ಖ್ಯಾತ ನಟ ಯೋಗಿ ಬಾಬು ಚಲಿಸುತ್ತಿದ್ದ ಕಾರು ಭೀಕರ ಅಪಘಾತ
ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಯೋಗಿ ಬಾಬು ಅವರ ಕಾರು ಅಪಘಾತಕ್ಕೀಡಾಗಿದೆ. ಭಾನುವಾರ ಮುಂಜಾನೆ ವಾಲಾಜಪೇಟೆ ಟೋಲ್ ಪ್ಲಾಜಾ ಬಳಿ ನಟ ಯೋಗಿ ಬಾಬು ಅವರ ಕಾರು ಅಪಘಾತಕ್ಕೀಡಾಗಿದ್ದು, ವಾಹನವು ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಕಾರು ಅಪಘಾತ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿವೆ. ಅಪಘಾತದಲ್ಲಿ ನಟ ಯೋಗಿ ಬಾಬು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಯೋಗಿ ಬಾಬು ಅವರ ವಾಹನ ಕಂಟ್ರೋಲ್ ತಪ್ಪಿ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದೆ. ಆದರೆ ಯೋಗಿ ಬಾಬು ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಹೇಳಲಾಗುತ್ತಿದೆ.

ಈ ವಿಚಾರ ತಿಳಿದು ಯೋಗಿ ಬಾಬು ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ವಂದಂತಿಗಳನ್ನು ನಂಬಬೇಡಿ. ನಾನು ಕ್ಷೇಮವಾಗಿದ್ದೇನೆ ಎಂದು ನಟ ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
"ಅದು ಯಾವುದೋ ಕಂಪನಿ ಕಾರು. ಬ್ಯಾರಿಕೇಡ್ಗೆ ಚೂರು ತಾಗಿ ಘಟನೆ ನಡೆದಿದೆ ಅಷ್ಟೇ. ಎಲ್ಲರೂ ಕ್ಷೇಮವಾಗಿದ್ದೇವೆ, ಯಾರಿಗೂ ಯಾವುದೇ ಅನಾಹುತ ನಡೆದಿಲ್ಲ. ನಾನು ಅಲ್ಲಿ ಏನಾಗಿದೆ ಎಂಬುದನ್ನು ನೋಡಿ ಕೊನೆಗೆ ಎಲ್ಲರನ್ನೂ ಅಲ್ಲಿಂದ ಕಳಿಸಿಕೊಟ್ಟೆವು ಎಂದು ಯೋಗಿ ಬಾಬು ಅವರು ಸ್ಪಷ್ಟನೆ ನೀಡಿದ್ದಾರೆ. ಸುಮ್ಮನೆ ಈ ಬಗ್ಗೆ ಏನೇನೋ ವದಂತಿಗಳು ಹಬ್ಬುತ್ತಿದೆ. ಅದೆಲ್ಲವೂ ಸುಳ್ಳು, ದಯವಿಟ್ಟು ಯಾರೂ ವದಂತಿಗಳನ್ನು ನಂಬಬೇಡಿ" ಎಂದು ಯೋಗಿ ಬಾಬು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಅಪಘಾತದ ಬಗ್ಗೆ ಅಭಿಮಾನಿಗಳು ಮತ್ತು ಸಿನಿಮಾ ತಾರೆಯರು ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದು, ಯೋಗಿ ಬಾಬು ಸುರಕ್ಷಿತವಾಗಿದ್ದಾರಾ? ಎಂದು ವಿಚಾರಿಸುತ್ತಿದ್ದಾರೆ. ಆದರೆ ಪೊಲೀಸರು ಬಹಿರಂಗಪಡಿಸಿರುವ ಇತ್ತೀಚಿನ ಮಾಹಿತಿ ಪ್ರಕಾರ ಯೋಗಿ ಬಾಬು ಸುರಕ್ಷಿತವಾಗಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಯೋಗಿ ಬಾಬು ಅವರ ಅಪಘಾತ ವಿಚಾರವಾಗಿ ಹಲವು ವದಂತಿಗಳು ಹಬ್ಬುತ್ತಿವೆ. ಈ ಅವಘಡದ ಬಗ್ಗೆ ಖುದ್ದು ಯೋಗಿ ಬಾಬು ಪ್ರತಿಕ್ರಿಯಿಸಿದರೆ ಮತ್ತಷ್ಟು ರಿಲೀಫ್ ಆಗಲಿದೆ ಎಂಬುದು ಅಭಿಮಾನಿಗಳು ಕೋರಿದ್ದಾರೆ. ನಟ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ನಾನು ಕ್ಷೇಮವಾಗಿದ್ದೇನೆ ಎಂದು ಹೇಳಿರುವುದಲ್ಲದೆ, ಎಕ್ಸ್ನಲ್ಲೂ ನಾನು ಕ್ಷೇಮ, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಪೋಸ್ಟ್ ಮಾಡಿದ್ದಾರೆ.
ತಮಿಳು ಚಿತ್ರರಂಗದಲ್ಲಿ ಹಾಸ್ಯನಟನಾಗಿ ಖ್ಯಾತಿ ಗಳಿಸಿರುವ ಯೋಗಿ ಬಾಬು ಅವರು ಅತಿ ಹೆಚ್ಚು ಸಂಭಾವನೆ ಪಡೆಯುವ ಹಾಸ್ಯ ನಟರ ಪೈಕಿ ಸ್ಥಾನ ಗಳಿಸಿದ್ದಾರೆ. ಇತ್ತೀಚೆಗೆ ತೆರೆಕಂಡಿರುವ ಬಹುತೇಕ ಸ್ಟಾರ್ ನಟರ ತಮಿಳು ಸಿನಿಮಾಗಳಲ್ಲಿ ನಟ ಯೋಗಿ ಬಾಬು ಅವರ ಪಾತ್ರ ಇದ್ದೇ ಇರುತ್ತೆ. ಅಷ್ಟರಮಟ್ಟಿಗೆ ಅವರ ಕ್ರೇಜ್ ತಮಿಳುನಾಡಿನಲ್ಲಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications