Bigg Boss: ಗಂಡಸರ ಜೊತೆ ಅಲ್ಲಿ ಮಲಗಬೇಕು: ₹1.65 ಕೋಟಿ ಕೊಟ್ರೂ ಬಿಗ್ಬಾಸ್ಗೆ ಹೋಗಲ್ಲ ಎಂದ ನಟಿ
ಬಿಗ್ಬಾಸ್ ರಿಯಾಲಿಟಿ ಶೋನಲ್ಲಿ ಒಂದು ಚಾನ್ಸ್ ಸಿಕ್ಕರೆ ಸಾಕು ಅನ್ನೋದು ಎಷ್ಟೋ ಮಂದಿಯ ಕನಸು. ಶೋನಲ್ಲಿ ಟ್ರೋಫಿ ಗೆಲ್ಲದಿದ್ರೂ ಪರವಾಗಿಲ್ಲ, ಸ್ಪರ್ಧಿಯಾಗಿ ಒಂದಷ್ಟು ದಿನ ಬಿಗ್ಬಾಸ್ ಮನೆಯಲ್ಲಿ ಮಿಂಚಲು ಅವಕಾಶ ಕೊಟ್ಟರೆ ಸಾಕು ಎಂದು ದೇವರಲ್ಲಿ ಕೇಳಿಕೊಳ್ತಾರೆ. ಬಿಗ್ಬಾಸ್ ಮನೆಯಲ್ಲಿ ಕಾಣಿಸಿಕೊಂಡರೆ ನೇಮ್ ಫೇಮ್ ಎಲ್ಲ ಸಿಗುತ್ತೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಖ್ಯಾತಿ ನಟಿಗೆ ಕೋಟಿ ಕೋಟಿ ಆಫರ್ ಮಾಡಿದರೂ ನಾನು ಬಿಗ್ಬಾಸ್ಗೆ ಹೋಗಲ್ಲ ಎಂದು ನೇರವಾಗಿ ತಿರಸ್ಕರಿಸಿದ್ದಾರೆ. ಇದಕ್ಕೆ ಶಾಕಿಂಗ್ ಕಾರಣ ನೀಡಿರುವ ನಟಿ, ಬಿಗ್ಬಾಸ್ ಮನೆಯಲ್ಲಿ ಗಂಡಸರೊಂದಿಗೆ ಆ ಕೆಲಸ ಮಾಡಬೇಕು. ಅದು ನನ್ನಿಂದ ಸಾಧ್ಯವಿಲ್ಲ ಎಂದಿದ್ದಾರೆ.
ಸಾಮಾನ್ಯವಾಗಿ ಬಿಗ್ಬಾಸ್ ಆಫರ್ ಬಂದ ಕೂಡಲೇ ಹಿಂದೆ ಮುಂದೆ ನೋಡದೆ ಜನ ಒಪ್ಪಿಕೊಳ್ತಾರೆ. ಆದರೆ ಕೋಟಿಗಟ್ಟಲೆ ಸಂಭಾವನೆ ಕೊಡ್ತೀವಿ ಬನ್ನಿ ಎಂದು ಬಿಗ್ಬಾಸ್ಗೆ ಕರೆದರೂ ನಟಿ ನೋ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅಲ್ಲಿ ಒಬ್ಬ ಪುರುಷನೊಂದಿಗೆ ಒಂದೇ ಹಾಸಿಗೆಯ ಮೇಲೆ ಮಲಗಬೇಕು. ರಿಯಾಲಿಟಿ ಶೋಗಾಗಿ ಪುರುಷನೊಂದಿಗೆ ಒಂದೇ ಹಾಸಿಗೆಯ ಮೇಲೆ ಮಲಗುವ ಮಹಿಳೆಯಂತೆ ನಾನು ಕಾಣುತ್ತೀನಾ? ಎಂದು ಗರಂ ಆಗಿ ಹೇಳಿದ್ದಾರೆ.

ಬಾಲಿವುಡ್ನ ಖ್ಯಾತ ನಟಿ ತನುಶ್ರೀ ದತ್ತಾ ಅವರಿಗೆ ಬಿಗ್ಬಾಸ್ನಿಂದ ಆಫರ್ ಬಂದಾಗ ಈ ಕಾರಣ ನೀಡಿ ನಿರಾಕರಿಸಿದ್ದಾರೆ. ಇತ್ತೀಚಿನ ಸಂದರ್ಶನದಲ್ಲಿ ಈ ಬಗ್ಗೆ ತನುಶ್ರೀ ದತ್ತಾ ಈ ವಿಚಾರ ಬಹಿರಂಗಪಡಿಸಿದ್ದಾರೆ. '11 ವರ್ಷಗಳಿಂದಲೂ ನನಗೆ ಬಿಗ್ಬಾಸ್ ಆಫರ್ ಬರುತ್ತಿದೆ. ಈ ಬಾರಿ ಸಲ್ಮಾನ್ ಖಾನ್ ನಡೆಸಿಕೊಡುತ್ತಿರುವ ಬಿಗ್ಬಾಸ್ 19ನೇ ಸೀಸನ್ನಿಂದಲೂ ಬಂದ ₹1.65 ಕೋಟಿ ಆಫರ್ ತಿರಸ್ಕರಿಸಿದೆ. ನಾನು ಅಂತಹ ಸ್ಥಳದಲ್ಲಿ ಉಳಿಯಲು ಸಾಧ್ಯವಿಲ್ಲ' ಎಂದಿದ್ದಾರೆ.
'ನಾನು ಅಷ್ಟೊಂದು ಚೀಪ್ ಅಲ್ಲ'
'ಅಲ್ಲಿ ಗಂಡಸರು, ಮಹಿಳೆಯರು ಒಂದೇ ಹಾಲ್ನಲ್ಲಿ ಮಲಗುತ್ತಾರೆ, ಜಗಳವಾಡುತ್ತಾರೆ. ನನ್ನಿಂದ ಅದೆಲ್ಲ ಸಾಧ್ಯವಿಲ್ಲ. ರಿಯಾಲಿಟಿ ಶೋಗಾಗಿ ಪುರುಷನೊಂದಿಗೆ ಒಂದೇ ಹಾಸಿಗೆಯ ಮೇಲೆ ಮಲಗುವ ಮಹಿಳೆ ನಾನಲ್ಲ. ನಾನು ಅಷ್ಟೊಂದು ಕೆಳಮಟ್ಟಕ್ಕೆ ಇಳಿದವಳಲ್ಲ. ನನ್ನ ಘನತೆ ನನಗೆ ಅಮೂಲ್ಯವಾದುದು. ನಾನು ಅದಕ್ಕಿಂತ ಹೆಚ್ಚಿನದನ್ನು ಇಲ್ಲಿಯೇ ಗಳಿಸಬಹುದು ಅನ್ನೋದು ಗೊತ್ತಿದೆ' ಎಂದು ತನುಶ್ರೀ ದತ್ತಾ ಬಿಗ್ಬಾಸ್ ಆಫರ್ ತಿರಸ್ಕರಿಸಿದ ಬಗ್ಗೆ ಹೇಳಿಕೊಂಡಿದ್ದಾರೆ.
'ನಾನು ಆ ರೀತಿಯ ಕಾರ್ಯಕ್ರಮಕ್ಕೆ ಹೋಗುತ್ತೇನೆ ಎಂದು ನೀವು ನಿಜವಾಗಿಯೂ ಭಾವಿಸುತ್ತೀರಾ? ಎಂದು ಕೇಳಿದ್ದಾರೆ. ನಾನು ನನ್ನ ಸ್ವಂತ ಕುಟುಂಬದೊಂದಿಗೆ ಸಹ ಅಲ್ಲಿ ಇರುವುದಿಲ್ಲ. ನನಗೆ ಬಿಗ್ಬಾಸ್ನಲ್ಲಿ ಎಂದಿಗೂ ಆಸಕ್ತಿ ಇಲ್ಲ, ಮುಂದೆಯೂ ಇರಲ್ಲ. ಆ ಕಾರ್ಯಕ್ರಮಕ್ಕೆ ಹೋಗಲು ಅವರು ನನಗೆ ₹1.65 ಕೋಟಿ ಆಫರ್ ನೀಡಿದ್ದಾರೆ. ಮತ್ತೊಬ್ಬ ಬಾಲಿವುಡ್ ಸೆಲೆಬ್ರಿಟಿಗೂ ಅದೇ ಮೊತ್ತದ ಸಂಭಾವನೆ ನೀಡಿದ್ದಾರೆ. ಬಿಗ್ಬಾಸ್ ಸ್ಟೈಲಿಸ್ಟ್ ಕೂಡ ನನಗೆ ಕರೆ ಮಾಡಿ ಮನವಿ ಮಾಡಿಕೊಂಡರು. ನನ್ನ ಆಹಾರಕ್ರಮವನ್ನು ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ರು. ಆದ್ರೆ ಚಂದ್ರನ ಒಂದು ತುಂಡನ್ನು ಕೊಟ್ಟರೂ ನಾನು ಅಲ್ಲಿಗೆ ಬರಲ್ಲ ಎಂದು ಹೇಳಿದೆ' ಎಂದಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications