ಮಕ್ಕಳಿಗೆ ಇನ್ಮುಂದೆ ಥಿಯೇಟರ್ಗೆ ನೋ ಎಂಟ್ರಿ: ಏನಿದು ಹೊಸ ರೂಲ್ಸ್?
ಸಾಮಾನ್ಯವಾಗಿ ಥಿಯೇಟರ್ಗಳಿಗೆ ಮನೆಮಂದಿಯೆಲ್ಲ ಬಂದು ಸಿನಿಮಾ ನೋಡುವ ಪ್ರವೃತ್ತಿ ಮೊದಲಿನಿಂದಲೂ ಇದೆ. ಆದರೆ, ಇನ್ನು ಮಕ್ಕಳಿಗೆ ಥಿಯೇಟರ್ನಲ್ಲಿ ಪ್ರವೇಶ ಸಿಗುವುದಿಲ್ಲ. ಇಂತಹ ನಿಯಮವೊಂದು ಈಗಾಗಲೇ ಜಾರಿಯಾಗಿದೆ. 16 ವರ್ಷದೊಳಗಿನ ಯಾವುದೇ ಮಕ್ಕಳಿಗೆ ರಾತ್ರಿ 11 ಗಂಟೆಯ ನಂತರ ಥಿಯೇಟರ್ ಹಾಗೂ ಮಲ್ಟಿಫ್ಲೆಕ್ಸ್ಗಳಲ್ಲಿ ಸಿನಿಮಾ ವೀಕ್ಷಿಸಲು ಅನುಮತಿ ನೀಡಬಾರದು ಎಂದು ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.
ಅಸಲಿಗೆ ಪಕ್ಕದ ತೆಲಂಗಾಣದಲ್ಲಿ ಈ ರೂಲ್ಸ್ ಬಂದಿದೆ. ಈ ಬಗ್ಗೆ ತೆಲಂಗಾಣ ಹೈಕೋರ್ಟ್ ಖುದ್ದಾಗಿ ಅಲ್ಲಿನ ಸರ್ಕಾರಕ್ಕೆ ಸೂಚನೆ ನೀಡಿದೆ. ಅದರಂತೆ ರಾತ್ರಿ 11 ಗಂಟೆಯ ಮಕ್ಕಳಿಗೆ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್ಗಳಲ್ಲಿ ಚಲನಚಿತ್ರ ವೀಕ್ಷಿಸಲು ಅನುಮತಿ ನೀಡಬಾರದು ಎಂದು ತೆಲಂಗಾಣ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಕೂಡಲೇ ನಿಯಮ ಜಾರಿ ಮಾಡುವಂತೆ ಸರ್ಕಾರಕ್ಕೆ ಹೇಳಿದೆ.

ಇನ್ನು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ತನಕ 16 ವರ್ಷದೊಳಗಿನ ಮಕ್ಕಳಿಗೆ ರಾತ್ರಿ 11 ಗಂಟೆಯ ನಂತರ ಥಿಯೇಟರ್ನಲ್ಲಿ ಸಿನಿಮಾ ವೀಕ್ಷಿಸಲು ಅನುಮತಿ ನೀಡುವುದಿಲ್ಲ ಎಂದು ಖಡಕ್ ಆಗಿ ಹೇಳಿದೆ. ಸಿನಿಮಾಗಳ ಟಿಕೆಟ್ ದರ ಏರಿಕೆ ಕುರಿತಾದ ಅರ್ಜಿಗಳ ವಿಚಾರಣೆ ವೇಳೆ ತೆಲಂಗಾಣ ನ್ಯಾಯಾಲಯವು ಈ ರೀತಿ ನಿಯಮ ಜಾರಿ ಮಾಡುವಂತೆ ಸೂಚಿಸಿದೆ.
ಅಪ್ರಾಪ್ತ ವಯಸ್ಕರಿಗೆ ತಡರಾತ್ರಿವರೆಗೆ ಸಿನಿಮಾ ವೀಕ್ಷಣೆಗೆ ಅನುಮತಿ ಕೊಡಬಾರದು. ಒಂದು ವೇಳೆ ಮಕ್ಕಳನ್ನು ರಾತ್ರಿಯೂ ಸಿನಿಮಾ ನೋಡಲು ಬಿಟ್ಟರೆ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು.

