Rajinikanth: ಕನ್ನಡಿಗ & ಸೂಪರ್ ಸ್ಟಾರ್ ರಜನೀಕಾಂತ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಯಲ್ಲಿ...
ಕನ್ನಡಿಗ & ಸೂಪರ್ ಸ್ಟಾರ್ ರಜನೀಕಾಂತ್ ಅಭಿಮಾನಿಗಳಿಗೆ ಇಂದು ಬೆಳಗ್ಗೆಯೇ ಸ್ಫೋಟಕ ವಿಚಾರ ಗೊತ್ತಾಗಿದೆ. ಭಾರತ ಮಾತ್ರವಲ್ಲದೆ ಜಗತ್ತಿನ ಮೂಲೆ ಮೂಲೆಯಲ್ಲೂ ಕೋಟ್ಯಂತರ ಅಭಿಮಾನಿಗಳನ್ನ ಹೊಂದಿರುವ ಸೂಪರ್ ಸ್ಟಾರ್ ರಜನೀಕಾಂತ್ ಅವರು ಕರ್ನಾಟಕದವರು. ಹೀಗೆ ಕರ್ನಾಟಕದಿಂದ ಹೋಗಿ ತಮಿಳು ಸಿನಿಮಾ ರಂಗದಲ್ಲಿ ಬಾಸ್ ಆಗಿ ಮೆರಯುತ್ತಿರುವ ರಜನೀಕಾಂತ್ ಅವರ ಕುರಿತು ಇದೀಗ ಸ್ಫೋಟಕ ವಿಚಾರ ಬೆಳ್ಳಂಬೆಳಗ್ಗೆ ಬಯಲಾಗಿದೆ. ಈ ಸುದ್ದಿ ಕೇಳಿ ಫ್ಯಾನ್ಸ್ ಆಘಾತಕ್ಕೆ ಒಳಗಾಗಿದ್ದು, ಕನ್ನಡಿಗ & ಸೂಪರ್ ಸ್ಟಾರ್ ರಜನೀಕಾಂತ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಯಲ್ಲಿ...
ಸೂಪರ್ ಸ್ಟಾರ್ ಎಂಬ ಬಿರುದು ಪಡೆದಿರುವ, ನಟ ರಜನೀಕಾಂತ್ ಅವರು ತಮ್ಮ 73ನೇ ವಯಸ್ಸಿನಲ್ಲೂ ಕೂಡ ಸೂಪರ್ ಸ್ಟಂಟ್ ಮಾಡುತ್ತಾರೆ. ಅದರಲ್ಲೂ ರಜನೀಕಾಂತ್ ಸಿನಿಮಾ ಫೈಟ್ಗಳನ್ನ ನೋಡೋದಕ್ಕೆ ಅಂತಾನೇ ದೊಡ್ಡ ಪ್ರಮಾಣದ ಅಭಿಮಾನಿಗಳ ಬಳಗ ಇದೆ. ಹೀಗಿದ್ದಾಗ ನಟ ರಜನೀಕಾಂತ್ ಅವರ ಬಗ್ಗೆ ಇದೀಗ ಸ್ಫೋಟಕ ಸುದ್ದಿಯೊಂದು ಬೆಳಗ್ಗೆಯೇ ಬಯಲಾಗಿದೆ. ಬೆಳಗ್ಗೆ ಮೊಬೈಲ್ ತೆಗೆದು ನೋಡುತ್ತಿದ್ದಂತೆ ನಟ ರಜನೀಕಾಂತ್ ಅವರ ಫ್ಯಾನ್ಸ್ ಆಘಾತಕ್ಕೆ ಒಳಗಾಗಿದ್ದಾರೆ, ಹಾಗಿದ್ರೆ ಕನ್ನಡಿಗ & ಸೂಪರ್ ಸ್ಟಾರ್ ರಜನೀಕಾಂತ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಯಲ್ಲಿ...

ಸೂಪರ್ ಸ್ಟಾರ್ ರಜನೀಕಾಂತ್ ಆಸ್ಪತ್ರೆಯಲ್ಲಿ...
ಹೌದು, ಸೂಪರ್ ಸ್ಟಾರ್ ರಜನಿಕಾಂತ್ ಅವರು ಏನೇ ಮಾಡಿದ್ರೂ ಪರ್ಫೆಕ್ಟ್ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ರಜನಿಕಾಂತ್ ಅವರಿಗೆ ಬೆಟ್ಟದಷ್ಟು ಅಭಿಮಾನಿ ಬಳಗ ಇದೆ. ಅವರ ಸಿನಿಮಾಗಾಗಿ ಅಭಿಮಾನಿಗಳು ವರ್ಷಗಟ್ಟಲೇ ಕಾಯುತ್ತಾರೆ. ಹೀಗಿದ್ದಾಗ ರಜನಿಕಾಂತ್ ಅವರಿಗೆ 73 ವರ್ಷ ಆಗಿದ್ರೂ ಅವರು ಮಾಡುವ ಸಿನಿಮಾಗಳು ಥೇಟ್ ಈಗಿನ್ನೂ 30 ವರ್ಷದ ಹುಡುಗರಂತೆ ಇರುತ್ತೆ. ಹೀಗಾಗಿ ನಟ ರಜನಿಕಾಂತ್ ಅವರಿಗೆ ಭಾರಿ ದೊಡ್ಡ ಸಂಖ್ಯೆ ಅಭಿಮಾನಿಗಳು ಇದ್ದಾರೆ. ಅದ್ರಲ್ಲೂ ರಜನಿಕಾಂತ್ ಅವರ ಸಿನಿಮಾ ರಿಲೀಸ್ ಆಗುತ್ತೆ ಅಂದ್ರೆ, ಫ್ಯಾನ್ಸ್ ವರ್ಷಗಟ್ಟಲೇ ಕಾಯುತ್ತಾರೆ. ಹೀಗಿದ್ದಾಗ ತಮ್ಮ ಅಭಿಮಾನಿಗಳಿಗಾಗಿ ಸಾಕಷ್ಟು ಬ್ಯುಸಿ ಇರುವ ರಜನಿಕಾಂತ್ ಅವರ ಆರೋಗ್ಯ ಕೈಕೊಟ್ಟಿದ್ದು, ಆಸ್ಪತ್ರೆಗೆ ಸೇರಿದ್ದಾರೆ. ಹಾಗಾದ್ರೆ ರಜನಿಕಾಂತ್ ಅವರಿಗೆ ಏನಾಗಿದೆ?
ಅಪೋಲೋ ಆಸ್ಪತ್ರೆಗೆ ಸೂಪರ್ ಸ್ಟಾರ್
ಅಂದಹಾಗೆ ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಸೂಪರ್ ಸ್ಟಾರ್ ರಜನಿಕಾಂತ್ ಅವರು ದಿಢೀರ್ ಅಂತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ದಿಢೀರ್ ಉದರ ಸಂಬಂಧಿ ಅಂದ್ರೆ ಹೊಟ್ಟೆ ಸಂಬಂಧಿತ ಸಮಸ್ಯೆಯಿಂದ ಪರದಾಡುತ್ತಿದ್ದು, ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಾಹಿತಿ ಸಿಕ್ಕಿದೆ. ಚೆನ್ನೈನ ಆಯರ್ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.
ಕೆಲವೇ ನಿಮಿಷದಲ್ಲಿ ಅಧಿಕೃತ ಪ್ರಕಟಣೆ?
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಈಗ ಚೆನ್ನೈನ ಆಯರ್ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಯ, ವಿಶೇಷ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರೇ ಆಗಮಿಸಿ ಖುದ್ದು ನಟ ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದ್ದು, ಸೂಕ್ತ ಚಿಕಿತ್ಸೆಯು ಕೂಡ ಮುಂದುವರಿದಿದೆ. ಇನ್ನು ಸೂಪರ್ ಸ್ಟಾರ್ ರಜನಿಕಾಂತ್ ಅವರು ಆಸ್ಪತ್ರೆಗೆ ದಾಖಲು ಆಗುವ ಮೊದಲು, 'ವೆಟ್ಟೈಯನ್' ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಮನ ಸೆಳೆದಿದ್ದರು. ಆದರೆ ದಿಢೀರ್ ಹೀಗೆ ನಟ ರಜನಿಕಾಂತ್ ಆಸ್ಪತ್ರೆಗೆ ಸೇರಿರುವ ವಿಚಾರ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಇನ್ನೇನು ಕೆಲವೇ ನಿಮಿಷದಲ್ಲಿ ಆಸ್ಪತ್ರೆ ವೈದ್ಯರು ರಜನಿಕಾಂತ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಲಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications