"ಮೊದಲು ನಿಮ್ಮ ಫ್ಯಾಮಿಲಿ ನೋಡ್ಕೊಳಿ, ದರ್ಶನ್ ನಿಂದ ನಿಮಗೆ ಏನು ಸಿಗಲ್ಲ"
ಬೆಂಗಳೂರು, ಆಗಸ್ಟ್ 15: ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳನ್ನು ನಿನ್ನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಈಗಾಗಲೇ ಆರು ತಿಂಗಳ ಕಾಲ ದರ್ಶನ್ ಆಂಡ್ ಗ್ಯಾಂಗ್ ಜೈಲು ಶಿಕ್ಷೆ ಅನುಭವಿಸಿದ್ದರು. ಇದೀಗ ಮತ್ತೆ ದರ್ಶನ್ ಜೈಲು ಸೇರಿದ್ದು, ಈ ಬಗ್ಗೆ ನಟಿ ಮತ್ತು ನಿರ್ಮಾಪಕಿ ಪ್ರಿಯಾ ಹಾಸನ್ ಅವರು ದರ್ಶನ್ ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ನಟಿ ಮತ್ತು ನಿರ್ಮಾಪಕಿ ಪ್ರಿಯಾ ಹಾಸನ್ ಅವರು ಮಾತನಾಡಿ, ಮೊದಲು ನಿಮ್ಮ ಕುಟುಂಬಕ್ಕೆ ಆದ್ಯತೆ ಕೊಡಿ, ದರ್ಶನ್ ನಿಂದ ನಿಮಗೆ ಏನು ಸಿಗಲ್ಲ ಫ್ಯಾಮಿಲಿ ಮೊದಲು ಅಂತ ಕಿವಿಮಾತು ಹೇಳಿದ್ದಾರೆ. ಕೆಲವೊಂದು ಸಮಯ ಸಂದರ್ಭ ಅವರು ತಪ್ಪು ಮಾಡಿರುವುದು ನಿಜ ಆಗಿದೆ ಅದು ಪ್ರೂಫ್ ಸಹ ಆಗಿದೆ. ಉಪ್ಪು ತಿಂದವರು ನೀರು ಕುಡಿಯಬೇಕು ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು. ಸುಪ್ರೀಂ ಕೋರ್ಟ್ ನೀಡಿರುವ ಈ ಒಂದು ಐತಿಹಾಸಿಕ ತೀರ್ಪು ಇಡೀ ಸಮಾಜಕ್ಕೆ ಒಳ್ಳೆಯ ಸಂದೇಶ ಸಿಕ್ಕಿದೆ. ಕಾನೂನಿನ ಮುಂದೆ ಎಲ್ಲಾ ಒಂದೇ ಅನ್ನೋದು ಪ್ರೂವ್ ಆಗಿದೆ ಎಂದು ಹೇಳಿದರು.

ಇನ್ನೂ ನಟಿ ರಮ್ಯಾ ಗೂ ಫ್ಯಾನ್ಸ್ ಕೆಟ್ಟದಾಗಿ ಮೆಸೇಜ್ ಮಾಡಿದ್ದರು. ರಮ್ಯಾ ಅವರ ಧೈರ್ಯ ಮೆಚ್ಚಬೇಕು ಅವರ ಬಗ್ಗೆ ಹೆಮ್ಮೆ ಇದೆ. ಕಾನೂನನ್ನು ನಾವು ಯಾರು ಕೈಗೆ ತೆಗೆದುಕೊಳ್ಳಲಾಗುವುದಿಲ್ಲ ಕಾನೂನು ಏನು ಹೇಳುತ್ತೋ ಅದಕ್ಕೆ ನಾವು ತಲೆಬಾಗಲೇಬೇಕು ಇಲ್ಲ ಅಂದರೆ ನಮ್ಮ ಸಮಾಜಕ್ಕೆ ನಾವು ಏನು ಸಂದೇಶ ಕೊಟ್ಟ ಹಾಗೆ ಆಗುತ್ತದೆ? ನಮ್ಮ ಸಮಾಜದಲ್ಲಿ ಕಾನೂನಿನ ಬಗ್ಗೆ ಭಯನೇ ಹೋಗಿ ಬಿಡುತ್ತೆ ಎಂದು ನಟಿ ಮತ್ತು ನಿರ್ಮಾಪಕಿ ಪ್ರಿಯಾ ಹಾಸನ್ ಹೇಳಿದ್ದಾರೆ.
ರೇಣುಕಾಸ್ವಾಮಿ ಕೇಸ್ ನಲ್ಲಿ ಸುಪ್ರೀಂನಿಂದ ಬಂದ ಆದೇಶ ಇಡೀ ಸಮಾಜಕ್ಕೆ ಒಳ್ಳೆ ಮೆಸೇಜ್ ಸಿಕ್ಕಿದೆ. ಯಾರೇ ಆದರೂ ಕಾನೂನಿನ ಮುಂದೆ ಸಮಾನರು ಎನ್ನುವುದು ಮತ್ತೆ ಸಾಬೀತಾಗಿದೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು. ಪವಿತ್ರಾಗೌಡಗೆ ಮೆಸೇಜ್ ಬಂತು ನಿಜ ಒಪ್ಪಿಕೊಳ್ಳೋಣ. ಆದರೆ ಕಾನೂನು ರೀತಿಯಲ್ಲಿ ನಟ ದರ್ಶನ್ ಆಗಲಿ ಪವಿತ್ರಾ ಗೌಡ ಕ್ರಮ ತೆಗೆದುಕೊಳ್ಳಬೇಕಿತ್ತು. ಅದಕ್ಕಂತಲೇ ಪೊಲೀಸ್ ಹಾಗೂ ಕಾನೂನಿತ್ತು. ಏಕಾಏಕಿ ಕಾನೂನು ಕೈಗೆ ತೆಗೆದುಕೊಂಡಿದ್ದು ತಪ್ಪು ಎಂದು ಪ್ರಿಯಾ ಹಾಸನ್ ಅವರು ತಿಳಿಸಿದ್ದಾರೆ.
ತಪ್ಪು ಮಾಡಿದವರು ಶಿಕ್ಷೆ ಅನುಭವಸಿಸಬೇಕು.. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದಿದ್ದಾರೆ. ತಪ್ಪು ಮಾಡಿದ ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಶಿಕ್ಷೆ ಅನುಭವಿಸಲೇಬೇಕೆಂದು ಹೇಳಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ಭರವಸೆ ಸಿಕ್ಕಂತಾಗಿದೆ. ಆದರೆ ರೇಣುಕಾಸ್ವಾಮಿ ಮಾಡಿದ ತಪ್ಪನ್ನು ದರ್ಶನ್ ಅವರ ಅಭಿಮಾನಿಗಳು ಮಾಡುತ್ತಿದ್ದಾರೆ. ಹೆಣ್ಣುಮಕ್ಕಳಿಗೆ ಕೆಟ್ಟದಾಗಿ ಕಮೆಂಟ್ಸ್ ಮಾಡುತ್ತಿದ್ದಾರೆ. ನಿಮ್ ಫ್ಯಾಮಿಲಿ ಇದೆ ಅದನ್ನ ಚೆನ್ನಾಗಿ ನೋಡಿಕೊಳ್ಳಿ. ಕೆಟ್ಟದಾಗಿ ಮೆಸೇಜ್ ಮಾಡಬೇಡಿ. ನಿಮ್ಮ ಮನೆಯಲ್ಲೂ ಹೆಣ್ಣುಮಕ್ಕಳು ಇದ್ದಾರೆ. ರಮ್ಯಾ ಅವರಿಗೆ ಕೆಟ್ಟದಾಗಿ ಮೇಸೇಜ್ ಮಾಡಿದ್ದು ತಪ್ಪು, ರಮ್ಯಾ ಅವರ ಡೇರಿಂಗ್ ಮೆಚ್ಚಬೇಕು ಎಂದು ನಟಿ ಮತ್ತು ನಿರ್ಮಾಪಕಿ ಪ್ರಿಯಾ ಹಾಸನ್ ಅವರು ಹೇಳಿದ್ದಾರೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications