಬ್ಬಿಬ್ಬರಿಂದ ಚಿತ್ರರಂಗ ಅಲ್ಲ, ಆ ಕುಟುಂಬಕ್ಕೆ ನ್ಯಾಯ ಸಿಕ್ಕಾಗ ಚಿತ್ರರಂಗಕ್ಕೂ ಖುಷಿಯಾಗುತ್ತದೆ ಎಂದರು.
ದರ್ಶನ್ ಬ್ಯಾನ್ ಮಾಡಬೇಕಾ?
ದರ್ಶನ್ರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕಾ ಎನ್ನುವ ಬಗ್ಗೆ ಉತ್ತರ ಕೊಟ್ಟ ಸುದೀಪ್, ನಾವು ಕಾನೂನಲ್ಲ, ದರ್ಶನ್ ಈ ಕೇಸ್ನಿಂದ ಹೊರಗಡೆ ಬಂದರೆ ಬ್ಯಾನ್ ಎನ್ನುವುದು ಬರುವುದೇ ಇಲ್ಲ, ಅಥವಾ ಅವರು ಹೊರಬರದೇ ಇದ್ದರೂ ಬ್ಯಾನ್ ಮಾಡುವುದು ಬರಲ್ಲ. ಇಲ್ಲಿ ಬೇಕಾಗಿರುವುದು ನ್ಯಾಯ ಅಷ್ಟೇ, ಫಿಲ್ಮ್ ಚೇಂಬರ್ ಕೂಡ ಆ ಹುಡುಗನ ಸಾವಿಗೆ ನ್ಯಾಯ ಸಿಗಲಿ ಎಂದೇ ಬಯಸುತ್ತಿದೆ ಎಂದರು.
ಸ್ನೇಹ ಬೇರೆ, ನ್ಯಾಯ ಬೇರೆ, ಸಾವಿರಾರು ಜನ ಕಷ್ಟಪಟ್ಟು ದುಡಿದ ಕಾರಣ ಇಂದು ಚಿತ್ರರಂಗ ಇದೆ. ಆರೋಪಿ, ಅಪರಾಧಿ ಯಾರು ಎಂದು ಹೇಳಲು ಜಡ್ಜ್ ಇದ್ದಾರೆ, ನಾವು ಅದನ್ನು ತೀರ್ಮಾನಿಸಲು ಆಗಲ್ಲ ಎಂದರು.
ಯಾರಿಗೂ ಬುದ್ದಿ ಹೇಳುವಷ್ಟು ದೊಡ್ಡವನು ನಾನಲ್ಲ. ನಾವು ಸೆಲೆಬ್ರಟಿಗಳು ಅಂದತಕ್ಷಣ ನಾವು ದೇವರಲ್ಲ, ತಪ್ಪು ಮಾಡುವವನೇ ಮನುಷ್ಯ, ಫ್ಲಾಪ್ಗಳನ್ನು ಕೊಡುವವನೇ ಹೀರೋ ಎಂದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications