Get Updates
Get notified of breaking news, exclusive insights, and must-see stories!

Jr NTR: ನಟ ಜ್ಯೂನಿಯರ್ ಎನ್‌ಟಿಆರ್ ಬೆಂಗಳೂರು ಭೇಟಿ ವೇಳೆ ಅಭಿಮಾನಿಗಳ ನೂಕುನುಗ್ಗಲು; ಆಸ್ಪತ್ರೆಯ ಎಸ್ಕಲೇಟರ್‌ ಧ್ವಂಸ

ಖ್ಯಾತ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರ ಬೆಂಗಳೂರು ಭೇಟಿ ಭಾರೀ ಅವಾಂತರಕ್ಕೆ ಕಾರಣವಾಯಿತು. ಭಾನುವಾರ (ಮಾರ್ಚ್ 8) ನಗರದ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಸಮಾರಂಭಕ್ಕೆ ನಟ ಆಗಮಿಸಿದ್ದ ವೇಳೆ, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಆಸ್ಪತ್ರೆಯ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ತಮ್ಮ ನೆಚ್ಚಿನ ನಟನನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಸ್ಪತ್ರೆಗೆ ನುಗ್ಗಿದ್ದರಿಂದ ಪರಿಸ್ಥಿತಿ ನಿಯಂತ್ರಣ ತಪ್ಪಿತು. ನೂಕುನುಗ್ಗಲಿನ ಅಬ್ಬರಕ್ಕೆ ಆಸ್ಪತ್ರೆಯ ಒಳಗಿದ್ದ ಎಸ್ಕಲೇಟರ್‌ (ಸ್ವಯಂಚಾಲಿತ ಮೆಟ್ಟಿಲು) ಜಖಂಗೊಂಡಿದ್ದು, ಸಾರ್ವಜನಿಕ ಆಸ್ತಿಗೆ ಹಾನಿಯಾಗಿದೆ.

ಜನದಟ್ಟಣೆ ಎಷ್ಟಿತ್ತೆಂದರೆ, ಎಸ್ಕಲೇಟರ್ ಮೇಲೆ ಅಭಿಮಾನಿಯೊಬ್ಬರು ಬಿದ್ದ ಘಟನೆಯೂ ನಡೆದಿದ್ದು, ಮತ್ತೊಬ್ಬರು ಅವರನ್ನು ರಕ್ಷಿಸಿದ್ದಾರೆ. ಆರಂಭದಲ್ಲಿ ಆಯೋಜಕರು ಮತ್ತು ಖಾಸಗಿ ಭದ್ರತಾ ಸಿಬ್ಬಂದಿ ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟರೂ ಪರಿಸ್ಥಿತಿ ಕೈಮೀರಿತು. ಜನದಟ್ಟಣೆ ಆಸ್ಪತ್ರೆಯ ರೋಗಿಗಳಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ತೀವ್ರ ತೊಂದರೆ ಉಂಟುಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿದರು. ಅಂತಿಮವಾಗಿ ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

Telugu Actor Junior NTR

ಪೊಲೀಸರಿಂದ ಲಾಠಿ ಚಾರ್ಜ್‌

ನೂಕುನುಗ್ಗಲು ಮಿತಿಮೀರಿ ಪರಿಸ್ಥಿತಿ ಕೈಮೀರುತ್ತಿದ್ದಂತೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದರು. ಅಭಿಮಾನಿಗಳ ಹಿಂಡು ಆಸ್ಪತ್ರೆಯ ಒಳಭಾಗಕ್ಕೆ ನುಗ್ಗಲು ಪ್ರಯತ್ನಿಸಿದಾಗ, ಉಂಟಾಗಬಹುದಾದ ದೊಡ್ಡ ಅನಾಹುತವನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟರು. ಜನಸಂದಣಿಯನ್ನು ನಿಯಂತ್ರಿಸಲು ಅಂತಿಮವಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಇದರಿಂದ ಚಲ್ಲಾಪಿಲ್ಲಿಯಾದ ಅಭಿಮಾನಿಗಳನ್ನು ಆಸ್ಪತ್ರೆಯ ಪ್ರದೇಶದಿಂದ ಹೊರಕ್ಕೆ ಕಳುಹಿಸಲಾಯಿತು. ಲಾಠಿ ಪ್ರಹಾರದ ನಂತರ ಪರಿಸ್ಥಿತಿ ತುಸು ತಿಳಿಯಾಯಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ನಟ ಜೂನಿಯರ್ ಎನ್‌ಟಿಆರ್ ಅವರಿಗೆ ಯಾವುದೇ ತೊಂದರೆಯಾಗದಂತೆ ಆಸ್ಪತ್ರೆಯ ಒಳಪ್ರವೇಶಿಸಲು ಅನುವು ಮಾಡಿಕೊಟ್ಟರು.

ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್‌ ಎನ್‌ಟಿಆರ್‌
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್‌ ಎನ್‌ಟಿಆರ್‌

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆಸ್ಪತ್ರೆಯಂತಹ ಸೂಕ್ಷ್ಮ ಪ್ರದೇಶದಲ್ಲಿ ಇಂತಹ ವರ್ತನೆ ತೋರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಭಿಮಾನಿಗಳ ಅತಿರೇಕದ ವರ್ತನೆಯಿಂದಾಗಿ ಆಸ್ಪತ್ರೆಯ ರೋಗಿಗಳಲ್ಲಿ ಆತಂಕ ಮೂಡಿದ್ದು, ಭದ್ರತಾ ವೈಫಲ್ಯದ ಬಗ್ಗೆಯೂ ಚರ್ಚೆಗಳು ಆರಂಭವಾಗಿವೆ. ಆದರೆ ವಿಡಿಯೋಗಳಲ್ಲಿ ನಟ ಎನ್‌ಟಿಆರ್‌ ಅವರು ಆಸ್ಪತ್ರೆಯಲ್ಲಿ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿರುವುದು ಕಾಣಬಹುದು.

ಈ ಘಟನೆಯಲ್ಲಿ ಕೇವಲ ಅಭಿಮಾನಿಗಳನ್ನಷ್ಟೇ ದೂಷಿಸಲು ಸಾಧ್ಯವಿಲ್ಲ. ಇಷ್ಟು ದೊಡ್ಡ ಮಟ್ಟದ ಜನಪ್ರಿಯ ನಟನನ್ನು ಆಹ್ವಾನಿಸುವಾಗ ಆಯೋಜಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ. ತುರ್ತು ಚಿಕಿತ್ಸಾ ವಿಭಾಗವಿರುವ ಆಸ್ಪತ್ರೆಯಲ್ಲಿ ಇಂತಹ ಸಂಭ್ರಮಾಚರಣೆಗೆ ಅವಕಾಶ ನೀಡಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+