ಹಾಗಾಗಿ ತಡರಾತ್ರಿವರೆಗೆ ಥಿಯೇಟರ್ಗಳಲ್ಲಿ ಮಕ್ಕಳಿಗೆ ಪ್ರವೇಶ ನೀಡಬಾರದು. ಇದನ್ನು ನಿಯಂತ್ರಿಸಲು ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಕೇಳಿದ್ದರು. ಅಲ್ಲದೆ ಇತ್ತೀಚೆಗೆ ಪುಷ್ಪ-2 ಸಿನಿಮಾದ ಪ್ರದರ್ಶನದ ವೇಳೆ ಹೈದರಾಬಾದ್ ಥಿಯೇಟರ್ನಲ್ಲೇ ಸಂಭವಿಸಿದ್ದ ಕಾಲ್ತುಳಿತ ಪ್ರಕರಣವನ್ನು ಅವರು ಕೋರ್ಟ್ ಗಮನಕ್ಕೆ ತಂದಿದ್ದಾರೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟರೆ, ಮಗುವೊಂದು ಗಂಭೀರ ಗಾಯಗೊಂಡಿತ್ತು. ಇದನ್ನು ಕೂಡ ಅವರು ಉಲ್ಲೇಖಿಸಿದ್ದಾರೆ.
ಸದ್ಯ ಥಿಯೇಟರ್ಗಳಲ್ಲಿ ತಡರಾತ್ರಿವರೆಗೂ ಸಿನಿಮಾಗಳ ಪ್ರದರ್ಶನವಿದೆ. ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಈ ನೈಟ್ ಶೋಗೆ ಹೆಚ್ಚಿನ ಜನ ಹೋಗುತ್ತಾರೆ. ಇಡೀ ಕುಟುಂಬ ಸಮೇತರಾಗಿ ಹೋಗಿ ಸಿನಿಮಾ ನೋಡಿ ಬರುವ ಪರಿಪಾಟವಿದೆ. ಆದರೆ, ಇಲ್ಲಿವರೆಗೆ ಮಕ್ಕಳಿಗೆ ತಡರಾತ್ರಿ ಥಿಯೇಟರ್ ಪ್ರವೇಶ ಇಲ್ಲ ಎಂಬ ರೂಲ್ಸ್ ಇರಲಿಲ್ಲ. ಮಲ್ಟಿಪ್ಲೆಕ್ಸ್ಗಳಲ್ಲೂ ಕೊನೆಯ ಪ್ರದರ್ಶನ ಸುಮಾರು ಮಧ್ಯರಾತ್ರಿ ದಾಟಿರುತ್ತದೆ.

ಹೈಕೋರ್ಟ್ ಆದೇಶದ ಮೇರೆಗೆ ತೆಲಂಗಾಣ ಸರ್ಕಾರ ಈ ನಿಯಮವನ್ನು ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪುಷ್ಪ-2 ಸಿನಿಮಾದ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ತೆಲಂಗಾಣ ಸರ್ಕಾರವು ಯಾವುದೇ ಮುಲಾಜಿಲ್ಲದೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿತ್ತು. ಹಾಗಾಗಿ ಇಂತಹ ಘಟನೆಗಳು ಮರಕಳಿಸದಂತೆ ಮಕ್ಕಳಿಗೆ ಥಿಯೇಟರ್ ಪ್ರವೇಶ ನಿರ್ಬಂಧಿಸುವ ಸಾಧ್ಯತೆ ಇದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications