Sudeep-Darshan: ರೇಣುಕಾಸ್ವಾಮಿ ಪತ್ನಿಗೆ ನ್ಯಾಯ ಸಿಗಲಿ: ದರ್ಶನ್ ಬಂಧನದ ಬಗ್ಗೆ ಕಿಚ್ಚ ಸುದೀಪ್ ಫಸ್ಟ್ ರಿಯಾಕ್ಷನ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಬಗ್ಗೆ ಮತ್ತೊಂದು ದೊಡ್ಡ ನಟ ಸುದೀಪ್ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಮೃತ ರೇಣುಕಾಸ್ವಾಮಿ ಮತ್ತು ಆತನ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದಾರೆ.
ಈ ತರದ ಯಾವುದೇ ಘಟನೆ ಆದರೂ ಇಡೀ ಚಿತ್ರರಂಗದ ಮೇಲೆ ಪರಿಣಾಮ ಬೀರುತ್ತದೆ. ಮೊದಲೇ ಜನ ಸಿನಿಮಾ ನೋಡಲು ಬರುತ್ತಿಲ್ಲ, ನಾವು ಒಳ್ಳೆ ಸಿನಿಮಾ ಮಾಡಿ ಪ್ರಯತ್ನ ಪಟ್ಟರೆ ಮಾತ್ರ ಚಿತ್ರರಂಗ ಬೆಳೆಯುತ್ತದೆ ಎಂದು ಹೇಳಿದರು.

ಮಾಧ್ಯಮಗಳಲ್ಲಿ ಏನು ಬರುತ್ತಿದಿಯೋ ಅಷ್ಟೇ ನನಗೂ ಗೊತ್ತಿರುವುದು. ಸತ್ಯವನ್ನು ಹೊರತರಲು ಮಾಧ್ಯಮಗಳು, ಪೊಲಿಸರು ಪ್ರಯತ್ನ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ಈ ಪ್ರಕರಣದಲ್ಲಿ ಸತ್ಯ ಹೊರತರಲು ಹಠ ಹಿಡಿದಿದ್ದಾರೆ ಎಂದು ಮಾಧ್ಯಮಗಳು ಹೇಳಿವೆ. ಸಾಮಾನ್ಯ ಮನುಷ್ಯನಾಗಿ ನಾನು ಯಾರ ಪರ, ವಿರುದ್ಧವೂ ಅಲ್ಲ, ಆದರೆ ಬಾಳಿ ಬದುಕಬೇಕಾದ ಹುಡುಗ ಸತ್ತಿದ್ದಾನಲ್ಲ ಆತನಿಗೆ ನ್ಯಾಯ ಸಿಗಬೇಕು, ಆತನ ಕುಟುಂಬಕ್ಕೆ, ಹುಟ್ಟುವ ಮಗುವಿಗೆ ನ್ಯಾಯ ಸಿಗಬೇಕು ಎಂದರು.
ಎಲ್ಲರಿಗೂ ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಬರಬೇಕು ಎಂದರೆ ಈ ಪ್ರಕರಣದಲ್ಲಿ ನ್ಯಾಯ ಸಿಗಬೇಕು. ಚಿತ್ರರಂಗಕ್ಕೆ ಇಂದು ನ್ಯಾಯ ಸಿಗಬೇಕು, ಚಿಕ್ಕ ಚಿಕ್ಕ ವಿಚಾರಗಳಿಗೂ ಚಿತ್ರರಂಗವನ್ನು ದೂಷಿಸಲಾಗುತ್ತಿದೆ. ಒಬ್ಬಿಬ್ಬರಿಂದ ಚಿತ್ರರಂಗ ಅಲ್ಲ, ಆ ಕುಟುಂಬಕ್ಕೆ ನ್ಯಾಯ ಸಿಕ್ಕಾಗ ಚಿತ್ರರಂಗಕ್ಕೂ ಖುಷಿಯಾಗುತ್ತದೆ ಎಂದರು.
ದರ್ಶನ್ ಬ್ಯಾನ್ ಮಾಡಬೇಕಾ?
ದರ್ಶನ್ರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕಾ ಎನ್ನುವ ಬಗ್ಗೆ ಉತ್ತರ ಕೊಟ್ಟ ಸುದೀಪ್, ನಾವು ಕಾನೂನಲ್ಲ, ದರ್ಶನ್ ಈ ಕೇಸ್ನಿಂದ ಹೊರಗಡೆ ಬಂದರೆ ಬ್ಯಾನ್ ಎನ್ನುವುದು ಬರುವುದೇ ಇಲ್ಲ, ಅಥವಾ ಅವರು ಹೊರಬರದೇ ಇದ್ದರೂ ಬ್ಯಾನ್ ಮಾಡುವುದು ಬರಲ್ಲ. ಇಲ್ಲಿ ಬೇಕಾಗಿರುವುದು ನ್ಯಾಯ ಅಷ್ಟೇ, ಫಿಲ್ಮ್ ಚೇಂಬರ್ ಕೂಡ ಆ ಹುಡುಗನ ಸಾವಿಗೆ ನ್ಯಾಯ ಸಿಗಲಿ ಎಂದೇ ಬಯಸುತ್ತಿದೆ ಎಂದರು.
ಸ್ನೇಹ ಬೇರೆ, ನ್ಯಾಯ ಬೇರೆ, ಸಾವಿರಾರು ಜನ ಕಷ್ಟಪಟ್ಟು ದುಡಿದ ಕಾರಣ ಇಂದು ಚಿತ್ರರಂಗ ಇದೆ. ಆರೋಪಿ, ಅಪರಾಧಿ ಯಾರು ಎಂದು ಹೇಳಲು ಜಡ್ಜ್ ಇದ್ದಾರೆ, ನಾವು ಅದನ್ನು ತೀರ್ಮಾನಿಸಲು ಆಗಲ್ಲ ಎಂದರು.
ಯಾರಿಗೂ ಬುದ್ದಿ ಹೇಳುವಷ್ಟು ದೊಡ್ಡವನು ನಾನಲ್ಲ. ನಾವು ಸೆಲೆಬ್ರಟಿಗಳು ಅಂದತಕ್ಷಣ ನಾವು ದೇವರಲ್ಲ, ತಪ್ಪು ಮಾಡುವವನೇ ಮನುಷ್ಯ, ಫ್ಲಾಪ್ಗಳನ್ನು ಕೊಡುವವನೇ ಹೀರೋ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications